Homeಮುಖಪುಟ20 ತಿಂಗಳಿನಿಂದ ಭಾರತದಲ್ಲಿ ಕುಸಿಯುತ್ತಿರುವ ಬಿಜೆಪಿ ಪ್ರಾಬಲ್ಯ: ಜಾಲತಾಣಗಳಲ್ಲಿ ಭಾರೀ ಚರ್ಚೆ

20 ತಿಂಗಳಿನಿಂದ ಭಾರತದಲ್ಲಿ ಕುಸಿಯುತ್ತಿರುವ ಬಿಜೆಪಿ ಪ್ರಾಬಲ್ಯ: ಜಾಲತಾಣಗಳಲ್ಲಿ ಭಾರೀ ಚರ್ಚೆ

ಭಾರತದ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ 71% ನಿಂದ 40%ಗೆ ಬಿಜೆಪಿ ಕುಸಿದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

- Advertisement -
- Advertisement -

ಕಾಂಗ್ರೆಸ್‌ ಮುಕ್ತ ಭಾರತ, ವಿರೋಧ ಪಕ್ಷ ಮುಕ್ತ ಭಾರತ ಎಂದು ಘೋಷಣೆ ಕೂಗುತ್ತಿದ್ದ ಬಿಜೆಪಿಗೆ ಅದೇ ತಿರುಗುಬಾಣವಾಗಿದೆ. ಲೋಕಸಭೆಯಲ್ಲಿ ಅವರು ಭರ್ಜರಿ ಜಯಗಳಿಸಿದರೂ ಕೂಡ, ಕಳೆದ 20 ತಿಂಗಳಿನಲ್ಲಿ ನಡೆದ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲುಂಡಿದ್ದಾರೆ. ಅವರ ಪ್ರಾಬಲ್ಯ ಕುಸಿಯುತ್ತಿದೆ ಎಂದು ಬಹುತೇಕ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಅಲ್ಲೆಲ್ಲಾ ಕಾಂಗ್ರೆಸ್‌ ಜಯಭೇರಿ ಬಾರಿಸಿ ಅಧಿಕಾರ ಸೂತ್ರ ಹಿಡಿದಿದೆ. ಮಿಝೋರಾಂನಲ್ಲಿ ಸ್ಥಳೀಯ ಪಕ್ಷ ಎಂಎನ್‌ಎಫ್‌ ಅಧಿಕಾರಕ್ಕೇರಿದರೆ ತೆಲಂಗಾನದಲ್ಲಿ ಪ್ರಾದೇಶಿಕ ಪಕ್ಷ ಟಿಆರ್‌ಎಸ್‌ ವಿಜಯಪತಾಕೆ ಹಾರಿಸಿತ್ತು. ಅಲ್ಲಿಗೆ ಬಿಜೆಪಿ ಕಥೆ ಮುಗಿದಿತ್ತು.

ಇನ್ನು ಕಳೆದ ತಿಂಗಳು ನಡೆದ ಹರಿಯಾಣ-ಮಹಾರಾಷ್ಟ್ರ ಚುನಾವಣೆಯಲ್ಲಿಯೂ ಸಹ ಬಿಜೆಪಿ ಹೇಳಿಕೊಳ್ಳುವಂತಹ ಸಾಧನೆಯನ್ನೇನೂ ಮಾಡಲಿಲ್ಲ. ಹರಿಯಾಣದಲ್ಲಿ ಕಷ್ಟಪಟ್ಟು ಅಧಿಕಾರವಿಡಿದರೆ, ಮಹಾರಾಷ್ಟ್ರದಲ್ಲಿ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯಲು ಹೋಗಿ ಮುಗ್ಗರಿಸಿಬಿದ್ದಿದೆ.

ಇದನ್ನು ಓದಿ: ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಬಹುದೊಡ್ಡ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡ ನಂತರ ಅದರ ಚಿತ್ರವನ್ನು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಭಾರತದ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ 71% ನಿಂದ 40%ಗೆ ಬಿಜೆಪಿ ಕುಸಿದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡುವವರಿಗೆ, ಈ ಚಿತ್ರ ಕನ್ನಡಿಯಂತಿದೆ. ಸಾರ್ವಜನಿಕರು ನಿರಂತರವಾಗಿ ಸ್ಪಷ್ಟ ಸಂದೇಶಗಳನ್ನು ನೀಡುತ್ತಿದ್ದಾರೆ. ವಿಭಜಕ ಮತ್ತು ನಕಾರಾತ್ಮಕ ಚಿಂತನೆಯನ್ನು ನಿರಾಕರಿಸುತ್ತಾರೆ. ಈ ದೇಶದಲ್ಲಿ ಅನೇಕ ಸಿದ್ಧಾಂತಗಳಿವೆ, ಹೋರಾಟವು ಸೈದ್ಧಾಂತಿಕವಾಗಿರಬೇಕೆ ಹೊರತು ವೈಯಕ್ತಿಕವಾಗಿರಬಾರದು” ಎಂದು ರಾಜಸ್ಥಾನದ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಬಿಜೆಪಿ ನಮ್ಮ ರಾಷ್ಟ್ರಕ್ಕೆ ಶಾಪವಾಗಿದೆ ಎಂದು ಜನರು ಈಗ ಅರಿತುಕೊಂಡಿದ್ದಾರೆ.

ರಾಷ್ಟ್ರೀಯವಾದಿಗಳಂತೆ ಮುಖವಾಡ ತೊಟ್ಟು ನಮ್ಮನ್ನು ವಿಭಜಿಸುವುದು ಮತ್ತು ದೇಶಭಕ್ತಿಯ ಹೆಸರಿನಲ್ಲಿ ರಾಷ್ಟ್ರವನ್ನು ಲೂಟಿ ಮಾಡುವುದು ಅವರ ಏಕೈಕ ಉದ್ದೇಶವಾಗಿದೆ.

ಈ ಭ್ರಷ್ಟ ಫ್ಯಾಸಿಸ್ಟ್‌ಗಳಿಂದ ಭಾರತವನ್ನು ರಕ್ಷಿಸಿಕೊಳ್ಳುವುದಕ್ಕೆ ಇದು ಸರಿಯಾದ ಸಮಯ ಎಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನ ಬರೆದಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟ್ಟರ್‌ನಲ್ಲಿ ಬಿಜೆಪಿ ಮುಕ್ತ ಭಾರತ ಕೂಡ ಟ್ರೆಂಡಿಂಗ್‌ ಆಗಿದೆ.

ಮುಂದಿನ ತಿಂಗಳು ಜಾರ್ಖಂಡ್‌ನಲ್ಲಿ ಚುನಾವಣೆ ನಡೆಯಲಿದ್ದು ಅಲ್ಲಿಯೂ ಬಿಜೆಪಿಗೆ ಕಷ್ಟಕರವಾಗಲಿದೆ. ಹಾಗೆಯೇ ಕರ್ನಾಟಕದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು ಅಲ್ಲಿಯು ಬಿಜೆಪಿ 08ಕ್ಕಿಂತ ಕಡಿಮೆ ಸ್ಥಾನ ಗೆದ್ದಲ್ಲಿ ಅದು ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...