Homeಮುಖಪುಟ20 ತಿಂಗಳಿನಿಂದ ಭಾರತದಲ್ಲಿ ಕುಸಿಯುತ್ತಿರುವ ಬಿಜೆಪಿ ಪ್ರಾಬಲ್ಯ: ಜಾಲತಾಣಗಳಲ್ಲಿ ಭಾರೀ ಚರ್ಚೆ

20 ತಿಂಗಳಿನಿಂದ ಭಾರತದಲ್ಲಿ ಕುಸಿಯುತ್ತಿರುವ ಬಿಜೆಪಿ ಪ್ರಾಬಲ್ಯ: ಜಾಲತಾಣಗಳಲ್ಲಿ ಭಾರೀ ಚರ್ಚೆ

ಭಾರತದ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ 71% ನಿಂದ 40%ಗೆ ಬಿಜೆಪಿ ಕುಸಿದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

- Advertisement -
- Advertisement -

ಕಾಂಗ್ರೆಸ್‌ ಮುಕ್ತ ಭಾರತ, ವಿರೋಧ ಪಕ್ಷ ಮುಕ್ತ ಭಾರತ ಎಂದು ಘೋಷಣೆ ಕೂಗುತ್ತಿದ್ದ ಬಿಜೆಪಿಗೆ ಅದೇ ತಿರುಗುಬಾಣವಾಗಿದೆ. ಲೋಕಸಭೆಯಲ್ಲಿ ಅವರು ಭರ್ಜರಿ ಜಯಗಳಿಸಿದರೂ ಕೂಡ, ಕಳೆದ 20 ತಿಂಗಳಿನಲ್ಲಿ ನಡೆದ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲುಂಡಿದ್ದಾರೆ. ಅವರ ಪ್ರಾಬಲ್ಯ ಕುಸಿಯುತ್ತಿದೆ ಎಂದು ಬಹುತೇಕ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಅಲ್ಲೆಲ್ಲಾ ಕಾಂಗ್ರೆಸ್‌ ಜಯಭೇರಿ ಬಾರಿಸಿ ಅಧಿಕಾರ ಸೂತ್ರ ಹಿಡಿದಿದೆ. ಮಿಝೋರಾಂನಲ್ಲಿ ಸ್ಥಳೀಯ ಪಕ್ಷ ಎಂಎನ್‌ಎಫ್‌ ಅಧಿಕಾರಕ್ಕೇರಿದರೆ ತೆಲಂಗಾನದಲ್ಲಿ ಪ್ರಾದೇಶಿಕ ಪಕ್ಷ ಟಿಆರ್‌ಎಸ್‌ ವಿಜಯಪತಾಕೆ ಹಾರಿಸಿತ್ತು. ಅಲ್ಲಿಗೆ ಬಿಜೆಪಿ ಕಥೆ ಮುಗಿದಿತ್ತು.

ಇನ್ನು ಕಳೆದ ತಿಂಗಳು ನಡೆದ ಹರಿಯಾಣ-ಮಹಾರಾಷ್ಟ್ರ ಚುನಾವಣೆಯಲ್ಲಿಯೂ ಸಹ ಬಿಜೆಪಿ ಹೇಳಿಕೊಳ್ಳುವಂತಹ ಸಾಧನೆಯನ್ನೇನೂ ಮಾಡಲಿಲ್ಲ. ಹರಿಯಾಣದಲ್ಲಿ ಕಷ್ಟಪಟ್ಟು ಅಧಿಕಾರವಿಡಿದರೆ, ಮಹಾರಾಷ್ಟ್ರದಲ್ಲಿ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯಲು ಹೋಗಿ ಮುಗ್ಗರಿಸಿಬಿದ್ದಿದೆ.

ಇದನ್ನು ಓದಿ: ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಬಹುದೊಡ್ಡ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡ ನಂತರ ಅದರ ಚಿತ್ರವನ್ನು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಭಾರತದ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ 71% ನಿಂದ 40%ಗೆ ಬಿಜೆಪಿ ಕುಸಿದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡುವವರಿಗೆ, ಈ ಚಿತ್ರ ಕನ್ನಡಿಯಂತಿದೆ. ಸಾರ್ವಜನಿಕರು ನಿರಂತರವಾಗಿ ಸ್ಪಷ್ಟ ಸಂದೇಶಗಳನ್ನು ನೀಡುತ್ತಿದ್ದಾರೆ. ವಿಭಜಕ ಮತ್ತು ನಕಾರಾತ್ಮಕ ಚಿಂತನೆಯನ್ನು ನಿರಾಕರಿಸುತ್ತಾರೆ. ಈ ದೇಶದಲ್ಲಿ ಅನೇಕ ಸಿದ್ಧಾಂತಗಳಿವೆ, ಹೋರಾಟವು ಸೈದ್ಧಾಂತಿಕವಾಗಿರಬೇಕೆ ಹೊರತು ವೈಯಕ್ತಿಕವಾಗಿರಬಾರದು” ಎಂದು ರಾಜಸ್ಥಾನದ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಬಿಜೆಪಿ ನಮ್ಮ ರಾಷ್ಟ್ರಕ್ಕೆ ಶಾಪವಾಗಿದೆ ಎಂದು ಜನರು ಈಗ ಅರಿತುಕೊಂಡಿದ್ದಾರೆ.

ರಾಷ್ಟ್ರೀಯವಾದಿಗಳಂತೆ ಮುಖವಾಡ ತೊಟ್ಟು ನಮ್ಮನ್ನು ವಿಭಜಿಸುವುದು ಮತ್ತು ದೇಶಭಕ್ತಿಯ ಹೆಸರಿನಲ್ಲಿ ರಾಷ್ಟ್ರವನ್ನು ಲೂಟಿ ಮಾಡುವುದು ಅವರ ಏಕೈಕ ಉದ್ದೇಶವಾಗಿದೆ.

ಈ ಭ್ರಷ್ಟ ಫ್ಯಾಸಿಸ್ಟ್‌ಗಳಿಂದ ಭಾರತವನ್ನು ರಕ್ಷಿಸಿಕೊಳ್ಳುವುದಕ್ಕೆ ಇದು ಸರಿಯಾದ ಸಮಯ ಎಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನ ಬರೆದಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟ್ಟರ್‌ನಲ್ಲಿ ಬಿಜೆಪಿ ಮುಕ್ತ ಭಾರತ ಕೂಡ ಟ್ರೆಂಡಿಂಗ್‌ ಆಗಿದೆ.

ಮುಂದಿನ ತಿಂಗಳು ಜಾರ್ಖಂಡ್‌ನಲ್ಲಿ ಚುನಾವಣೆ ನಡೆಯಲಿದ್ದು ಅಲ್ಲಿಯೂ ಬಿಜೆಪಿಗೆ ಕಷ್ಟಕರವಾಗಲಿದೆ. ಹಾಗೆಯೇ ಕರ್ನಾಟಕದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು ಅಲ್ಲಿಯು ಬಿಜೆಪಿ 08ಕ್ಕಿಂತ ಕಡಿಮೆ ಸ್ಥಾನ ಗೆದ್ದಲ್ಲಿ ಅದು ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...