Homeಮುಖಪುಟಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

- Advertisement -
- Advertisement -

ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಗೂಗಲ್ ಸರ್ಚ್ ಮತ್ತು ಯೂಟ್ಯೂಬ್ ಸೇರಿದಂತೆ ಗೂಗಲ್‌ನ ಡಿಸ್‌ಪ್ಲೇ ನೆಟ್‌ವರ್ಕ್ ಮತ್ತು ಆಲ್ಫಾಬೆಟ್ ಪ್ಲಾಟ್‌ಫಾರ್ಮ್‌ಗಳಿಗೆ ಸಾವಿರಾರು ರಾಜಕೀಯ ಜಾಹೀರಾತುಗಳಿಗೆ 30 ದಿನಗಳಲ್ಲಿ 30 ಕೋಟಿ ರೂ. ವೆಚ್ಚವನ್ನು ಮಾಡಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.

2019ರ ಚುನಾವಣೆಯ ವೇಳೆ ಫೆಬ್ರವರಿಯಿಂದ- ಮೇವರೆಗೆ ನಾಲ್ಕು ತಿಂಗಳುಗಳ ನಡುವೆ ಜಾಹೀರಾತಿಗಾಗಿ ಮಾಡಿದ ವೆಚ್ಚಕ್ಕಿಂತ ಇದು ದುಪ್ಪಟ್ಟಾಗಿದೆ. 2019ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ನಾಲ್ಕು ತಿಂಗಳ ಅವಧಿಯಲ್ಲಿ ಪಕ್ಷವು ಕೇವಲ 12.3 ಕೋಟಿ ರೂ.ವೆಚ್ಚವನ್ನು ಮಾಡಿತ್ತು. ಅದೇ ಅವಧಿಯಲ್ಲಿ ಪ್ರಮುಖ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ವೆಚ್ಚ 2.99 ಕೋಟಿ ರೂ.ಆಗಿತ್ತು. ಫೆಬ್ರವರಿ 2024ರಲ್ಲಿ ಕಾಂಗ್ರೆಸ್‌ ಪಕ್ಷವು Google ಜಾಹೀರಾತುಗಳ ಮೂಲಕ ಯಾವುದೇ ಸಂದೇಶವನ್ನುಪ್ರಚಾರ ಮಾಡಿಲ್ಲ ಎನ್ನುವುದು ತಿಳಿಯುತ್ತದೆ.

30 ದಿನಗಳಲ್ಲಿ ಅಂದರೆ ಜನವರಿ 29ರಿಂದ ಫೆಬ್ರವರಿ 28ರ ನಡುವೆ ಜಾಹೀರಾತಿಗಾಗಿ ಬಿಜೆಪಿ 29.7 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಗೂಗಲ್ ಜಾಹೀರಾತುಗಳ ಕುರಿತ ಡೇಟಾ ತೋರಿಸುತ್ತದೆ. ಗೂಗಲ್‌ 12,600ಕ್ಕೂ ಹೆಚ್ಚು ಜಾಹೀರಾತುಗಳನ್ನು ಸ್ಟ್ರೀಮ್ ಮಾಡಿದೆ. ಹೆಚ್ಚಾಗಿ ವೀಡಿಯೊಗಳನ್ನು ಅಂದರೆ 75%ದಷ್ಟು ವಿಡಿಯೋ ಜಾಹೀರಾತುಗಳನ್ನು ಪ್ರಸಾರ ಮಾಡಿದೆ. ಇದು ಬಹು ಭಾರತೀಯ ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರವನ್ನು ಮಾಡುತ್ತದೆ. ಇವುಗಳಲ್ಲಿ ಹೆಚ್ಚಿನವು ವೀಡಿಯೊ ಜಾಹೀರಾತುಗಳಾಗಿದ್ದು, 50%ಕ್ಕಿಂತ ಹೆಚ್ಚು ಜಾಹೀರಾತುಗಳನ್ನು ಪ್ಲಾಟ್‌ಫಾರ್ಮ್ ನೀತಿಯ ಉಲ್ಲಂಘನೆಗಾಗಿ Googleನಿಂದ ತೆಗೆದುಹಾಕಲಾಗಿದೆ.

30 ದಿನಗಳಲ್ಲಿ ಸುಮಾರು 30 ಕೋಟಿ ರೂಪಾಯಿಗಳ ವೆಚ್ಚವು ಭಾರತದಲ್ಲಿ ಆನ್‌ಲೈನ್ ರಾಜಕೀಯ ಜಾಹೀರಾತುಗಳ ಹೆಚ್ಚಳದ ಗಮನಾರ್ಹ ಸೂಚಕವಾಗಿದೆ. 2019 ರಿಂದ 52,000ಕ್ಕೂ ಹೆಚ್ಚು ಜಾಹೀರಾತುಗಳ ಮೂಲಕ ತನ್ನ ಸಂದೇಶಗಳನ್ನು ಹರಡಲು ಬಿಜೆಪಿ ಇದುವರೆಗೆ 79.16 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದೆ, ಇತ್ತೀಚಿನ ಬ್ಯುಸಿನೆಸ್ ಲೈನ್ ವರದಿಯು ಫೆಬ್ರವರಿ 2019 ಮತ್ತು ಫೆಬ್ರವರಿ 2023ರ ನಡುವೆ ಫೇಸ್‌ಬುಕ್ ಜಾಹೀರಾತುಗಳಿಗಾಗಿ ಬಿಜೆಪಿ 33 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ತಿಳಿಸುತ್ತದೆ.

ಕಳೆದ ತಿಂಗಳಲ್ಲಿ ಹೆಚ್ಚಿನ Google ಜಾಹೀರಾತುಗಳು ಬಿಜೆಪಿ ಅಥವಾ ಅದರ ಮೈತ್ರಿ ಪಾಲುದಾರ ಆಡಳಿತವಿರುವ ಉತ್ತರ ಭಾರತದ ರಾಜ್ಯಗಳ ಮತದಾರರನ್ನು ಗುರಿಯಾಗಿಸಿಕೊಂಡಿವೆ. ಕಳೆದ 30 ದಿನಗಳಲ್ಲಿ ಒಂದು ಕೋಟಿ ವೀಕ್ಷಣೆಯ ಒಂದು ವಿಡಿಯೋಗೆ 30 ಲಕ್ಷಕ್ಕೂ ಅಧಿಕ ವ್ಯಯಿಸಲಾಗಿದೆ. ಬಿಜೆಪಿ 10 ಲಕ್ಷದಿಂದ 30 ಲಕ್ಷದವರೆಗೆ 50 ವೀಡಿಯೋಗಳಿಗೆ ವ್ಯಯಿಸಿದೆ, 100 ವೀಡಿಯೋಗಳಿಗೆ 5 ಲಕ್ಷದಿಂದ 10 ಲಕ್ಷದವರೆಗೆ, 124 ವೀಡಿಯೊಗಳಿಗೆ 2.5 ಲಕ್ಷದಿಂದ 5 ಲಕ್ಷದವರೆಗೆ ಮತ್ತು 109 ವಿಡಿಯೋಗಳಿಗೆ 1 ಲಕ್ಷದಿಂದ 2.5 ಲಕ್ಷದವರೆಗೆ ವ್ಯಯಿಸಲಾಗಿದೆ ಎಂದು ವರದಿ ತಿಳಿಸಿದೆ.

2019ರಿಂದ ಕಳೆದ ಐದು ವರ್ಷಗಳ ದತ್ತಾಂಶವು, ಗೂಗಲ್ ಜಾಹೀರಾತುಗಳಿಗಾಗಿ ಬಿಜೆಪಿ ಹೆಚ್ಚು ಹಣವನ್ನು ಖರ್ಚು ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ  8.9 ಕೋಟಿ ವ್ಯಯಿಸಿ ಅಗ್ರಸ್ಥಾನದಲ್ಲಿದೆ ಎನ್ನುವುದನ್ನು ತೋರಿಸುತ್ತದೆ. ಕರ್ನಾಟಕದ ನಂತರ ಉತ್ತರಪ್ರದೇಶ 7.76 ಕೋಟಿ ರೂ. ವ್ಯಯಿಸಿದೆ, ದೆಹಲಿ 6.84 ಕೋಟಿ ವ್ಯಯಿಸಿದೆ, ಗುಜರಾತ್ 6.1 ಕೋಟಿ ರೂ. ವ್ಯಯಿಸಿದೆ, ಮಧ್ಯಪ್ರದೇಶ 5.9 ಕೋಟಿ ರೂ. ವ್ಯಯಿಸಿದೆ, ಬಿಹಾರ  4.38 ಕೋಟಿ ರೂ.ವ್ಯಯಿಸಿದೆ, ಪಶ್ಚಿಮ ಬಂಗಾಳ 3.46 ಕೋಟಿ ರೂ.ವ್ಯಯಿಸಿದೆ, ತೆಲಂಗಾಣ 3.18 ಕೋಟಿ ರೂ ವ್ಯಯಿಸಿದೆ, ಮಹಾರಾಷ್ಟ್ರ 3 ಕೋಟಿ ಮತ್ತು ಹರಿಯಾಣ 2.6 ಕೋಟಿ ರೂ.ವ್ಯಯಿಸಿದೆ ಎಂದು ವರದಿ ತಿಳಿಸಿದೆ.

50% ಕ್ಕಿಂತ ಹೆಚ್ಚು ಬಿಜೆಪಿ ವೀಡಿಯೊ ಜಾಹೀರಾತುಗಳನ್ನು ತೆಗೆದು ಹಾಕಿದ ಗೂಗಲ್‌

Googleನ ಜಾಹೀರಾತು ನೀತಿ ಉಲ್ಲಂಘನೆಗಾಗಿ ಬಿಜೆಪಿಯ 50%ಕ್ಕಿಂತ ಹೆಚ್ಚು ವೀಡಿಯೊಗಳನ್ನು Googleನಿಂದ ತೆಗೆದು ಹಾಕಲಾಗಿದೆ. Google ಜಾಹೀರಾತುದಾರರಿಗೆ ಮೂರು ಮುಖ್ಯ ಫ್ಲ್ಯಾಟ್‌ ಫಾರ್ಮ್‌ ನೀಡುತ್ತದೆ. Google ಹುಡುಕಾಟ, ವೆಬ್‌ಸೈಟ್‌ಗಳು ಮತ್ತು ಅಪ್ಲಿಕೇಶನ್‌ಗಳು ಮತ್ತು YouTube ಮೂಲಕ ಜಾಹೀರಾತು ಪ್ರಚಾರ ಮಾಡುತ್ತದೆ. ಅವುಗಳನ್ನು ವಯಸ್ಸು, ಲಿಂಗ ಮತ್ತು ಪೋಸ್ಟಲ್ ಕೋಡ್ ಸೇರಿ ನಿಯಮಗಳಂತೆ ಪ್ರೇಕ್ಷಕರನ್ನು ಸೀಮಿತಗೊಳಿಸುತ್ತದೆ. ಬಿಜೆಪಿಯ ವೀಡಿಯೊಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಏಕೆಂದರೆ Google ಕಾರಣವನ್ನು ಬಹಿರಂಗಪಡಿಸುವುದಿಲ್ಲ ಮತ್ತು ಕೇವಲ ‘ನೀತಿ ಉಲ್ಲಂಘನೆಗಾಗಿ’ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳುತ್ತದೆ. ಅಳಿಸಿದ ವೀಡಿಯೊಗಳನ್ನು ವೀಕ್ಷಿಸಲು ಇದು ಬಳಕೆದಾರರಿಗೆ ಅನುಮತಿಸುವುದಿಲ್ಲ.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿರುವ ಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು ಸೇರಿದಂತೆ ಅಂತರ್ಜಾಲದಲ್ಲಿ ಪೋಸ್ಟ್ ಮಾಡಲಾದ ವಿಷಯಕ್ಕೆ ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಸೂಚನೆಗಳು ಅನ್ವಯಿಸುತ್ತವೆ. 2019ರಲ್ಲಿ ಏಪ್ರಿಲ್ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದವು. ಬಿಜೆಪಿಯು ಏಪ್ರಿಲ್ 6 ರಿಂದ ಮೇ 17 ರವರೆಗೆ ನಿರಂತರವಾಗಿ ರಾಜಕೀಯ ಜಾಹೀರಾತುಗಳೊಂದಿಗೆ ಅನೇಕ ರಾಜ್ಯಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರಿದೆ.

ಇದನ್ನು ಓದಿ: 8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...