Homeಮುಖಪುಟಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

- Advertisement -
- Advertisement -

ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಗೂಗಲ್ ಸರ್ಚ್ ಮತ್ತು ಯೂಟ್ಯೂಬ್ ಸೇರಿದಂತೆ ಗೂಗಲ್‌ನ ಡಿಸ್‌ಪ್ಲೇ ನೆಟ್‌ವರ್ಕ್ ಮತ್ತು ಆಲ್ಫಾಬೆಟ್ ಪ್ಲಾಟ್‌ಫಾರ್ಮ್‌ಗಳಿಗೆ ಸಾವಿರಾರು ರಾಜಕೀಯ ಜಾಹೀರಾತುಗಳಿಗೆ 30 ದಿನಗಳಲ್ಲಿ 30 ಕೋಟಿ ರೂ. ವೆಚ್ಚವನ್ನು ಮಾಡಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.

2019ರ ಚುನಾವಣೆಯ ವೇಳೆ ಫೆಬ್ರವರಿಯಿಂದ- ಮೇವರೆಗೆ ನಾಲ್ಕು ತಿಂಗಳುಗಳ ನಡುವೆ ಜಾಹೀರಾತಿಗಾಗಿ ಮಾಡಿದ ವೆಚ್ಚಕ್ಕಿಂತ ಇದು ದುಪ್ಪಟ್ಟಾಗಿದೆ. 2019ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ನಾಲ್ಕು ತಿಂಗಳ ಅವಧಿಯಲ್ಲಿ ಪಕ್ಷವು ಕೇವಲ 12.3 ಕೋಟಿ ರೂ.ವೆಚ್ಚವನ್ನು ಮಾಡಿತ್ತು. ಅದೇ ಅವಧಿಯಲ್ಲಿ ಪ್ರಮುಖ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ವೆಚ್ಚ 2.99 ಕೋಟಿ ರೂ.ಆಗಿತ್ತು. ಫೆಬ್ರವರಿ 2024ರಲ್ಲಿ ಕಾಂಗ್ರೆಸ್‌ ಪಕ್ಷವು Google ಜಾಹೀರಾತುಗಳ ಮೂಲಕ ಯಾವುದೇ ಸಂದೇಶವನ್ನುಪ್ರಚಾರ ಮಾಡಿಲ್ಲ ಎನ್ನುವುದು ತಿಳಿಯುತ್ತದೆ.

30 ದಿನಗಳಲ್ಲಿ ಅಂದರೆ ಜನವರಿ 29ರಿಂದ ಫೆಬ್ರವರಿ 28ರ ನಡುವೆ ಜಾಹೀರಾತಿಗಾಗಿ ಬಿಜೆಪಿ 29.7 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಗೂಗಲ್ ಜಾಹೀರಾತುಗಳ ಕುರಿತ ಡೇಟಾ ತೋರಿಸುತ್ತದೆ. ಗೂಗಲ್‌ 12,600ಕ್ಕೂ ಹೆಚ್ಚು ಜಾಹೀರಾತುಗಳನ್ನು ಸ್ಟ್ರೀಮ್ ಮಾಡಿದೆ. ಹೆಚ್ಚಾಗಿ ವೀಡಿಯೊಗಳನ್ನು ಅಂದರೆ 75%ದಷ್ಟು ವಿಡಿಯೋ ಜಾಹೀರಾತುಗಳನ್ನು ಪ್ರಸಾರ ಮಾಡಿದೆ. ಇದು ಬಹು ಭಾರತೀಯ ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರವನ್ನು ಮಾಡುತ್ತದೆ. ಇವುಗಳಲ್ಲಿ ಹೆಚ್ಚಿನವು ವೀಡಿಯೊ ಜಾಹೀರಾತುಗಳಾಗಿದ್ದು, 50%ಕ್ಕಿಂತ ಹೆಚ್ಚು ಜಾಹೀರಾತುಗಳನ್ನು ಪ್ಲಾಟ್‌ಫಾರ್ಮ್ ನೀತಿಯ ಉಲ್ಲಂಘನೆಗಾಗಿ Googleನಿಂದ ತೆಗೆದುಹಾಕಲಾಗಿದೆ.

30 ದಿನಗಳಲ್ಲಿ ಸುಮಾರು 30 ಕೋಟಿ ರೂಪಾಯಿಗಳ ವೆಚ್ಚವು ಭಾರತದಲ್ಲಿ ಆನ್‌ಲೈನ್ ರಾಜಕೀಯ ಜಾಹೀರಾತುಗಳ ಹೆಚ್ಚಳದ ಗಮನಾರ್ಹ ಸೂಚಕವಾಗಿದೆ. 2019 ರಿಂದ 52,000ಕ್ಕೂ ಹೆಚ್ಚು ಜಾಹೀರಾತುಗಳ ಮೂಲಕ ತನ್ನ ಸಂದೇಶಗಳನ್ನು ಹರಡಲು ಬಿಜೆಪಿ ಇದುವರೆಗೆ 79.16 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದೆ, ಇತ್ತೀಚಿನ ಬ್ಯುಸಿನೆಸ್ ಲೈನ್ ವರದಿಯು ಫೆಬ್ರವರಿ 2019 ಮತ್ತು ಫೆಬ್ರವರಿ 2023ರ ನಡುವೆ ಫೇಸ್‌ಬುಕ್ ಜಾಹೀರಾತುಗಳಿಗಾಗಿ ಬಿಜೆಪಿ 33 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ತಿಳಿಸುತ್ತದೆ.

ಕಳೆದ ತಿಂಗಳಲ್ಲಿ ಹೆಚ್ಚಿನ Google ಜಾಹೀರಾತುಗಳು ಬಿಜೆಪಿ ಅಥವಾ ಅದರ ಮೈತ್ರಿ ಪಾಲುದಾರ ಆಡಳಿತವಿರುವ ಉತ್ತರ ಭಾರತದ ರಾಜ್ಯಗಳ ಮತದಾರರನ್ನು ಗುರಿಯಾಗಿಸಿಕೊಂಡಿವೆ. ಕಳೆದ 30 ದಿನಗಳಲ್ಲಿ ಒಂದು ಕೋಟಿ ವೀಕ್ಷಣೆಯ ಒಂದು ವಿಡಿಯೋಗೆ 30 ಲಕ್ಷಕ್ಕೂ ಅಧಿಕ ವ್ಯಯಿಸಲಾಗಿದೆ. ಬಿಜೆಪಿ 10 ಲಕ್ಷದಿಂದ 30 ಲಕ್ಷದವರೆಗೆ 50 ವೀಡಿಯೋಗಳಿಗೆ ವ್ಯಯಿಸಿದೆ, 100 ವೀಡಿಯೋಗಳಿಗೆ 5 ಲಕ್ಷದಿಂದ 10 ಲಕ್ಷದವರೆಗೆ, 124 ವೀಡಿಯೊಗಳಿಗೆ 2.5 ಲಕ್ಷದಿಂದ 5 ಲಕ್ಷದವರೆಗೆ ಮತ್ತು 109 ವಿಡಿಯೋಗಳಿಗೆ 1 ಲಕ್ಷದಿಂದ 2.5 ಲಕ್ಷದವರೆಗೆ ವ್ಯಯಿಸಲಾಗಿದೆ ಎಂದು ವರದಿ ತಿಳಿಸಿದೆ.

2019ರಿಂದ ಕಳೆದ ಐದು ವರ್ಷಗಳ ದತ್ತಾಂಶವು, ಗೂಗಲ್ ಜಾಹೀರಾತುಗಳಿಗಾಗಿ ಬಿಜೆಪಿ ಹೆಚ್ಚು ಹಣವನ್ನು ಖರ್ಚು ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ  8.9 ಕೋಟಿ ವ್ಯಯಿಸಿ ಅಗ್ರಸ್ಥಾನದಲ್ಲಿದೆ ಎನ್ನುವುದನ್ನು ತೋರಿಸುತ್ತದೆ. ಕರ್ನಾಟಕದ ನಂತರ ಉತ್ತರಪ್ರದೇಶ 7.76 ಕೋಟಿ ರೂ. ವ್ಯಯಿಸಿದೆ, ದೆಹಲಿ 6.84 ಕೋಟಿ ವ್ಯಯಿಸಿದೆ, ಗುಜರಾತ್ 6.1 ಕೋಟಿ ರೂ. ವ್ಯಯಿಸಿದೆ, ಮಧ್ಯಪ್ರದೇಶ 5.9 ಕೋಟಿ ರೂ. ವ್ಯಯಿಸಿದೆ, ಬಿಹಾರ  4.38 ಕೋಟಿ ರೂ.ವ್ಯಯಿಸಿದೆ, ಪಶ್ಚಿಮ ಬಂಗಾಳ 3.46 ಕೋಟಿ ರೂ.ವ್ಯಯಿಸಿದೆ, ತೆಲಂಗಾಣ 3.18 ಕೋಟಿ ರೂ ವ್ಯಯಿಸಿದೆ, ಮಹಾರಾಷ್ಟ್ರ 3 ಕೋಟಿ ಮತ್ತು ಹರಿಯಾಣ 2.6 ಕೋಟಿ ರೂ.ವ್ಯಯಿಸಿದೆ ಎಂದು ವರದಿ ತಿಳಿಸಿದೆ.

50% ಕ್ಕಿಂತ ಹೆಚ್ಚು ಬಿಜೆಪಿ ವೀಡಿಯೊ ಜಾಹೀರಾತುಗಳನ್ನು ತೆಗೆದು ಹಾಕಿದ ಗೂಗಲ್‌

Googleನ ಜಾಹೀರಾತು ನೀತಿ ಉಲ್ಲಂಘನೆಗಾಗಿ ಬಿಜೆಪಿಯ 50%ಕ್ಕಿಂತ ಹೆಚ್ಚು ವೀಡಿಯೊಗಳನ್ನು Googleನಿಂದ ತೆಗೆದು ಹಾಕಲಾಗಿದೆ. Google ಜಾಹೀರಾತುದಾರರಿಗೆ ಮೂರು ಮುಖ್ಯ ಫ್ಲ್ಯಾಟ್‌ ಫಾರ್ಮ್‌ ನೀಡುತ್ತದೆ. Google ಹುಡುಕಾಟ, ವೆಬ್‌ಸೈಟ್‌ಗಳು ಮತ್ತು ಅಪ್ಲಿಕೇಶನ್‌ಗಳು ಮತ್ತು YouTube ಮೂಲಕ ಜಾಹೀರಾತು ಪ್ರಚಾರ ಮಾಡುತ್ತದೆ. ಅವುಗಳನ್ನು ವಯಸ್ಸು, ಲಿಂಗ ಮತ್ತು ಪೋಸ್ಟಲ್ ಕೋಡ್ ಸೇರಿ ನಿಯಮಗಳಂತೆ ಪ್ರೇಕ್ಷಕರನ್ನು ಸೀಮಿತಗೊಳಿಸುತ್ತದೆ. ಬಿಜೆಪಿಯ ವೀಡಿಯೊಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಏಕೆಂದರೆ Google ಕಾರಣವನ್ನು ಬಹಿರಂಗಪಡಿಸುವುದಿಲ್ಲ ಮತ್ತು ಕೇವಲ ‘ನೀತಿ ಉಲ್ಲಂಘನೆಗಾಗಿ’ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳುತ್ತದೆ. ಅಳಿಸಿದ ವೀಡಿಯೊಗಳನ್ನು ವೀಕ್ಷಿಸಲು ಇದು ಬಳಕೆದಾರರಿಗೆ ಅನುಮತಿಸುವುದಿಲ್ಲ.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿರುವ ಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು ಸೇರಿದಂತೆ ಅಂತರ್ಜಾಲದಲ್ಲಿ ಪೋಸ್ಟ್ ಮಾಡಲಾದ ವಿಷಯಕ್ಕೆ ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಸೂಚನೆಗಳು ಅನ್ವಯಿಸುತ್ತವೆ. 2019ರಲ್ಲಿ ಏಪ್ರಿಲ್ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದವು. ಬಿಜೆಪಿಯು ಏಪ್ರಿಲ್ 6 ರಿಂದ ಮೇ 17 ರವರೆಗೆ ನಿರಂತರವಾಗಿ ರಾಜಕೀಯ ಜಾಹೀರಾತುಗಳೊಂದಿಗೆ ಅನೇಕ ರಾಜ್ಯಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರಿದೆ.

ಇದನ್ನು ಓದಿ: 8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...