Homeಮುಖಪುಟಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

- Advertisement -
- Advertisement -

ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಗೂಗಲ್ ಸರ್ಚ್ ಮತ್ತು ಯೂಟ್ಯೂಬ್ ಸೇರಿದಂತೆ ಗೂಗಲ್‌ನ ಡಿಸ್‌ಪ್ಲೇ ನೆಟ್‌ವರ್ಕ್ ಮತ್ತು ಆಲ್ಫಾಬೆಟ್ ಪ್ಲಾಟ್‌ಫಾರ್ಮ್‌ಗಳಿಗೆ ಸಾವಿರಾರು ರಾಜಕೀಯ ಜಾಹೀರಾತುಗಳಿಗೆ 30 ದಿನಗಳಲ್ಲಿ 30 ಕೋಟಿ ರೂ. ವೆಚ್ಚವನ್ನು ಮಾಡಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.

2019ರ ಚುನಾವಣೆಯ ವೇಳೆ ಫೆಬ್ರವರಿಯಿಂದ- ಮೇವರೆಗೆ ನಾಲ್ಕು ತಿಂಗಳುಗಳ ನಡುವೆ ಜಾಹೀರಾತಿಗಾಗಿ ಮಾಡಿದ ವೆಚ್ಚಕ್ಕಿಂತ ಇದು ದುಪ್ಪಟ್ಟಾಗಿದೆ. 2019ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ನಾಲ್ಕು ತಿಂಗಳ ಅವಧಿಯಲ್ಲಿ ಪಕ್ಷವು ಕೇವಲ 12.3 ಕೋಟಿ ರೂ.ವೆಚ್ಚವನ್ನು ಮಾಡಿತ್ತು. ಅದೇ ಅವಧಿಯಲ್ಲಿ ಪ್ರಮುಖ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ವೆಚ್ಚ 2.99 ಕೋಟಿ ರೂ.ಆಗಿತ್ತು. ಫೆಬ್ರವರಿ 2024ರಲ್ಲಿ ಕಾಂಗ್ರೆಸ್‌ ಪಕ್ಷವು Google ಜಾಹೀರಾತುಗಳ ಮೂಲಕ ಯಾವುದೇ ಸಂದೇಶವನ್ನುಪ್ರಚಾರ ಮಾಡಿಲ್ಲ ಎನ್ನುವುದು ತಿಳಿಯುತ್ತದೆ.

30 ದಿನಗಳಲ್ಲಿ ಅಂದರೆ ಜನವರಿ 29ರಿಂದ ಫೆಬ್ರವರಿ 28ರ ನಡುವೆ ಜಾಹೀರಾತಿಗಾಗಿ ಬಿಜೆಪಿ 29.7 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಗೂಗಲ್ ಜಾಹೀರಾತುಗಳ ಕುರಿತ ಡೇಟಾ ತೋರಿಸುತ್ತದೆ. ಗೂಗಲ್‌ 12,600ಕ್ಕೂ ಹೆಚ್ಚು ಜಾಹೀರಾತುಗಳನ್ನು ಸ್ಟ್ರೀಮ್ ಮಾಡಿದೆ. ಹೆಚ್ಚಾಗಿ ವೀಡಿಯೊಗಳನ್ನು ಅಂದರೆ 75%ದಷ್ಟು ವಿಡಿಯೋ ಜಾಹೀರಾತುಗಳನ್ನು ಪ್ರಸಾರ ಮಾಡಿದೆ. ಇದು ಬಹು ಭಾರತೀಯ ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರವನ್ನು ಮಾಡುತ್ತದೆ. ಇವುಗಳಲ್ಲಿ ಹೆಚ್ಚಿನವು ವೀಡಿಯೊ ಜಾಹೀರಾತುಗಳಾಗಿದ್ದು, 50%ಕ್ಕಿಂತ ಹೆಚ್ಚು ಜಾಹೀರಾತುಗಳನ್ನು ಪ್ಲಾಟ್‌ಫಾರ್ಮ್ ನೀತಿಯ ಉಲ್ಲಂಘನೆಗಾಗಿ Googleನಿಂದ ತೆಗೆದುಹಾಕಲಾಗಿದೆ.

30 ದಿನಗಳಲ್ಲಿ ಸುಮಾರು 30 ಕೋಟಿ ರೂಪಾಯಿಗಳ ವೆಚ್ಚವು ಭಾರತದಲ್ಲಿ ಆನ್‌ಲೈನ್ ರಾಜಕೀಯ ಜಾಹೀರಾತುಗಳ ಹೆಚ್ಚಳದ ಗಮನಾರ್ಹ ಸೂಚಕವಾಗಿದೆ. 2019 ರಿಂದ 52,000ಕ್ಕೂ ಹೆಚ್ಚು ಜಾಹೀರಾತುಗಳ ಮೂಲಕ ತನ್ನ ಸಂದೇಶಗಳನ್ನು ಹರಡಲು ಬಿಜೆಪಿ ಇದುವರೆಗೆ 79.16 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದೆ, ಇತ್ತೀಚಿನ ಬ್ಯುಸಿನೆಸ್ ಲೈನ್ ವರದಿಯು ಫೆಬ್ರವರಿ 2019 ಮತ್ತು ಫೆಬ್ರವರಿ 2023ರ ನಡುವೆ ಫೇಸ್‌ಬುಕ್ ಜಾಹೀರಾತುಗಳಿಗಾಗಿ ಬಿಜೆಪಿ 33 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ತಿಳಿಸುತ್ತದೆ.

ಕಳೆದ ತಿಂಗಳಲ್ಲಿ ಹೆಚ್ಚಿನ Google ಜಾಹೀರಾತುಗಳು ಬಿಜೆಪಿ ಅಥವಾ ಅದರ ಮೈತ್ರಿ ಪಾಲುದಾರ ಆಡಳಿತವಿರುವ ಉತ್ತರ ಭಾರತದ ರಾಜ್ಯಗಳ ಮತದಾರರನ್ನು ಗುರಿಯಾಗಿಸಿಕೊಂಡಿವೆ. ಕಳೆದ 30 ದಿನಗಳಲ್ಲಿ ಒಂದು ಕೋಟಿ ವೀಕ್ಷಣೆಯ ಒಂದು ವಿಡಿಯೋಗೆ 30 ಲಕ್ಷಕ್ಕೂ ಅಧಿಕ ವ್ಯಯಿಸಲಾಗಿದೆ. ಬಿಜೆಪಿ 10 ಲಕ್ಷದಿಂದ 30 ಲಕ್ಷದವರೆಗೆ 50 ವೀಡಿಯೋಗಳಿಗೆ ವ್ಯಯಿಸಿದೆ, 100 ವೀಡಿಯೋಗಳಿಗೆ 5 ಲಕ್ಷದಿಂದ 10 ಲಕ್ಷದವರೆಗೆ, 124 ವೀಡಿಯೊಗಳಿಗೆ 2.5 ಲಕ್ಷದಿಂದ 5 ಲಕ್ಷದವರೆಗೆ ಮತ್ತು 109 ವಿಡಿಯೋಗಳಿಗೆ 1 ಲಕ್ಷದಿಂದ 2.5 ಲಕ್ಷದವರೆಗೆ ವ್ಯಯಿಸಲಾಗಿದೆ ಎಂದು ವರದಿ ತಿಳಿಸಿದೆ.

2019ರಿಂದ ಕಳೆದ ಐದು ವರ್ಷಗಳ ದತ್ತಾಂಶವು, ಗೂಗಲ್ ಜಾಹೀರಾತುಗಳಿಗಾಗಿ ಬಿಜೆಪಿ ಹೆಚ್ಚು ಹಣವನ್ನು ಖರ್ಚು ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ  8.9 ಕೋಟಿ ವ್ಯಯಿಸಿ ಅಗ್ರಸ್ಥಾನದಲ್ಲಿದೆ ಎನ್ನುವುದನ್ನು ತೋರಿಸುತ್ತದೆ. ಕರ್ನಾಟಕದ ನಂತರ ಉತ್ತರಪ್ರದೇಶ 7.76 ಕೋಟಿ ರೂ. ವ್ಯಯಿಸಿದೆ, ದೆಹಲಿ 6.84 ಕೋಟಿ ವ್ಯಯಿಸಿದೆ, ಗುಜರಾತ್ 6.1 ಕೋಟಿ ರೂ. ವ್ಯಯಿಸಿದೆ, ಮಧ್ಯಪ್ರದೇಶ 5.9 ಕೋಟಿ ರೂ. ವ್ಯಯಿಸಿದೆ, ಬಿಹಾರ  4.38 ಕೋಟಿ ರೂ.ವ್ಯಯಿಸಿದೆ, ಪಶ್ಚಿಮ ಬಂಗಾಳ 3.46 ಕೋಟಿ ರೂ.ವ್ಯಯಿಸಿದೆ, ತೆಲಂಗಾಣ 3.18 ಕೋಟಿ ರೂ ವ್ಯಯಿಸಿದೆ, ಮಹಾರಾಷ್ಟ್ರ 3 ಕೋಟಿ ಮತ್ತು ಹರಿಯಾಣ 2.6 ಕೋಟಿ ರೂ.ವ್ಯಯಿಸಿದೆ ಎಂದು ವರದಿ ತಿಳಿಸಿದೆ.

50% ಕ್ಕಿಂತ ಹೆಚ್ಚು ಬಿಜೆಪಿ ವೀಡಿಯೊ ಜಾಹೀರಾತುಗಳನ್ನು ತೆಗೆದು ಹಾಕಿದ ಗೂಗಲ್‌

Googleನ ಜಾಹೀರಾತು ನೀತಿ ಉಲ್ಲಂಘನೆಗಾಗಿ ಬಿಜೆಪಿಯ 50%ಕ್ಕಿಂತ ಹೆಚ್ಚು ವೀಡಿಯೊಗಳನ್ನು Googleನಿಂದ ತೆಗೆದು ಹಾಕಲಾಗಿದೆ. Google ಜಾಹೀರಾತುದಾರರಿಗೆ ಮೂರು ಮುಖ್ಯ ಫ್ಲ್ಯಾಟ್‌ ಫಾರ್ಮ್‌ ನೀಡುತ್ತದೆ. Google ಹುಡುಕಾಟ, ವೆಬ್‌ಸೈಟ್‌ಗಳು ಮತ್ತು ಅಪ್ಲಿಕೇಶನ್‌ಗಳು ಮತ್ತು YouTube ಮೂಲಕ ಜಾಹೀರಾತು ಪ್ರಚಾರ ಮಾಡುತ್ತದೆ. ಅವುಗಳನ್ನು ವಯಸ್ಸು, ಲಿಂಗ ಮತ್ತು ಪೋಸ್ಟಲ್ ಕೋಡ್ ಸೇರಿ ನಿಯಮಗಳಂತೆ ಪ್ರೇಕ್ಷಕರನ್ನು ಸೀಮಿತಗೊಳಿಸುತ್ತದೆ. ಬಿಜೆಪಿಯ ವೀಡಿಯೊಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಏಕೆಂದರೆ Google ಕಾರಣವನ್ನು ಬಹಿರಂಗಪಡಿಸುವುದಿಲ್ಲ ಮತ್ತು ಕೇವಲ ‘ನೀತಿ ಉಲ್ಲಂಘನೆಗಾಗಿ’ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳುತ್ತದೆ. ಅಳಿಸಿದ ವೀಡಿಯೊಗಳನ್ನು ವೀಕ್ಷಿಸಲು ಇದು ಬಳಕೆದಾರರಿಗೆ ಅನುಮತಿಸುವುದಿಲ್ಲ.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿರುವ ಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು ಸೇರಿದಂತೆ ಅಂತರ್ಜಾಲದಲ್ಲಿ ಪೋಸ್ಟ್ ಮಾಡಲಾದ ವಿಷಯಕ್ಕೆ ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಸೂಚನೆಗಳು ಅನ್ವಯಿಸುತ್ತವೆ. 2019ರಲ್ಲಿ ಏಪ್ರಿಲ್ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದವು. ಬಿಜೆಪಿಯು ಏಪ್ರಿಲ್ 6 ರಿಂದ ಮೇ 17 ರವರೆಗೆ ನಿರಂತರವಾಗಿ ರಾಜಕೀಯ ಜಾಹೀರಾತುಗಳೊಂದಿಗೆ ಅನೇಕ ರಾಜ್ಯಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರಿದೆ.

ಇದನ್ನು ಓದಿ: 8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...