Homeಮುಖಪುಟಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

- Advertisement -
- Advertisement -

ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಗೂಗಲ್ ಸರ್ಚ್ ಮತ್ತು ಯೂಟ್ಯೂಬ್ ಸೇರಿದಂತೆ ಗೂಗಲ್‌ನ ಡಿಸ್‌ಪ್ಲೇ ನೆಟ್‌ವರ್ಕ್ ಮತ್ತು ಆಲ್ಫಾಬೆಟ್ ಪ್ಲಾಟ್‌ಫಾರ್ಮ್‌ಗಳಿಗೆ ಸಾವಿರಾರು ರಾಜಕೀಯ ಜಾಹೀರಾತುಗಳಿಗೆ 30 ದಿನಗಳಲ್ಲಿ 30 ಕೋಟಿ ರೂ. ವೆಚ್ಚವನ್ನು ಮಾಡಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.

2019ರ ಚುನಾವಣೆಯ ವೇಳೆ ಫೆಬ್ರವರಿಯಿಂದ- ಮೇವರೆಗೆ ನಾಲ್ಕು ತಿಂಗಳುಗಳ ನಡುವೆ ಜಾಹೀರಾತಿಗಾಗಿ ಮಾಡಿದ ವೆಚ್ಚಕ್ಕಿಂತ ಇದು ದುಪ್ಪಟ್ಟಾಗಿದೆ. 2019ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ನಾಲ್ಕು ತಿಂಗಳ ಅವಧಿಯಲ್ಲಿ ಪಕ್ಷವು ಕೇವಲ 12.3 ಕೋಟಿ ರೂ.ವೆಚ್ಚವನ್ನು ಮಾಡಿತ್ತು. ಅದೇ ಅವಧಿಯಲ್ಲಿ ಪ್ರಮುಖ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ವೆಚ್ಚ 2.99 ಕೋಟಿ ರೂ.ಆಗಿತ್ತು. ಫೆಬ್ರವರಿ 2024ರಲ್ಲಿ ಕಾಂಗ್ರೆಸ್‌ ಪಕ್ಷವು Google ಜಾಹೀರಾತುಗಳ ಮೂಲಕ ಯಾವುದೇ ಸಂದೇಶವನ್ನುಪ್ರಚಾರ ಮಾಡಿಲ್ಲ ಎನ್ನುವುದು ತಿಳಿಯುತ್ತದೆ.

30 ದಿನಗಳಲ್ಲಿ ಅಂದರೆ ಜನವರಿ 29ರಿಂದ ಫೆಬ್ರವರಿ 28ರ ನಡುವೆ ಜಾಹೀರಾತಿಗಾಗಿ ಬಿಜೆಪಿ 29.7 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಗೂಗಲ್ ಜಾಹೀರಾತುಗಳ ಕುರಿತ ಡೇಟಾ ತೋರಿಸುತ್ತದೆ. ಗೂಗಲ್‌ 12,600ಕ್ಕೂ ಹೆಚ್ಚು ಜಾಹೀರಾತುಗಳನ್ನು ಸ್ಟ್ರೀಮ್ ಮಾಡಿದೆ. ಹೆಚ್ಚಾಗಿ ವೀಡಿಯೊಗಳನ್ನು ಅಂದರೆ 75%ದಷ್ಟು ವಿಡಿಯೋ ಜಾಹೀರಾತುಗಳನ್ನು ಪ್ರಸಾರ ಮಾಡಿದೆ. ಇದು ಬಹು ಭಾರತೀಯ ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರವನ್ನು ಮಾಡುತ್ತದೆ. ಇವುಗಳಲ್ಲಿ ಹೆಚ್ಚಿನವು ವೀಡಿಯೊ ಜಾಹೀರಾತುಗಳಾಗಿದ್ದು, 50%ಕ್ಕಿಂತ ಹೆಚ್ಚು ಜಾಹೀರಾತುಗಳನ್ನು ಪ್ಲಾಟ್‌ಫಾರ್ಮ್ ನೀತಿಯ ಉಲ್ಲಂಘನೆಗಾಗಿ Googleನಿಂದ ತೆಗೆದುಹಾಕಲಾಗಿದೆ.

30 ದಿನಗಳಲ್ಲಿ ಸುಮಾರು 30 ಕೋಟಿ ರೂಪಾಯಿಗಳ ವೆಚ್ಚವು ಭಾರತದಲ್ಲಿ ಆನ್‌ಲೈನ್ ರಾಜಕೀಯ ಜಾಹೀರಾತುಗಳ ಹೆಚ್ಚಳದ ಗಮನಾರ್ಹ ಸೂಚಕವಾಗಿದೆ. 2019 ರಿಂದ 52,000ಕ್ಕೂ ಹೆಚ್ಚು ಜಾಹೀರಾತುಗಳ ಮೂಲಕ ತನ್ನ ಸಂದೇಶಗಳನ್ನು ಹರಡಲು ಬಿಜೆಪಿ ಇದುವರೆಗೆ 79.16 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದೆ, ಇತ್ತೀಚಿನ ಬ್ಯುಸಿನೆಸ್ ಲೈನ್ ವರದಿಯು ಫೆಬ್ರವರಿ 2019 ಮತ್ತು ಫೆಬ್ರವರಿ 2023ರ ನಡುವೆ ಫೇಸ್‌ಬುಕ್ ಜಾಹೀರಾತುಗಳಿಗಾಗಿ ಬಿಜೆಪಿ 33 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ತಿಳಿಸುತ್ತದೆ.

ಕಳೆದ ತಿಂಗಳಲ್ಲಿ ಹೆಚ್ಚಿನ Google ಜಾಹೀರಾತುಗಳು ಬಿಜೆಪಿ ಅಥವಾ ಅದರ ಮೈತ್ರಿ ಪಾಲುದಾರ ಆಡಳಿತವಿರುವ ಉತ್ತರ ಭಾರತದ ರಾಜ್ಯಗಳ ಮತದಾರರನ್ನು ಗುರಿಯಾಗಿಸಿಕೊಂಡಿವೆ. ಕಳೆದ 30 ದಿನಗಳಲ್ಲಿ ಒಂದು ಕೋಟಿ ವೀಕ್ಷಣೆಯ ಒಂದು ವಿಡಿಯೋಗೆ 30 ಲಕ್ಷಕ್ಕೂ ಅಧಿಕ ವ್ಯಯಿಸಲಾಗಿದೆ. ಬಿಜೆಪಿ 10 ಲಕ್ಷದಿಂದ 30 ಲಕ್ಷದವರೆಗೆ 50 ವೀಡಿಯೋಗಳಿಗೆ ವ್ಯಯಿಸಿದೆ, 100 ವೀಡಿಯೋಗಳಿಗೆ 5 ಲಕ್ಷದಿಂದ 10 ಲಕ್ಷದವರೆಗೆ, 124 ವೀಡಿಯೊಗಳಿಗೆ 2.5 ಲಕ್ಷದಿಂದ 5 ಲಕ್ಷದವರೆಗೆ ಮತ್ತು 109 ವಿಡಿಯೋಗಳಿಗೆ 1 ಲಕ್ಷದಿಂದ 2.5 ಲಕ್ಷದವರೆಗೆ ವ್ಯಯಿಸಲಾಗಿದೆ ಎಂದು ವರದಿ ತಿಳಿಸಿದೆ.

2019ರಿಂದ ಕಳೆದ ಐದು ವರ್ಷಗಳ ದತ್ತಾಂಶವು, ಗೂಗಲ್ ಜಾಹೀರಾತುಗಳಿಗಾಗಿ ಬಿಜೆಪಿ ಹೆಚ್ಚು ಹಣವನ್ನು ಖರ್ಚು ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ  8.9 ಕೋಟಿ ವ್ಯಯಿಸಿ ಅಗ್ರಸ್ಥಾನದಲ್ಲಿದೆ ಎನ್ನುವುದನ್ನು ತೋರಿಸುತ್ತದೆ. ಕರ್ನಾಟಕದ ನಂತರ ಉತ್ತರಪ್ರದೇಶ 7.76 ಕೋಟಿ ರೂ. ವ್ಯಯಿಸಿದೆ, ದೆಹಲಿ 6.84 ಕೋಟಿ ವ್ಯಯಿಸಿದೆ, ಗುಜರಾತ್ 6.1 ಕೋಟಿ ರೂ. ವ್ಯಯಿಸಿದೆ, ಮಧ್ಯಪ್ರದೇಶ 5.9 ಕೋಟಿ ರೂ. ವ್ಯಯಿಸಿದೆ, ಬಿಹಾರ  4.38 ಕೋಟಿ ರೂ.ವ್ಯಯಿಸಿದೆ, ಪಶ್ಚಿಮ ಬಂಗಾಳ 3.46 ಕೋಟಿ ರೂ.ವ್ಯಯಿಸಿದೆ, ತೆಲಂಗಾಣ 3.18 ಕೋಟಿ ರೂ ವ್ಯಯಿಸಿದೆ, ಮಹಾರಾಷ್ಟ್ರ 3 ಕೋಟಿ ಮತ್ತು ಹರಿಯಾಣ 2.6 ಕೋಟಿ ರೂ.ವ್ಯಯಿಸಿದೆ ಎಂದು ವರದಿ ತಿಳಿಸಿದೆ.

50% ಕ್ಕಿಂತ ಹೆಚ್ಚು ಬಿಜೆಪಿ ವೀಡಿಯೊ ಜಾಹೀರಾತುಗಳನ್ನು ತೆಗೆದು ಹಾಕಿದ ಗೂಗಲ್‌

Googleನ ಜಾಹೀರಾತು ನೀತಿ ಉಲ್ಲಂಘನೆಗಾಗಿ ಬಿಜೆಪಿಯ 50%ಕ್ಕಿಂತ ಹೆಚ್ಚು ವೀಡಿಯೊಗಳನ್ನು Googleನಿಂದ ತೆಗೆದು ಹಾಕಲಾಗಿದೆ. Google ಜಾಹೀರಾತುದಾರರಿಗೆ ಮೂರು ಮುಖ್ಯ ಫ್ಲ್ಯಾಟ್‌ ಫಾರ್ಮ್‌ ನೀಡುತ್ತದೆ. Google ಹುಡುಕಾಟ, ವೆಬ್‌ಸೈಟ್‌ಗಳು ಮತ್ತು ಅಪ್ಲಿಕೇಶನ್‌ಗಳು ಮತ್ತು YouTube ಮೂಲಕ ಜಾಹೀರಾತು ಪ್ರಚಾರ ಮಾಡುತ್ತದೆ. ಅವುಗಳನ್ನು ವಯಸ್ಸು, ಲಿಂಗ ಮತ್ತು ಪೋಸ್ಟಲ್ ಕೋಡ್ ಸೇರಿ ನಿಯಮಗಳಂತೆ ಪ್ರೇಕ್ಷಕರನ್ನು ಸೀಮಿತಗೊಳಿಸುತ್ತದೆ. ಬಿಜೆಪಿಯ ವೀಡಿಯೊಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಏಕೆಂದರೆ Google ಕಾರಣವನ್ನು ಬಹಿರಂಗಪಡಿಸುವುದಿಲ್ಲ ಮತ್ತು ಕೇವಲ ‘ನೀತಿ ಉಲ್ಲಂಘನೆಗಾಗಿ’ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳುತ್ತದೆ. ಅಳಿಸಿದ ವೀಡಿಯೊಗಳನ್ನು ವೀಕ್ಷಿಸಲು ಇದು ಬಳಕೆದಾರರಿಗೆ ಅನುಮತಿಸುವುದಿಲ್ಲ.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿರುವ ಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು ಸೇರಿದಂತೆ ಅಂತರ್ಜಾಲದಲ್ಲಿ ಪೋಸ್ಟ್ ಮಾಡಲಾದ ವಿಷಯಕ್ಕೆ ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಸೂಚನೆಗಳು ಅನ್ವಯಿಸುತ್ತವೆ. 2019ರಲ್ಲಿ ಏಪ್ರಿಲ್ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದವು. ಬಿಜೆಪಿಯು ಏಪ್ರಿಲ್ 6 ರಿಂದ ಮೇ 17 ರವರೆಗೆ ನಿರಂತರವಾಗಿ ರಾಜಕೀಯ ಜಾಹೀರಾತುಗಳೊಂದಿಗೆ ಅನೇಕ ರಾಜ್ಯಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರಿದೆ.

ಇದನ್ನು ಓದಿ: 8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...