Homeಮುಖಪುಟಬಿಜೆಪಿ ವಕ್ತಾರ ಸಂಬಿತ್ ಪಾತ್ರಾ - ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ'

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

- Advertisement -
- Advertisement -

ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣದಲ್ಲಿ ಸಂಬಿತ್ ಪಾತ್ರಾ ಮತ್ತು ರಮಣಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ವೃತ್ತಿಯಲ್ಲಿ ವೈದ್ಯರಾದ ಸಂಬಿತ್ ಪಾತ್ರಾ ಬಿಜೆಪಿಯ ರಾಷ್ಟ್ರೀಯ ವಕ್ತಾರರ ಪೈಕಿ ಹೆಚ್ಚು ಗೋಚರಿಸುವ ವ್ಯಕ್ತಿಯಾಗಿದ್ದಾರೆ.

ರಾಷ್ಟ್ರೀಯ ಚಾನೆಲ್‌ಗಳ ಚರ್ಚೆಗಳಲ್ಲಿ ಪಕ್ಷದ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಅವರು, ಪ್ರತಿಪಕ್ಷಗಳ ವಿರುದ್ಧ ಅದರಲ್ಲೂ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಲು ಕೆಲವೊಮ್ಮೆ ಸತ್ಯ, ಬಹುಪಾಲು ಸಂದರ್ಭಗಳಲ್ಲಿ ಅರೆಸತ್ಯ, ಸುಳ್ಳು ಮತ್ತು ತಿರುಚಲ್ಪಟ್ಟ ಸಂಗತಿಗಳನ್ನು ತಮ್ಮ ಅಸ್ತ್ರಗಳನ್ನಾಗಿ ಬಳಸುತ್ತಾರೆ.

ಇತ್ತೀಚನ ವರ್ಷಗಳಲ್ಲಿ ಟ್ವಿಟರ್ ಅವರ ನೆಚ್ಚಿನ ವೇದಿಕೆಯಾಗಿದ್ದು, ಅವರು ನಾಲ್ಕು ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲು ಅವರು ಈಗ ಟ್ವಿಟರ್ ಬಳಸುತ್ತಿದ್ದಾರೆ.

ಇದನ್ನೂ ಓದಿ: ಹಣ ಕೊಡದೇ ಬಸ್ ಬಿಡುವುದಿಲ್ಲ ಎಂದು ಮಧ್ಯರಾತ್ರಿಯಲ್ಲಿ ಹಠಹಿಡಿದ ರಾಜಸ್ತಾನ? ಸಂಬಿತ್‌ ಪಾತ್ರಾನ ಹೊಸ ಸುಳ್ಳು

ಕಳೆದ ವಾರ ಅವರ ಟೂಲ್‌ಕಿಟ್ ಟ್ವೀಟ್‌ಗೆ ಟ್ವಿಟರ್ ಕಂಪನಿ ’ತಿರುಚಲ್ಪಟ್ಟ ಸಂಗತಿ’ (’ಮ್ಯಾನಿಪುಲೆಟೆಡ್ ಮೀಡಿಯಾ’) ಎಂಬ ಟ್ಯಾಗ್ ಹಾಕಿತ್ತು. ಅವರು ರಾಷ್ಟ್ರೀಯ ಚಾನೆಲ್‌ಗಳಲ್ಲಿ ತಪ್ಪು ಮಾಹಿತಿಯನ್ನು ಉತ್ತೇಜಿಸುತ್ತಿದ್ದಾರೆ, ಟ್ವೀಟ್‌ಗಳಲ್ಲಿ ತಿರುಚಿದ ವಿಡಿಯೋ-ಮಾಹಿತಿ ಹಾಕುತ್ತಾರೆ ಎಂದು ಹಲವಾರು ಫ್ಯಾಕ್ಟ್‌ಚೆಕ್‌ಗಳು ಹಲವಾರು ಸಲ ನಿರೂಪಿಸಿವೆ.

ಟಿವಿ ಚರ್ಚೆಗಳಲ್ಲಿ ಅವರು ತಮಗೆ ಹಿನ್ನಡೆ ಆಗುತ್ತಿದೆ ಅನಿಸಿದಾಗ ಬಿಜೆಪಿಯ ಪರಂಪರಾಗತ ಅಸ್ತ್ರಗಳಾದ ದೇಶದ್ರೋಹ, ಪಾಕಿಸ್ತಾನ, ಭಾರತಮಾತಾ, ಕಾಶ್ಮೀರ ಮುಂತಾದ ವಿಷಯಗಳಿಗೆ ಜಾರಿ ವಿಷಯ ಪಲ್ಲಟ ಮಾಡಿ ಗದ್ದಲ ಎಬ್ಬಿಸಲು ನೋಡುತ್ತಾರೆ. ಇದು ಚಾನೆಲ್‌ಗಳ ಟಿಆರ್‌ಪಿಗೂ ಅಗತ್ಯವಾದ್ದರಿಂದ ಸಂಬಿತ್ ಅವುಗಳ ನೆಚ್ಚಿನ ಪ್ಯಾನೆಲಿಸ್ಟ್.

ಪಟ್ಟಿ ಮಾಡುತ್ತ ಹೋದರೆ, ಅದು ತುಂಬ ದೊಡ್ಡದಾಗುತ್ತದೆ. ಅಲ್ಟ್‌ನ್ಯೂಸ್ ಮತ್ತು ಇತರ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ಗಳು ನಿರೂಪಿಸಿದ ಪಾತ್ರಾ ಅವರ ಕೆಲವು ಸುಳ್ಳುಗಳನ್ನು ನೋಡೋಣ.

ತಿರುಚಿದ ಇತಿಹಾಸ ಹೇಳಿ ದಂಗು ಬಡಿಸುವುದು ಅವರ ’ಕಲೆ’. ಹಾಗೆಯೇ ಯಾವುದಾದರೂ ವಿಡಿಯೋದಿಂದ ಮಧ್ಯದ ಐದಾರು ಸೆಕೆಂಡುಗಳ ದೃಶ್ಯ-ಮಾತುಗಳನ್ನು ಎತ್ತಿ ವಿಪಕ್ಷದವರನ್ನು ಅಪರಾಧಿಯನ್ನಾಗಿ ಮಾಡುವುದು ಅಥವಾ ಗೇಲಿ ಮಾಡುವುದು ಅವರ ’ಶೈಲಿ’!

ಕಾಂಗ್ರೆಸ್-ನೆಹರೂ-ಗಾಂಧಿ ಕುಟುಂಬಗಳು ಅವರ ನೆಚ್ಚಿನ ಟಾರ್ಗೆಟ್.

ಕಳೆದ ಕೋವಿಡ್ ಒಂದನೇ ಅಲೆ ಸಂದರ್ಭದಲ್ಲಿ ರಾಜಸ್ಥಾನ ಸರ್ಕಾರವು ಯುಪಿ ವಿದ್ಯಾರ್ಥಿಗಳನ್ನು ಯುಪಿಗೆ ಸಾಗಿಸುವ ಬಸ್ಸುಗಳನ್ನು 19 ಲಕ್ಷ ರೂ. ಪಾವತಿಸಿದ ನಂತರವಷ್ಟೇ ಬಿಟ್ಟಿತ್ತು ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ರಾಜಸ್ತಾನದ ಕೋಟಾದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಯುಪಿಗೆ ಕಳಿಸಿಕೊಡಲು ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸರ್ಕಾರಗಳು ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡಿದ್ದವು. ಅವರು ಸುರಕ್ಷಿತವಾಗಿ ಮನೆಗೆ ಮರಳಿದ ಒಂದು ತಿಂಗಳ ನಂತರ, ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು ಯುಪಿ ಸರ್ಕಾರದ ಚೆಕ್ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ, ಯುಪಿ ಸರ್ಕಾರವು ಮಧ್ಯರಾತ್ರಿ 19 ಲಕ್ಷ ರೂ.ಗಳ ಇಂಧನ ಬಾಕಿ ಪಾವತಿಸಿದ ನಂತರವೇ ರಾಜಸ್ಥಾನ್ ಸರ್ಕಾರ ಬಸ್ಸುಗಳನ್ನು ರಾಜ್ಯದಿಂದ ಹೊರಹೋಗಲು ಅನುಮತಿ ನೀಡಿದೆ ಎಂದು ಹೇಳಿದ್ದರು.

ಆದರೆ ಇದು ನಿಜವಲ್ಲ ಏಕೆಂದರೆ ಪಾತ್ರ್ರಾ ಅವರು ತೋರಿಸಿದ ಚೆಕ್ 2020 ರ ಮೇ 5 ರ ದಿನಾಂಕದ್ದು. ವಿದ್ಯಾರ್ಥಿಗಳನ್ನು ಕರೆದೊಯ್ಯುವ ಕೊನೆಯ ಬಸ್ ಏಪ್ರಿಲ್ 19 ರಂದು ರಾಜಸ್ಥಾನದಿಂದ ಹೊರಟಿತ್ತು. ಸಾಕಷ್ಟು ಸ್ಪಷ್ಟವಾಗಿ, ಏಪ್ರಿಲ್‌ನಲ್ಲಿ ಪಾವತಿಯ ಕೊರತೆಯಿಂದಾಗಿ ಬಸ್‌ಗಳನ್ನು ನಿಲ್ಲಿಸಲಾಗಲಿಲ್ಲ. ಬಾಕಿಗಳನ್ನು ಎರಡು ವಾರಗಳ ನಂತರ ಮೇನಲ್ಲಿ ವರ್ಗಾಯಿಸಲಾಯಿತು.

ರಾಹುಲ್ ಗಾಂಧಿಯನ್ನು ಅಪಹಾಸ್ಯ ಮಾಡಲು ಕ್ಲಿಪ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದರು.

ಕೋವಿಡ್ ತೀವ್ರತೆಯ ಆಧಾರದ ಮೇಲೆ ಕೇಂದ್ರ ಸರ್ಕಾರ ಸ್ಥಾಪಿಸಿದ ವಲಯಗಳನ್ನು ಉಲ್ಲೇಖಿಸಿ “ಕೆಂಪು ವಲಯವು ನಿಜವಾಗಿಯೂ ಹಸಿರು ವಲಯ ಮತ್ತು ಹಸಿರು ವಲಯವು ನಿಜವಾಗಿಯೂ ಕೆಂಪು ವಲಯವಾಗಿದೆ” ಎಂದು ರಾಹುಲ್ ಗಾಂಧಿ ಹೇಳುವಂತಹ ವೀಡಿಯೊವನ್ನು ಪಾತ್ರಾ ಟ್ವೀಟ್ ಮಾಡಿ ಗೇಲಿ ಮಾಡಿದ್ದರು.

ಇದನ್ನೂ ಓದಿ: ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಭಾರತದಲ್ಲಿ ಕೊರೊನಾ ಸಂಭವಿಸಿದ ಬಗ್ಗೆ ರಾಹುಲ್ ಗಾಂಧಿ ಅವರು ನಡೆಸಿದ್ದ ಒಂದು ಗಂಟೆ ಅವಧಿಯ ಪತ್ರಿಕಾಗೋಷ್ಠಿಯಿಂದ 6 ಸೆಕೆಂಡುಗಳನ್ನು ಸಂಬಿತ್ ಪಾತ್ರಾ ಹಂಚಿಕೊಂಡಿದ್ದರು. ಬಲವಾದ ಸ್ಥಳೀಯ ನಾಯಕರ ಅಗತ್ಯತೆ ಮತ್ತು ತಳಮಟ್ಟದಿಂದ ವೈರಸ್ ಅನ್ನು ನಿಭಾಯಿಸುವ ಅಗತ್ಯವನ್ನು ಕಾಂಗ್ರೆಸ್ ನಾಯಕ ಒತ್ತಿ ಹೇಳಿದ್ದರು. “ಈ ವಲಯಗಳನ್ನು – ಕೆಂಪು, ಕಿತ್ತಳೆ ಮತ್ತು ಹಸಿರು – ರಾಷ್ಟ್ರಮಟ್ಟದಲ್ಲಿ ರಚಿಸಲಾಗಿದೆ. ಅವುಗಳನ್ನು ರಾಜ್ಯ ಮಟ್ಟದಲ್ಲಿ ರಚಿಸಬೇಕು. ಮುಖ್ಯಮಂತ್ರಿಗಳು (ಕಾಂಗ್ರೆಸ್ ಆಡಳಿತದ ರಾಜ್ಯಗಳ) ರಾಷ್ಟ್ರಮಟ್ಟದಲ್ಲಿ ಕೆಂಪು ಬಣ್ಣದಲ್ಲಿರುವ ವಲಯವು ವಾಸ್ತವವಾಗಿ ಹಸಿರು ಮತ್ತು ಹಸಿರು ಇರುವ ವಲಯವು ನಿಜವಾಗಿಯೂ ಕೆಂಪು ಎಂದು ನಮಗೆ ಹೇಳುತ್ತಿದ್ದಾರೆ ಎಂದು ಹೇಳಿದ್ದರು.

ರಾಹುಲ್‌ ಗಾಂಧಿಯವರು ಸಿಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಂಬಿಸಲು ರಾಷ್ಟ್ರಮಟ್ಟ ಎಂಬ ಪದಗಳನ್ನು ಭಾಷಣದಿಂದ ಈ ವಿಡಿಯೊವನ್ನು ಕ್ಲಿಪ್ ಮಾಡಲಾಗಿದೆ.

ಜವಾಹರಲಾಲ್ ನೆಹರೂಗೆ ನಕಲಿ ಉಲ್ಲೇಖ

2018 ರಲ್ಲಿ ಚಾನೆಲ್ ಚರ್ಚೆಯೊಂದರಲ್ಲಿ, ಮೊದಲ ಭಾರತೀಯ ಪ್ರಧಾನಿ ಜವಾಹರಲಾಲ್ ನೆಹರು, ನಾನು ಶಿಕ್ಷಣದಿಂದ ಇಂಗ್ಲಿಷ್‌, ಸಂಸ್ಕೃತಿಯಿಂದ ಮುಸ್ಲಿಂ ಮತ್ತು ಕೇವಲ ಜನ್ಮದಿಂದ ಆಕಸ್ಮಿಕವಾಗಿ ಹಿಂದೂ ಎಂದು ಹೇಳಿದ್ದಾರೆ ಎಂದು ಪಾತ್ರಾ ಹೇಳಿದ್ದಾರೆ.

ಈ ಮಾತುಗಳು ಮೊದಲು ಕಾಣಿಸಿಕೊಂಡಿದ್ದು 1959 ರಲ್ಲಿ ಹಿಂದೂ ಮಹಾಸಭಾ ನಾಯಕ ಮತ್ತು ಜವಾಹರಲಾಲ್ ನೆಹರೂ ಅವರ ತೀವ್ರ ವಿಮರ್ಶಕ ಎನ್.ಬಿ ಖಾರೆ ಬರೆದ ’ದಿ ಆಂಗ್ರಿ ಅರಿಸ್ಟೋಕ್ರಾಟ್’ ಎಂಬ ಲೇಖನದಲ್ಲಿ. ಈ ಲೇಖನವು ಹಲವಾರು ರಾಜಕೀಯ ವ್ಯಕ್ತಿಗಳ ವ್ಯಾಖ್ಯಾನಗಳೊಂದಿಗೆ ’ಎ ಸ್ಟಡಿ ಆಫ್ ನೆಹರೂ’ ಸಂಪುಟದ ಭಾಗವಾಗಿತ್ತು. ನೆಹರೂ ಅವರ ಆತ್ಮಚರಿತ್ರೆಯನ್ನೂ ಒಳಗೊಂಡಂತೆ ಬೇರೆಲ್ಲೂ ಈ ಉಲ್ಲೇಖವನ್ನು ಹೇಳುವ ಯಾವುದೇ ಸಾಕ್ಷಿಯಿಲ್ಲ.

ಇದನ್ನೂ ಓದಿ: ನನ್ನ ಪತಿ ಸಾವಿಗೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾರಣ: ರಾಜೀವ್ ತ್ಯಾಗಿ ಪತ್ನಿ ಆರೋಪ

ಕಳೆದ ವರ್ಷ ನ್ಯೂಸ್ 18 ಚರ್ಚೆಯ ಸಂದರ್ಭದಲ್ಲಿ, ಸೋನಿಯಾ ಗಾಂಧಿ ವಿಶ್ವದ 4 ನೇ ಶ್ರೀಮಂತ ಮಹಿಳೆ ಎಂದು ಸಾಂಬಿತ್ ಪಾತ್ರ್ರಾ ಹೇಳಿಕೊಂಡಿದ್ದಾರೆ.

ಆಲ್ಟ್‌ನ್ಯೂಸ್ ಈ ಸಂಗತಿ ’ವರ್ಲ್ಡ್ಸ್ ಲಕ್ಸುರಿ ಗೈಡ್’ ಹೆಸರಿನ ಕಳಪೆ ವೆಬ್‌ಸೈಟ್ ಅನ್ನು ಆಧರಿಸಿದೆ ಎಂದು ಕಂಡುಹಿಡಿದಿತ್ತು. ಅದು ಈಗ ಅಸ್ತಿತ್ವದಲ್ಲಿಲ್ಲ ಎಂಬುದನ್ನು ತೋರಿಸಿತ್ತು.

ಯಾರದೋ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದರೆಂದು ಆರೋಪಿಸುವುದು, ಫೋರ್ಜರಿ ಲೆಟರ್‌ಗಳಿರುವ ಟ್ವೀಟ್‌ಗಳನ್ನು ರಿಟ್ವೀಟ್ ಮಾಡುವುದನ್ನು ಯಾವ ಅಳುಕೂ ಇಲ್ಲದೇ ಮಾಡಬಲ್ಲ ಸಂಬಿತ್ ಪಾತ್ರಾ ಗಂಭೀರ ಟಿವಿ ವೀಕ್ಷರು ಮತ್ತು ನೆಟ್ಟಿಗರ ಪಾಲಿಗೆ ಜೋಕರ್ ತರಹ ಭಾಸವಾಗುತ್ತಾರೆ.

ಆದರೆ ಅದಕ್ಕೂ ಅಪಾಯಕಾರಿ ಸಂಗತಿ ಎಂದರೆ, 4 ಮಿಲಿಯನ್‌ಗೂ ಹೆಚ್ಚಿರುವ ಅವರ ಫಾಲೋವರ್ಸ್ ಈ ಸುಳ್ಳುಗಳನ್ನು ಹರಡುತ್ತ ಹೋಗುತ್ತಾರೆ. ಅವು ನಂತರ ವ್ಯಾಟ್ಸಾಪ್ ಮೂಲಕ ಇನ್ನಷ್ಟು ಪ್ರಸಾರಗೊಳ್ಳುತ್ತವೆ. ಇದನ್ನು ಬಲ್ಲ ಸಂಬಿತ್ ಪಾತ್ರಾ ಸುಳ್ಳು ಎಂದು ಗೊತ್ತಿದ್ದರೂ ಟ್ವೀಟ್ ಮಾಡುತ್ತಲೇ ಇರುತ್ತಾರೆ. ಐಟಿ ಸೆಲ್‌ನ ಅಮಿತ್ ಮಾಳವಿಯ ಮತ್ತು ಪಾತ್ರಾ ಪರಸ್ಪರ ಸಹಕಾರದಲ್ಲಿ ಇಂಥದೊಂದು ಅಪಾಯಕಾರಿ ಆಟ ಆಡುತ್ತಿದ್ದಾರೆ.

ಬಿಜೆಪಿ ಅವರನ್ನು ಈ ಕೆಲಸಕ್ಕೇ ನೇಮಿಸಿದೆಯಲ್ಲವೆ?

ಇದನ್ನೂ ಓದಿ: ‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....