Homeಮುಖಪುಟಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ನೀಡುತ್ತೇನೆ. ಅವರು ಸೂಚಿಸಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖ್ಯಾತ ಕನ್ನಡ ಸಿನಿಮಾ ನಟ ಸುದೀಪ್ ಘೋಷಿಸಿದ ಬೆನ್ನಲ್ಲೆ ಅವರ ಕಿಚ್ಚ ಸಿನಿಮಾದಲ್ಲಿ ರಾಜಕಾರಣಿಗಳನ್ನು ಬೈಯ್ಯುವ, ಸಿಎಂ ಖುರ್ಚಿಗೆ ಶಾಸಕರನ್ನು ಖರೀದಿಸುವುದನ್ನು ಖಂಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, “ನಾನು ಮುಖ್ಯಮಂತ್ರಿಯಾಗಬೇಕು, ಅವನು ಮುಖ್ಯಮಂತ್ರಿಯಾಗಬೇಕು ಎಂದು ಒಬ್ಬೊಬ್ಬ ಎಂಎಲ್‌ಎಗಳನ್ನು ಪರ್ಚೇಸ್ ಮಾಡಲು ಕೋಟಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದ್ದಾರೆ ಈನನ್ಮಕ್ಕಳು. ಯಾರ್ಯಾರ ಹತ್ರ ಎಷ್ಟೆಸ್ಟು ಹೊಡೆದೆ? ಎಷ್ಟೆಷ್ಟು ತಿಂದೆ ಎಂದು ಹೇಳದೆ ಹೋದರೆ ನ್ಯಾಯ ಅಲ್ಲ ಅಲ್ವಾ? ಅವರುಗಳಿಗೂ ಗೊತ್ತಾಗಲಿ ಅವರ ರಕ್ತ ಹೀರಿ ನೀವು ಎಷ್ಟು ಹಣ ಸಂಪಾದನೆ ಮಾಡಿದ್ದೀರಿ ಅಂತ” ಎಂಬ ಡೈಲಾಗ್‌ಗಳು ಕಂಡುಬರುತ್ತವೆ.

ಮುಂದುವರಿದು ರಾಜ್ಯವನ್ನು ಒಳ್ಳೆ ರೀತಿಯಲ್ಲಿ ಆಳಲಿ ಎಂದು ನೀವೆಲ್ಲ ಓಟ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದೀರಿ ಈ ಸಿಂಗಾರಪ್ಪನನ್ನು. ಇವನು ಎಷ್ಟು ದುಡ್ಡು ಮಾಡಿದ್ದಾನೆ ಅಂತ ನಿಮಗೆಲ್ಲರಿಗೂ ಎಂದು ಹೇಳಿದ್ದ ಸುದೀಪ್ ಡೈಲಾಗ್ ಅನ್ನು ಇಂದಿನ ರಾಜಕಾರಣಕ್ಕೆ ಅನ್ವಯಿಸಿ ಜನ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಕೇವಲ ಅರ್ಧ ಗಂಟೆ ಸಮಯದಲ್ಲಿ ಸಾವಿರಾರು ಜನ ವಿಡಿಯೋ ಷೇರ್ ಮಾಡಿರುವುದು ಕಂಡುಬಂದಿದೆ.

ವಿಡಿಯೋ ಹಂಚಿಕೊಂಡಿರುವ ಹಿರಿಯ ಲೇಖಕರಾದ ಪುರಷೋತ್ತಮ ಬಿಳಿಮಲೆಯವರು, “ಈ ಜನ ಬಹಳ ಕ್ರಿಯೇಟಿವ್‌ ಇದ್ದಾರಪ್ಪಾ! ಬಾಪ್ರೇ.. ವಾಟ್ಸಾಪ್‌ ತುಂಬಾ ಇದುವೇ.. ಇವರ ಸಿನೇಮಾ ಒಂದೂ ನೋಡಿರಲಿಲ್ಲ. ಇವತ್ತು ನೋಡಬೇಕು! ಸಖತ್‌ ಇಸ್ಟೈಲ್” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಚಾರ ಸಭೆಯಲ್ಲಿ ಕಿಚ್ಚ ಸುದೀಪ್ ಭಾಷಣದ ತುಣುಕು ಎಂದು ಸಿಕಂದರ್ ವಿಡಿಯೋ ಹಂಚಿಕೊಂಡಿದ್ದಾರೆ.

ಸುದೀಪ್‌ ಥರದ ನಟರು ಒಂದು ರಾಜಕೀಯ ನಿಲುವು ತೆಗೆದುಕೊಂಡರೆ ಅದನ್ನು ಧೈರ್ಯವಾಗಿ ಹೇಳುವ ಬದ್ಧತೆಯನ್ನೂ ತೋರಬೇಕು. ಇವತ್ತಿನ ಅವರ ಪತ್ರಿಕಾಗೋಷ್ಟಿಯ ಸಾರಾಂಶ ಏನೆಂದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅದಕ್ಕೆ ಕಾರಣ ಏನೇ ಇರಲಿ, ಅವರು ಈ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್‌ ಪ್ರಚಾರಕ ಎಂಬುದು ದಿಟ. ಇಷ್ಟನ್ನು ನೇರವಾಗಿ ಹೇಳುವ ಬದಲು, ನಾನು ರಾಜಕೀಯಕ್ಕೆ ಬಂದಿಲ್ಲ, ಪಾರ್ಟಿ ಸೇರಿಲ್ಲ, ವೈಯಕ್ತಿಕ ಸಂಬಂಧ, ಸಹಾಯ-ಋಣ ಲಂಗು ಲೊಟ್ಟೆ ಅನ್ನೋದು ಒಂಥರಾ ಹೇಡಿತನ. ಸುದೀಪ್‌ ಗೆ ಬಿಜೆಪಿ ಅಂತಲ್ಲ, ಯಾವುದೇ ಪಾರ್ಟಿ ಸೇರುವ ವೈಯಕ್ತಿಕ ಆಯ್ಕೆ, ಹಕ್ಕು ಇದ್ದೇ ಇರುತ್ತದೆ. ಆದರೆ ತನಗೆ ಯಾವುದೇ ರಾಜಕೀಯ ನಿಲುವು ಇಲ್ಲ ಎಂಬಂತೆ ಮಾತನಾಡುತ್ತ ಒಂದು ಪಾರ್ಟಿಯನ್ನು ಬೆಂಬಲಿಸುವುದು ಗೋಸುಂಬೆತನ. ಇತರ ಪಕ್ಷವನ್ನು ಬೆಂಬಲಿಸುವ ತನ್ನ ಅಭಿಮಾನಿಗಳು ಎಲ್ಲಿ ದೂರ ಹೋಗುತ್ತಾರೋ ಎಂಬ ಲೆಕ್ಕಾಚಾರ ಅವರನ್ನು ಕಾಡುತ್ತಿರಬಹುದು. ಇದನ್ನು ಸಮಯಸಾಧಕತನ ಅಂತಾರೆ. ಸುದೀಪ್‌ ಗೆ ಇದು ಬೇಡವಾಗಿತ್ತು. ಒಂದೇ ಗೆರೆ ನಂಬು, ಇಲ್ಲದೇ ಇದ್ದರೆ ನೆರೆ ನಂಬು ಎಂಬುವ ಮಾತೊಂದಿದೆ. ಸುದೀಪ್‌ ಮಧ್ಯೆ ನಿಂತಿದ್ದಾರೆ, ಅಂಜುಬುರುಕನಂತೆ. ಸದಾ ಎಲ್ಲರಿಗೂ ಬೋಧನೆ ಮಾಡುವ ಸುದೀಪ್‌ ಅವರಿಗೆ ಇಷ್ಟು ಮಾತ್ರ ತಿಳಿಯದೇ ಹೋಯ್ತು ಎನ್ನುವಂತಿಲ್ಲ. ಇದು ಗೊತ್ತಿದ್ದೇ ತಂದುಕೊಂಡಿರುವ ಸನ್ನಿವೇಶ. ಅಂದಹಾಗೆ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದರಿಂದ ಅವರು ರಾಜಕೀಯವಾಗಿಯೂ ಸಾರ್ವಜನಿಕ ಜೀವನಕ್ಕೆ ಬಂದಿದ್ದಾರೆ. ಹೀಗಾಗಿ ಟೀಕೆ, ವಿಮರ್ಶೆಗಳು ಹೆಚ್ಚಲಿವೆ. ಅದನ್ನು ಎದುರಿಸಲೂ ಅವರು ಸಜ್ಜಾಗಿರಬೇಕು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...