Homeಮುಖಪುಟಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ನೀಡುತ್ತೇನೆ. ಅವರು ಸೂಚಿಸಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖ್ಯಾತ ಕನ್ನಡ ಸಿನಿಮಾ ನಟ ಸುದೀಪ್ ಘೋಷಿಸಿದ ಬೆನ್ನಲ್ಲೆ ಅವರ ಕಿಚ್ಚ ಸಿನಿಮಾದಲ್ಲಿ ರಾಜಕಾರಣಿಗಳನ್ನು ಬೈಯ್ಯುವ, ಸಿಎಂ ಖುರ್ಚಿಗೆ ಶಾಸಕರನ್ನು ಖರೀದಿಸುವುದನ್ನು ಖಂಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, “ನಾನು ಮುಖ್ಯಮಂತ್ರಿಯಾಗಬೇಕು, ಅವನು ಮುಖ್ಯಮಂತ್ರಿಯಾಗಬೇಕು ಎಂದು ಒಬ್ಬೊಬ್ಬ ಎಂಎಲ್‌ಎಗಳನ್ನು ಪರ್ಚೇಸ್ ಮಾಡಲು ಕೋಟಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದ್ದಾರೆ ಈನನ್ಮಕ್ಕಳು. ಯಾರ್ಯಾರ ಹತ್ರ ಎಷ್ಟೆಸ್ಟು ಹೊಡೆದೆ? ಎಷ್ಟೆಷ್ಟು ತಿಂದೆ ಎಂದು ಹೇಳದೆ ಹೋದರೆ ನ್ಯಾಯ ಅಲ್ಲ ಅಲ್ವಾ? ಅವರುಗಳಿಗೂ ಗೊತ್ತಾಗಲಿ ಅವರ ರಕ್ತ ಹೀರಿ ನೀವು ಎಷ್ಟು ಹಣ ಸಂಪಾದನೆ ಮಾಡಿದ್ದೀರಿ ಅಂತ” ಎಂಬ ಡೈಲಾಗ್‌ಗಳು ಕಂಡುಬರುತ್ತವೆ.

ಮುಂದುವರಿದು ರಾಜ್ಯವನ್ನು ಒಳ್ಳೆ ರೀತಿಯಲ್ಲಿ ಆಳಲಿ ಎಂದು ನೀವೆಲ್ಲ ಓಟ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದೀರಿ ಈ ಸಿಂಗಾರಪ್ಪನನ್ನು. ಇವನು ಎಷ್ಟು ದುಡ್ಡು ಮಾಡಿದ್ದಾನೆ ಅಂತ ನಿಮಗೆಲ್ಲರಿಗೂ ಎಂದು ಹೇಳಿದ್ದ ಸುದೀಪ್ ಡೈಲಾಗ್ ಅನ್ನು ಇಂದಿನ ರಾಜಕಾರಣಕ್ಕೆ ಅನ್ವಯಿಸಿ ಜನ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಕೇವಲ ಅರ್ಧ ಗಂಟೆ ಸಮಯದಲ್ಲಿ ಸಾವಿರಾರು ಜನ ವಿಡಿಯೋ ಷೇರ್ ಮಾಡಿರುವುದು ಕಂಡುಬಂದಿದೆ.

ವಿಡಿಯೋ ಹಂಚಿಕೊಂಡಿರುವ ಹಿರಿಯ ಲೇಖಕರಾದ ಪುರಷೋತ್ತಮ ಬಿಳಿಮಲೆಯವರು, “ಈ ಜನ ಬಹಳ ಕ್ರಿಯೇಟಿವ್‌ ಇದ್ದಾರಪ್ಪಾ! ಬಾಪ್ರೇ.. ವಾಟ್ಸಾಪ್‌ ತುಂಬಾ ಇದುವೇ.. ಇವರ ಸಿನೇಮಾ ಒಂದೂ ನೋಡಿರಲಿಲ್ಲ. ಇವತ್ತು ನೋಡಬೇಕು! ಸಖತ್‌ ಇಸ್ಟೈಲ್” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಚಾರ ಸಭೆಯಲ್ಲಿ ಕಿಚ್ಚ ಸುದೀಪ್ ಭಾಷಣದ ತುಣುಕು ಎಂದು ಸಿಕಂದರ್ ವಿಡಿಯೋ ಹಂಚಿಕೊಂಡಿದ್ದಾರೆ.

ಸುದೀಪ್‌ ಥರದ ನಟರು ಒಂದು ರಾಜಕೀಯ ನಿಲುವು ತೆಗೆದುಕೊಂಡರೆ ಅದನ್ನು ಧೈರ್ಯವಾಗಿ ಹೇಳುವ ಬದ್ಧತೆಯನ್ನೂ ತೋರಬೇಕು. ಇವತ್ತಿನ ಅವರ ಪತ್ರಿಕಾಗೋಷ್ಟಿಯ ಸಾರಾಂಶ ಏನೆಂದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅದಕ್ಕೆ ಕಾರಣ ಏನೇ ಇರಲಿ, ಅವರು ಈ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್‌ ಪ್ರಚಾರಕ ಎಂಬುದು ದಿಟ. ಇಷ್ಟನ್ನು ನೇರವಾಗಿ ಹೇಳುವ ಬದಲು, ನಾನು ರಾಜಕೀಯಕ್ಕೆ ಬಂದಿಲ್ಲ, ಪಾರ್ಟಿ ಸೇರಿಲ್ಲ, ವೈಯಕ್ತಿಕ ಸಂಬಂಧ, ಸಹಾಯ-ಋಣ ಲಂಗು ಲೊಟ್ಟೆ ಅನ್ನೋದು ಒಂಥರಾ ಹೇಡಿತನ. ಸುದೀಪ್‌ ಗೆ ಬಿಜೆಪಿ ಅಂತಲ್ಲ, ಯಾವುದೇ ಪಾರ್ಟಿ ಸೇರುವ ವೈಯಕ್ತಿಕ ಆಯ್ಕೆ, ಹಕ್ಕು ಇದ್ದೇ ಇರುತ್ತದೆ. ಆದರೆ ತನಗೆ ಯಾವುದೇ ರಾಜಕೀಯ ನಿಲುವು ಇಲ್ಲ ಎಂಬಂತೆ ಮಾತನಾಡುತ್ತ ಒಂದು ಪಾರ್ಟಿಯನ್ನು ಬೆಂಬಲಿಸುವುದು ಗೋಸುಂಬೆತನ. ಇತರ ಪಕ್ಷವನ್ನು ಬೆಂಬಲಿಸುವ ತನ್ನ ಅಭಿಮಾನಿಗಳು ಎಲ್ಲಿ ದೂರ ಹೋಗುತ್ತಾರೋ ಎಂಬ ಲೆಕ್ಕಾಚಾರ ಅವರನ್ನು ಕಾಡುತ್ತಿರಬಹುದು. ಇದನ್ನು ಸಮಯಸಾಧಕತನ ಅಂತಾರೆ. ಸುದೀಪ್‌ ಗೆ ಇದು ಬೇಡವಾಗಿತ್ತು. ಒಂದೇ ಗೆರೆ ನಂಬು, ಇಲ್ಲದೇ ಇದ್ದರೆ ನೆರೆ ನಂಬು ಎಂಬುವ ಮಾತೊಂದಿದೆ. ಸುದೀಪ್‌ ಮಧ್ಯೆ ನಿಂತಿದ್ದಾರೆ, ಅಂಜುಬುರುಕನಂತೆ. ಸದಾ ಎಲ್ಲರಿಗೂ ಬೋಧನೆ ಮಾಡುವ ಸುದೀಪ್‌ ಅವರಿಗೆ ಇಷ್ಟು ಮಾತ್ರ ತಿಳಿಯದೇ ಹೋಯ್ತು ಎನ್ನುವಂತಿಲ್ಲ. ಇದು ಗೊತ್ತಿದ್ದೇ ತಂದುಕೊಂಡಿರುವ ಸನ್ನಿವೇಶ. ಅಂದಹಾಗೆ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದರಿಂದ ಅವರು ರಾಜಕೀಯವಾಗಿಯೂ ಸಾರ್ವಜನಿಕ ಜೀವನಕ್ಕೆ ಬಂದಿದ್ದಾರೆ. ಹೀಗಾಗಿ ಟೀಕೆ, ವಿಮರ್ಶೆಗಳು ಹೆಚ್ಚಲಿವೆ. ಅದನ್ನು ಎದುರಿಸಲೂ ಅವರು ಸಜ್ಜಾಗಿರಬೇಕು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...