Homeಮುಖಪುಟಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ನೀಡುತ್ತೇನೆ. ಅವರು ಸೂಚಿಸಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖ್ಯಾತ ಕನ್ನಡ ಸಿನಿಮಾ ನಟ ಸುದೀಪ್ ಘೋಷಿಸಿದ ಬೆನ್ನಲ್ಲೆ ಅವರ ಕಿಚ್ಚ ಸಿನಿಮಾದಲ್ಲಿ ರಾಜಕಾರಣಿಗಳನ್ನು ಬೈಯ್ಯುವ, ಸಿಎಂ ಖುರ್ಚಿಗೆ ಶಾಸಕರನ್ನು ಖರೀದಿಸುವುದನ್ನು ಖಂಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, “ನಾನು ಮುಖ್ಯಮಂತ್ರಿಯಾಗಬೇಕು, ಅವನು ಮುಖ್ಯಮಂತ್ರಿಯಾಗಬೇಕು ಎಂದು ಒಬ್ಬೊಬ್ಬ ಎಂಎಲ್‌ಎಗಳನ್ನು ಪರ್ಚೇಸ್ ಮಾಡಲು ಕೋಟಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದ್ದಾರೆ ಈನನ್ಮಕ್ಕಳು. ಯಾರ್ಯಾರ ಹತ್ರ ಎಷ್ಟೆಸ್ಟು ಹೊಡೆದೆ? ಎಷ್ಟೆಷ್ಟು ತಿಂದೆ ಎಂದು ಹೇಳದೆ ಹೋದರೆ ನ್ಯಾಯ ಅಲ್ಲ ಅಲ್ವಾ? ಅವರುಗಳಿಗೂ ಗೊತ್ತಾಗಲಿ ಅವರ ರಕ್ತ ಹೀರಿ ನೀವು ಎಷ್ಟು ಹಣ ಸಂಪಾದನೆ ಮಾಡಿದ್ದೀರಿ ಅಂತ” ಎಂಬ ಡೈಲಾಗ್‌ಗಳು ಕಂಡುಬರುತ್ತವೆ.

ಮುಂದುವರಿದು ರಾಜ್ಯವನ್ನು ಒಳ್ಳೆ ರೀತಿಯಲ್ಲಿ ಆಳಲಿ ಎಂದು ನೀವೆಲ್ಲ ಓಟ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದೀರಿ ಈ ಸಿಂಗಾರಪ್ಪನನ್ನು. ಇವನು ಎಷ್ಟು ದುಡ್ಡು ಮಾಡಿದ್ದಾನೆ ಅಂತ ನಿಮಗೆಲ್ಲರಿಗೂ ಎಂದು ಹೇಳಿದ್ದ ಸುದೀಪ್ ಡೈಲಾಗ್ ಅನ್ನು ಇಂದಿನ ರಾಜಕಾರಣಕ್ಕೆ ಅನ್ವಯಿಸಿ ಜನ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಕೇವಲ ಅರ್ಧ ಗಂಟೆ ಸಮಯದಲ್ಲಿ ಸಾವಿರಾರು ಜನ ವಿಡಿಯೋ ಷೇರ್ ಮಾಡಿರುವುದು ಕಂಡುಬಂದಿದೆ.

ವಿಡಿಯೋ ಹಂಚಿಕೊಂಡಿರುವ ಹಿರಿಯ ಲೇಖಕರಾದ ಪುರಷೋತ್ತಮ ಬಿಳಿಮಲೆಯವರು, “ಈ ಜನ ಬಹಳ ಕ್ರಿಯೇಟಿವ್‌ ಇದ್ದಾರಪ್ಪಾ! ಬಾಪ್ರೇ.. ವಾಟ್ಸಾಪ್‌ ತುಂಬಾ ಇದುವೇ.. ಇವರ ಸಿನೇಮಾ ಒಂದೂ ನೋಡಿರಲಿಲ್ಲ. ಇವತ್ತು ನೋಡಬೇಕು! ಸಖತ್‌ ಇಸ್ಟೈಲ್” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಚಾರ ಸಭೆಯಲ್ಲಿ ಕಿಚ್ಚ ಸುದೀಪ್ ಭಾಷಣದ ತುಣುಕು ಎಂದು ಸಿಕಂದರ್ ವಿಡಿಯೋ ಹಂಚಿಕೊಂಡಿದ್ದಾರೆ.

ಸುದೀಪ್‌ ಥರದ ನಟರು ಒಂದು ರಾಜಕೀಯ ನಿಲುವು ತೆಗೆದುಕೊಂಡರೆ ಅದನ್ನು ಧೈರ್ಯವಾಗಿ ಹೇಳುವ ಬದ್ಧತೆಯನ್ನೂ ತೋರಬೇಕು. ಇವತ್ತಿನ ಅವರ ಪತ್ರಿಕಾಗೋಷ್ಟಿಯ ಸಾರಾಂಶ ಏನೆಂದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅದಕ್ಕೆ ಕಾರಣ ಏನೇ ಇರಲಿ, ಅವರು ಈ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್‌ ಪ್ರಚಾರಕ ಎಂಬುದು ದಿಟ. ಇಷ್ಟನ್ನು ನೇರವಾಗಿ ಹೇಳುವ ಬದಲು, ನಾನು ರಾಜಕೀಯಕ್ಕೆ ಬಂದಿಲ್ಲ, ಪಾರ್ಟಿ ಸೇರಿಲ್ಲ, ವೈಯಕ್ತಿಕ ಸಂಬಂಧ, ಸಹಾಯ-ಋಣ ಲಂಗು ಲೊಟ್ಟೆ ಅನ್ನೋದು ಒಂಥರಾ ಹೇಡಿತನ. ಸುದೀಪ್‌ ಗೆ ಬಿಜೆಪಿ ಅಂತಲ್ಲ, ಯಾವುದೇ ಪಾರ್ಟಿ ಸೇರುವ ವೈಯಕ್ತಿಕ ಆಯ್ಕೆ, ಹಕ್ಕು ಇದ್ದೇ ಇರುತ್ತದೆ. ಆದರೆ ತನಗೆ ಯಾವುದೇ ರಾಜಕೀಯ ನಿಲುವು ಇಲ್ಲ ಎಂಬಂತೆ ಮಾತನಾಡುತ್ತ ಒಂದು ಪಾರ್ಟಿಯನ್ನು ಬೆಂಬಲಿಸುವುದು ಗೋಸುಂಬೆತನ. ಇತರ ಪಕ್ಷವನ್ನು ಬೆಂಬಲಿಸುವ ತನ್ನ ಅಭಿಮಾನಿಗಳು ಎಲ್ಲಿ ದೂರ ಹೋಗುತ್ತಾರೋ ಎಂಬ ಲೆಕ್ಕಾಚಾರ ಅವರನ್ನು ಕಾಡುತ್ತಿರಬಹುದು. ಇದನ್ನು ಸಮಯಸಾಧಕತನ ಅಂತಾರೆ. ಸುದೀಪ್‌ ಗೆ ಇದು ಬೇಡವಾಗಿತ್ತು. ಒಂದೇ ಗೆರೆ ನಂಬು, ಇಲ್ಲದೇ ಇದ್ದರೆ ನೆರೆ ನಂಬು ಎಂಬುವ ಮಾತೊಂದಿದೆ. ಸುದೀಪ್‌ ಮಧ್ಯೆ ನಿಂತಿದ್ದಾರೆ, ಅಂಜುಬುರುಕನಂತೆ. ಸದಾ ಎಲ್ಲರಿಗೂ ಬೋಧನೆ ಮಾಡುವ ಸುದೀಪ್‌ ಅವರಿಗೆ ಇಷ್ಟು ಮಾತ್ರ ತಿಳಿಯದೇ ಹೋಯ್ತು ಎನ್ನುವಂತಿಲ್ಲ. ಇದು ಗೊತ್ತಿದ್ದೇ ತಂದುಕೊಂಡಿರುವ ಸನ್ನಿವೇಶ. ಅಂದಹಾಗೆ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದರಿಂದ ಅವರು ರಾಜಕೀಯವಾಗಿಯೂ ಸಾರ್ವಜನಿಕ ಜೀವನಕ್ಕೆ ಬಂದಿದ್ದಾರೆ. ಹೀಗಾಗಿ ಟೀಕೆ, ವಿಮರ್ಶೆಗಳು ಹೆಚ್ಚಲಿವೆ. ಅದನ್ನು ಎದುರಿಸಲೂ ಅವರು ಸಜ್ಜಾಗಿರಬೇಕು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...