Homeಮುಖಪುಟಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ನೀಡುತ್ತೇನೆ. ಅವರು ಸೂಚಿಸಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖ್ಯಾತ ಕನ್ನಡ ಸಿನಿಮಾ ನಟ ಸುದೀಪ್ ಘೋಷಿಸಿದ ಬೆನ್ನಲ್ಲೆ ಅವರ ಕಿಚ್ಚ ಸಿನಿಮಾದಲ್ಲಿ ರಾಜಕಾರಣಿಗಳನ್ನು ಬೈಯ್ಯುವ, ಸಿಎಂ ಖುರ್ಚಿಗೆ ಶಾಸಕರನ್ನು ಖರೀದಿಸುವುದನ್ನು ಖಂಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, “ನಾನು ಮುಖ್ಯಮಂತ್ರಿಯಾಗಬೇಕು, ಅವನು ಮುಖ್ಯಮಂತ್ರಿಯಾಗಬೇಕು ಎಂದು ಒಬ್ಬೊಬ್ಬ ಎಂಎಲ್‌ಎಗಳನ್ನು ಪರ್ಚೇಸ್ ಮಾಡಲು ಕೋಟಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದ್ದಾರೆ ಈನನ್ಮಕ್ಕಳು. ಯಾರ್ಯಾರ ಹತ್ರ ಎಷ್ಟೆಸ್ಟು ಹೊಡೆದೆ? ಎಷ್ಟೆಷ್ಟು ತಿಂದೆ ಎಂದು ಹೇಳದೆ ಹೋದರೆ ನ್ಯಾಯ ಅಲ್ಲ ಅಲ್ವಾ? ಅವರುಗಳಿಗೂ ಗೊತ್ತಾಗಲಿ ಅವರ ರಕ್ತ ಹೀರಿ ನೀವು ಎಷ್ಟು ಹಣ ಸಂಪಾದನೆ ಮಾಡಿದ್ದೀರಿ ಅಂತ” ಎಂಬ ಡೈಲಾಗ್‌ಗಳು ಕಂಡುಬರುತ್ತವೆ.

ಮುಂದುವರಿದು ರಾಜ್ಯವನ್ನು ಒಳ್ಳೆ ರೀತಿಯಲ್ಲಿ ಆಳಲಿ ಎಂದು ನೀವೆಲ್ಲ ಓಟ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದೀರಿ ಈ ಸಿಂಗಾರಪ್ಪನನ್ನು. ಇವನು ಎಷ್ಟು ದುಡ್ಡು ಮಾಡಿದ್ದಾನೆ ಅಂತ ನಿಮಗೆಲ್ಲರಿಗೂ ಎಂದು ಹೇಳಿದ್ದ ಸುದೀಪ್ ಡೈಲಾಗ್ ಅನ್ನು ಇಂದಿನ ರಾಜಕಾರಣಕ್ಕೆ ಅನ್ವಯಿಸಿ ಜನ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಕೇವಲ ಅರ್ಧ ಗಂಟೆ ಸಮಯದಲ್ಲಿ ಸಾವಿರಾರು ಜನ ವಿಡಿಯೋ ಷೇರ್ ಮಾಡಿರುವುದು ಕಂಡುಬಂದಿದೆ.

ವಿಡಿಯೋ ಹಂಚಿಕೊಂಡಿರುವ ಹಿರಿಯ ಲೇಖಕರಾದ ಪುರಷೋತ್ತಮ ಬಿಳಿಮಲೆಯವರು, “ಈ ಜನ ಬಹಳ ಕ್ರಿಯೇಟಿವ್‌ ಇದ್ದಾರಪ್ಪಾ! ಬಾಪ್ರೇ.. ವಾಟ್ಸಾಪ್‌ ತುಂಬಾ ಇದುವೇ.. ಇವರ ಸಿನೇಮಾ ಒಂದೂ ನೋಡಿರಲಿಲ್ಲ. ಇವತ್ತು ನೋಡಬೇಕು! ಸಖತ್‌ ಇಸ್ಟೈಲ್” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಚಾರ ಸಭೆಯಲ್ಲಿ ಕಿಚ್ಚ ಸುದೀಪ್ ಭಾಷಣದ ತುಣುಕು ಎಂದು ಸಿಕಂದರ್ ವಿಡಿಯೋ ಹಂಚಿಕೊಂಡಿದ್ದಾರೆ.

ಸುದೀಪ್‌ ಥರದ ನಟರು ಒಂದು ರಾಜಕೀಯ ನಿಲುವು ತೆಗೆದುಕೊಂಡರೆ ಅದನ್ನು ಧೈರ್ಯವಾಗಿ ಹೇಳುವ ಬದ್ಧತೆಯನ್ನೂ ತೋರಬೇಕು. ಇವತ್ತಿನ ಅವರ ಪತ್ರಿಕಾಗೋಷ್ಟಿಯ ಸಾರಾಂಶ ಏನೆಂದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅದಕ್ಕೆ ಕಾರಣ ಏನೇ ಇರಲಿ, ಅವರು ಈ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್‌ ಪ್ರಚಾರಕ ಎಂಬುದು ದಿಟ. ಇಷ್ಟನ್ನು ನೇರವಾಗಿ ಹೇಳುವ ಬದಲು, ನಾನು ರಾಜಕೀಯಕ್ಕೆ ಬಂದಿಲ್ಲ, ಪಾರ್ಟಿ ಸೇರಿಲ್ಲ, ವೈಯಕ್ತಿಕ ಸಂಬಂಧ, ಸಹಾಯ-ಋಣ ಲಂಗು ಲೊಟ್ಟೆ ಅನ್ನೋದು ಒಂಥರಾ ಹೇಡಿತನ. ಸುದೀಪ್‌ ಗೆ ಬಿಜೆಪಿ ಅಂತಲ್ಲ, ಯಾವುದೇ ಪಾರ್ಟಿ ಸೇರುವ ವೈಯಕ್ತಿಕ ಆಯ್ಕೆ, ಹಕ್ಕು ಇದ್ದೇ ಇರುತ್ತದೆ. ಆದರೆ ತನಗೆ ಯಾವುದೇ ರಾಜಕೀಯ ನಿಲುವು ಇಲ್ಲ ಎಂಬಂತೆ ಮಾತನಾಡುತ್ತ ಒಂದು ಪಾರ್ಟಿಯನ್ನು ಬೆಂಬಲಿಸುವುದು ಗೋಸುಂಬೆತನ. ಇತರ ಪಕ್ಷವನ್ನು ಬೆಂಬಲಿಸುವ ತನ್ನ ಅಭಿಮಾನಿಗಳು ಎಲ್ಲಿ ದೂರ ಹೋಗುತ್ತಾರೋ ಎಂಬ ಲೆಕ್ಕಾಚಾರ ಅವರನ್ನು ಕಾಡುತ್ತಿರಬಹುದು. ಇದನ್ನು ಸಮಯಸಾಧಕತನ ಅಂತಾರೆ. ಸುದೀಪ್‌ ಗೆ ಇದು ಬೇಡವಾಗಿತ್ತು. ಒಂದೇ ಗೆರೆ ನಂಬು, ಇಲ್ಲದೇ ಇದ್ದರೆ ನೆರೆ ನಂಬು ಎಂಬುವ ಮಾತೊಂದಿದೆ. ಸುದೀಪ್‌ ಮಧ್ಯೆ ನಿಂತಿದ್ದಾರೆ, ಅಂಜುಬುರುಕನಂತೆ. ಸದಾ ಎಲ್ಲರಿಗೂ ಬೋಧನೆ ಮಾಡುವ ಸುದೀಪ್‌ ಅವರಿಗೆ ಇಷ್ಟು ಮಾತ್ರ ತಿಳಿಯದೇ ಹೋಯ್ತು ಎನ್ನುವಂತಿಲ್ಲ. ಇದು ಗೊತ್ತಿದ್ದೇ ತಂದುಕೊಂಡಿರುವ ಸನ್ನಿವೇಶ. ಅಂದಹಾಗೆ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದರಿಂದ ಅವರು ರಾಜಕೀಯವಾಗಿಯೂ ಸಾರ್ವಜನಿಕ ಜೀವನಕ್ಕೆ ಬಂದಿದ್ದಾರೆ. ಹೀಗಾಗಿ ಟೀಕೆ, ವಿಮರ್ಶೆಗಳು ಹೆಚ್ಚಲಿವೆ. ಅದನ್ನು ಎದುರಿಸಲೂ ಅವರು ಸಜ್ಜಾಗಿರಬೇಕು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...