Homeಮುಖಪುಟಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ನೀಡುತ್ತೇನೆ. ಅವರು ಸೂಚಿಸಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖ್ಯಾತ ಕನ್ನಡ ಸಿನಿಮಾ ನಟ ಸುದೀಪ್ ಘೋಷಿಸಿದ ಬೆನ್ನಲ್ಲೆ ಅವರ ಕಿಚ್ಚ ಸಿನಿಮಾದಲ್ಲಿ ರಾಜಕಾರಣಿಗಳನ್ನು ಬೈಯ್ಯುವ, ಸಿಎಂ ಖುರ್ಚಿಗೆ ಶಾಸಕರನ್ನು ಖರೀದಿಸುವುದನ್ನು ಖಂಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, “ನಾನು ಮುಖ್ಯಮಂತ್ರಿಯಾಗಬೇಕು, ಅವನು ಮುಖ್ಯಮಂತ್ರಿಯಾಗಬೇಕು ಎಂದು ಒಬ್ಬೊಬ್ಬ ಎಂಎಲ್‌ಎಗಳನ್ನು ಪರ್ಚೇಸ್ ಮಾಡಲು ಕೋಟಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದ್ದಾರೆ ಈನನ್ಮಕ್ಕಳು. ಯಾರ್ಯಾರ ಹತ್ರ ಎಷ್ಟೆಸ್ಟು ಹೊಡೆದೆ? ಎಷ್ಟೆಷ್ಟು ತಿಂದೆ ಎಂದು ಹೇಳದೆ ಹೋದರೆ ನ್ಯಾಯ ಅಲ್ಲ ಅಲ್ವಾ? ಅವರುಗಳಿಗೂ ಗೊತ್ತಾಗಲಿ ಅವರ ರಕ್ತ ಹೀರಿ ನೀವು ಎಷ್ಟು ಹಣ ಸಂಪಾದನೆ ಮಾಡಿದ್ದೀರಿ ಅಂತ” ಎಂಬ ಡೈಲಾಗ್‌ಗಳು ಕಂಡುಬರುತ್ತವೆ.

ಮುಂದುವರಿದು ರಾಜ್ಯವನ್ನು ಒಳ್ಳೆ ರೀತಿಯಲ್ಲಿ ಆಳಲಿ ಎಂದು ನೀವೆಲ್ಲ ಓಟ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದೀರಿ ಈ ಸಿಂಗಾರಪ್ಪನನ್ನು. ಇವನು ಎಷ್ಟು ದುಡ್ಡು ಮಾಡಿದ್ದಾನೆ ಅಂತ ನಿಮಗೆಲ್ಲರಿಗೂ ಎಂದು ಹೇಳಿದ್ದ ಸುದೀಪ್ ಡೈಲಾಗ್ ಅನ್ನು ಇಂದಿನ ರಾಜಕಾರಣಕ್ಕೆ ಅನ್ವಯಿಸಿ ಜನ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಕೇವಲ ಅರ್ಧ ಗಂಟೆ ಸಮಯದಲ್ಲಿ ಸಾವಿರಾರು ಜನ ವಿಡಿಯೋ ಷೇರ್ ಮಾಡಿರುವುದು ಕಂಡುಬಂದಿದೆ.

ವಿಡಿಯೋ ಹಂಚಿಕೊಂಡಿರುವ ಹಿರಿಯ ಲೇಖಕರಾದ ಪುರಷೋತ್ತಮ ಬಿಳಿಮಲೆಯವರು, “ಈ ಜನ ಬಹಳ ಕ್ರಿಯೇಟಿವ್‌ ಇದ್ದಾರಪ್ಪಾ! ಬಾಪ್ರೇ.. ವಾಟ್ಸಾಪ್‌ ತುಂಬಾ ಇದುವೇ.. ಇವರ ಸಿನೇಮಾ ಒಂದೂ ನೋಡಿರಲಿಲ್ಲ. ಇವತ್ತು ನೋಡಬೇಕು! ಸಖತ್‌ ಇಸ್ಟೈಲ್” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಚಾರ ಸಭೆಯಲ್ಲಿ ಕಿಚ್ಚ ಸುದೀಪ್ ಭಾಷಣದ ತುಣುಕು ಎಂದು ಸಿಕಂದರ್ ವಿಡಿಯೋ ಹಂಚಿಕೊಂಡಿದ್ದಾರೆ.

ಸುದೀಪ್‌ ಥರದ ನಟರು ಒಂದು ರಾಜಕೀಯ ನಿಲುವು ತೆಗೆದುಕೊಂಡರೆ ಅದನ್ನು ಧೈರ್ಯವಾಗಿ ಹೇಳುವ ಬದ್ಧತೆಯನ್ನೂ ತೋರಬೇಕು. ಇವತ್ತಿನ ಅವರ ಪತ್ರಿಕಾಗೋಷ್ಟಿಯ ಸಾರಾಂಶ ಏನೆಂದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅದಕ್ಕೆ ಕಾರಣ ಏನೇ ಇರಲಿ, ಅವರು ಈ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್‌ ಪ್ರಚಾರಕ ಎಂಬುದು ದಿಟ. ಇಷ್ಟನ್ನು ನೇರವಾಗಿ ಹೇಳುವ ಬದಲು, ನಾನು ರಾಜಕೀಯಕ್ಕೆ ಬಂದಿಲ್ಲ, ಪಾರ್ಟಿ ಸೇರಿಲ್ಲ, ವೈಯಕ್ತಿಕ ಸಂಬಂಧ, ಸಹಾಯ-ಋಣ ಲಂಗು ಲೊಟ್ಟೆ ಅನ್ನೋದು ಒಂಥರಾ ಹೇಡಿತನ. ಸುದೀಪ್‌ ಗೆ ಬಿಜೆಪಿ ಅಂತಲ್ಲ, ಯಾವುದೇ ಪಾರ್ಟಿ ಸೇರುವ ವೈಯಕ್ತಿಕ ಆಯ್ಕೆ, ಹಕ್ಕು ಇದ್ದೇ ಇರುತ್ತದೆ. ಆದರೆ ತನಗೆ ಯಾವುದೇ ರಾಜಕೀಯ ನಿಲುವು ಇಲ್ಲ ಎಂಬಂತೆ ಮಾತನಾಡುತ್ತ ಒಂದು ಪಾರ್ಟಿಯನ್ನು ಬೆಂಬಲಿಸುವುದು ಗೋಸುಂಬೆತನ. ಇತರ ಪಕ್ಷವನ್ನು ಬೆಂಬಲಿಸುವ ತನ್ನ ಅಭಿಮಾನಿಗಳು ಎಲ್ಲಿ ದೂರ ಹೋಗುತ್ತಾರೋ ಎಂಬ ಲೆಕ್ಕಾಚಾರ ಅವರನ್ನು ಕಾಡುತ್ತಿರಬಹುದು. ಇದನ್ನು ಸಮಯಸಾಧಕತನ ಅಂತಾರೆ. ಸುದೀಪ್‌ ಗೆ ಇದು ಬೇಡವಾಗಿತ್ತು. ಒಂದೇ ಗೆರೆ ನಂಬು, ಇಲ್ಲದೇ ಇದ್ದರೆ ನೆರೆ ನಂಬು ಎಂಬುವ ಮಾತೊಂದಿದೆ. ಸುದೀಪ್‌ ಮಧ್ಯೆ ನಿಂತಿದ್ದಾರೆ, ಅಂಜುಬುರುಕನಂತೆ. ಸದಾ ಎಲ್ಲರಿಗೂ ಬೋಧನೆ ಮಾಡುವ ಸುದೀಪ್‌ ಅವರಿಗೆ ಇಷ್ಟು ಮಾತ್ರ ತಿಳಿಯದೇ ಹೋಯ್ತು ಎನ್ನುವಂತಿಲ್ಲ. ಇದು ಗೊತ್ತಿದ್ದೇ ತಂದುಕೊಂಡಿರುವ ಸನ್ನಿವೇಶ. ಅಂದಹಾಗೆ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದರಿಂದ ಅವರು ರಾಜಕೀಯವಾಗಿಯೂ ಸಾರ್ವಜನಿಕ ಜೀವನಕ್ಕೆ ಬಂದಿದ್ದಾರೆ. ಹೀಗಾಗಿ ಟೀಕೆ, ವಿಮರ್ಶೆಗಳು ಹೆಚ್ಚಲಿವೆ. ಅದನ್ನು ಎದುರಿಸಲೂ ಅವರು ಸಜ್ಜಾಗಿರಬೇಕು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...