Homeಮುಖಪುಟವಿಡಿಯೊ➤ ಅಮಿತ್‌ ಶಾ ‘ಚಪ್ಪಲಿ’ ಹೊತ್ತ ಬಿಜೆಪಿ ರಾಜ್ಯಾಧ್ಯಕ್ಷ!

ವಿಡಿಯೊ➤ ಅಮಿತ್‌ ಶಾ ‘ಚಪ್ಪಲಿ’ ಹೊತ್ತ ಬಿಜೆಪಿ ರಾಜ್ಯಾಧ್ಯಕ್ಷ!

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಅವರು ತೆಲಂಗಾಣದ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಹೊರಗೆ ಬರುತ್ತಿದ್ದಂತೆ ಅವರ ಚಪ್ಪಲಿಯನ್ನು ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರು ಕೈಯಿಂದ ಎತ್ತಿ ಕೊಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಈ ಘಟನೆಯು ಬಿಜೆಪಿಯೊಳಗೆ ಅಸ್ತಿತ್ವದಲ್ಲಿರುವ ಶ್ರೇಣಿಕೃತ ವ್ಯವಸ್ಥೆಯ ಬಗ್ಗೆ ತಿಳಿಸುತ್ತದೆ ಎಂದು ಹೇಳಿವೆ.

ಗೃಹ ಸಚಿವ ಅಮಿತ್ ಶಾ ಅವರು ತಮ್ಮ ರಾಜ್ಯ ಪ್ರವಾಸದ ಭಾಗವಾಗಿ ಹೈದರಾಬಾದ್‌ನ ಉಜ್ಜೆಯಿನಿ ಮಹಾಕಾಳಿ ದೇವಸ್ಥಾನಕ್ಕೆ ಭಾನುವಾರ ಇತರ ರಾಜ್ಯ ನಾಯಕರೊಂದಿಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಅಮಿತ್ ಶಾ ಮತ್ತು ಸಂಜಯ್ ಕುಮಾರ್‌ ದೇವಸ್ಥಾನದಿಂದ ಹೊರ ಬರುತ್ತಿದ್ದಂತೆ ಸಂಜಯ್ ಕುಮಾರ್‌ ಅವರು ತರಾತುರಿಯಲ್ಲಿ ಮುಂದೆ ಸಾಗಿ ಅಮಿತ್ ಶಾ ಅವರ ಚಪ್ಪಲಿಯನ್ನು ಕೈಯಿಂದ ತಂದು ಅವರ ಪಾದದ ಬಳಿ ಇಡುತ್ತಿರುವ ವೈಡಿಯೊ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ರಾಜ್ಯಾಧ್ಯಕ್ಷರ ಈ ನಡೆಯು, ಬಿಜೆಪಿ ನಾಯಕರು ಉನ್ನತ ಅಧಿಕಾರಕ್ಕಾಗಿ ಗುಲಾಮಗಿರಿಯ ಮನಸ್ಥಿತಿಯನ್ನು ಹೊಂದಿರಬೇಕು ಎಂಬುವುದನ್ನು ಸೂಚಿಸುತ್ತದೆ ಎಂದು ರಾಜಕೀಯ ವಲಯದಿಂದ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಮೊಟ್ಟೆ ಎಸೆದವ ಕಾಂಗ್ರೆಸ್ ಆಗಿದ್ದರೆ ಜೈಲಿಗೆ ಕಳಿಸಿ’: ಬಿಜೆಪಿ ಶಾಸಕನೊಂದಿಗಿನ ಆರೋಪಿಯ ಚಿತ್ರ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಟಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ತೆಲಂಗಾಣ ಸಚಿವ ಕೆಟಿ ರಾಮರಾವ್, “ದೆಹಲಿಯ ಚಪ್ಪಲಿ ಹೊತ್ತ ಗುಜರಾತಿ ಗುಲಾಮರ ಕೃತ್ಯಗಳನ್ನು ತೆಲಂಗಾಣದ ಜನರು ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

“ತೆಲಂಗಾಣದ ಸ್ವಾಭಿಮಾನವನ್ನು ಅವಹೇಳನ ಮಾಡುವ ಪ್ರಯತ್ನವನ್ನು ಹಿಂದಕ್ಕೆ ತಳ್ಳಲು ಮತ್ತು ರಾಜ್ಯದ ಹೆಮ್ಮೆಯನ್ನು ಎತ್ತಿ ಹಿಡಿಯಲು ತೆಲಂಗಾಣದ ಜನಸಮುದಾಯ ಸಿದ್ಧರಾಗಿದ್ದಾರೆ. ಜೈ ತೆಲಂಗಾಣ” ಎಂದು ಕೆಟಿಆರ್ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಕಾಂಗ್ರೆಸ್ ಮತ್ತು ಇತರ ರಾಜಕೀಯ ನಾಯಕರಯ ಇದು ಬಿಜೆಪಿಯ ‘ಗುಲಾಮಗಿರಿ ಮನಸ್ಥಿತಿ’ಯನ್ನು ಸೂಚಿಸುತ್ತದೆ ಮತ್ತು ಇದರಿಂದ ತೆಲಂಗಾಣದ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ.

ಬಂಡಿ ಸಂಜಯ್ ಕುಮಾರ್‌ ಅವರು ತೆಲಂಗಾಣದ ಸ್ವಾಭಿಮಾನವನ್ನು ಈ ಹಿಂದಿನ ‘ತಡಿಪಾರ್’ನ ಪಾದದಲ್ಲಿ ಇರಿಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಹೇಳಿದೆ.

“ಬಿಜೆಪಿ ತೆಲಂಗಾಣ ನಾಯಕರ ನಡುವಳಿಕೆ ಗುಲಾಮಗಿರಿಯ ಪರಮಾವಧಿ! ಬಿಜೆಪಿಯಲ್ಲಿ ನಿಮ್ಮ ಬದುಕು ಎಷ್ಟೊಂದು ಹೀನಾಯವಾಗಿದೆ! ತೆಲಂಗಾಣ ಬಿಜೆಪಿ ಅಧ್ಯಕ್ಷರೇ ಚಪ್ಪಲಿಯನ್ನು ಹೊತ್ತರೆ, ಉಳಿದವರು ಏನು ಮಾಡಬೇಕು?” ಎಂದು ಕಾಂಗ್ರೆಸ್ ಕೇಳಿದೆ.

ಇದನ್ನೂ ಓದಿ: ಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ನಲ್ಗೊಂಡ ಜಿಲ್ಲೆಯ ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಮಿತ್‌ ಶಾ ತೆಲಂಗಾಣಕ್ಕೆ ಭೇಟಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...