Homeಕರ್ನಾಟಕಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ...

ಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ…

ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ

- Advertisement -
- Advertisement -

’ಬಿದ್ದರೂ ಮೀಸೆ ಮಣ್ಣಾಗಲಿಲ್ಲ’ ಎನ್ನುವವರನ್ನು ನೋಡಿರುತ್ತೀರಿ. ಆದರೆ ಇಡೀ ಮಣ್ಣಿನಲ್ಲಿ ಹೂತು ಹಾಕಿದರೂ ಕೂಡ ಮೀಸೆ ಮಣ್ಣಾಗಲ್ಲಿಲ್ಲ ಎಂಬುವವರನ್ನು ನೀವು ನೋಡಿದ್ದೀರಾ? ಇಲ್ಲವಾದರೆ ಬನ್ನಿ ತೋರಿಸುತ್ತೇವೆ ಅವರೆ ಕರ್ನಾಟಕ ರಾಜ್ಯ ಬಿಜಿಪಿ ಘಟಕ…

ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವ ಭರದಲ್ಲಿ ಮೊದಲಿಗೆ 31 ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ವೀಕ್ಷಣೆ ಮುಗಿದಿದೆ ಈಗ 32ನೇ ಜಿಲ್ಲೆಗೆ ಬಂದಿದ್ದೀವಿ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿದ್ದನ್ನು ಇಡೀ ರಾಜ್ಯವೇ ನೋಡಿ ನಕ್ಕಿದೆ. ಇನ್ನು ಮುಂದುವರೆದು ಮಧ್ಯಾಹ್ನದ ವೇಳೆಗೆ ಕರ್ನಾಟಕದ 34 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ ಎಂದು ಹೇಳಿ ಮತ್ತೆ ನಗೆಪಾಟಿಲೀಗಿದ್ದಾರು ಮಾನ್ಯ ಅಧ್ಯಕ್ಷರು..

ಮೂರು ಬಾರಿ ಸಂಸದರು, ದೊಡ್ಡ ಪಕ್ಷವೊಂದರ ರಾಜ್ಯಧ್ಯಕ್ಷರು ಆದ ನಳಿನ್‌ ಕುಮಾರ್‌ ಕಟೀಲ್ ಪ್ರಚಾರದ ಹಪಾಹಪಿಗೆ ಬಿದ್ದು ಬಾಯಿಗೆ ಬಂದ ಸುಳ್ಳು ಹೇಳಿ ಸಿಕ್ಕಿಬಿದ್ದಿರೂ ಮೀಸೆ ಮಣ್ಣಗಲಿಲ್ಲ ಎಂದುಕೊಂಡು ಸುಮ್ಮನಿದ್ದಾರೆ. ಆದರೆ ರಾಜ್ಯ ಬಿಜೆಪಿ ಘಟಕ ಮಾತ್ರ ಸುಮ್ಮನಿರಲು ಸಿದ್ದರಿಲ್ಲ. ಘಟನೆಗೆ ತೇಪೆ ಹಚ್ಚಲು ಮತ್ತಷ್ಟು ನಗೆಪಾಟಿಲಿಗೀಡಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಕರ್ನಾಟಕವೂ “ಪಕ್ಷ ಎಂದರೆ ನಕಲಿ ಗಾಂಧಿ ಪರಿವಾರ, ಸಂಘಟನೆ ಎಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರುಗಳ ಆರಾಧನೆ ಹಾಗೂ ದೆಹಲಿಗೆ ಹೋಗುವುದೇ ಸಂಘಟನಾತ್ಮಕ ಪ್ರವಾಸ ಎಂದು ತಿಳಿದಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿಯ 36 ಸಂಘಟನಾತ್ಮಕ ಜಿಲ್ಲೆಗಳ ವಿಚಾರ ಹೇಗೆ ಅರ್ಥವಾದೀತು? ಅಪಪ್ರಚಾರ ಮಾಡುವುದನ್ನು ಬಿಟ್ಟು ಪಕ್ಷದ ಸಂಘಟನೆ ಕಡೆ ಗಮನ ಹರಿಸಲಿ.” ಎಂದು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಲು ಮುಂದಾಗಿದೆ.

ಅಂದರೆ ಈ ಬಿಜೆಪಿಯವರಷ್ಟು ಸುಳ್ಳು ಹೇಳುವವರು ಈ ದೇಶದಲ್ಲಿ ಯಾರೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಪ್ರವಾಹ ಸಂಭವಿಸಿ 2 ತಿಂಗಳು ಕಳೆದಿದ್ದರೂ ಸಮರ್ಪಕ ಪರಿಹಾರ, ಪುನರ್ವಸತಿ ನೀಡದೇ ಜನ ಬೀದಿಗೆ ಬಿದ್ದಿದ್ದರೂ ಸಹ ಮಾಡಬೇಕಾದ ಕೆಲಸ ಬಿಟ್ಟು ಪ್ರಚಾರ ಮುಂದಾಗಿರುವ ಬಿಜೆಪಿ ಅಲ್ಲಿಯೂ ಕಾಂಗ್ರೆಸ್‌ ಅನ್ನು ಟೀಕಿಸುವ ಮೂಲಕ ತಮ್ಮ ನೀಚ ಬುದ್ಧಿ ಪ್ರದರ್ಶಿಸಿದೆ ಎಂದು ಹಲವಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ.

ಅಸಲಿಗೆ ಬಿಜೆಪಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಮಹರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲಿಸಿದರೆ ಆಲಮಟ್ಟಿಯಿಂದ ನಿಮಗೆ ನೀರು ಬಿಡುತ್ತೇವೆಂದು ಕರ್ನಾಟಕ ದ್ರೋಹಿ ಕೆಲಸ ಮಾಡುತ್ತಿದ್ದಾರೆ. ಸಾಲದು ಎಂಬಂತೆ 36 ಸಂಘಟನಾತ್ಮಕ ಜಿಲ್ಲೆಗಳೆಂದು ನಾಟಕ ಆಡುತ್ತಿದ್ದಾರೆ. ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...