Homeಕರ್ನಾಟಕಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ...

ಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ…

ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ

- Advertisement -
- Advertisement -

’ಬಿದ್ದರೂ ಮೀಸೆ ಮಣ್ಣಾಗಲಿಲ್ಲ’ ಎನ್ನುವವರನ್ನು ನೋಡಿರುತ್ತೀರಿ. ಆದರೆ ಇಡೀ ಮಣ್ಣಿನಲ್ಲಿ ಹೂತು ಹಾಕಿದರೂ ಕೂಡ ಮೀಸೆ ಮಣ್ಣಾಗಲ್ಲಿಲ್ಲ ಎಂಬುವವರನ್ನು ನೀವು ನೋಡಿದ್ದೀರಾ? ಇಲ್ಲವಾದರೆ ಬನ್ನಿ ತೋರಿಸುತ್ತೇವೆ ಅವರೆ ಕರ್ನಾಟಕ ರಾಜ್ಯ ಬಿಜಿಪಿ ಘಟಕ…

ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವ ಭರದಲ್ಲಿ ಮೊದಲಿಗೆ 31 ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ವೀಕ್ಷಣೆ ಮುಗಿದಿದೆ ಈಗ 32ನೇ ಜಿಲ್ಲೆಗೆ ಬಂದಿದ್ದೀವಿ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿದ್ದನ್ನು ಇಡೀ ರಾಜ್ಯವೇ ನೋಡಿ ನಕ್ಕಿದೆ. ಇನ್ನು ಮುಂದುವರೆದು ಮಧ್ಯಾಹ್ನದ ವೇಳೆಗೆ ಕರ್ನಾಟಕದ 34 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ ಎಂದು ಹೇಳಿ ಮತ್ತೆ ನಗೆಪಾಟಿಲೀಗಿದ್ದಾರು ಮಾನ್ಯ ಅಧ್ಯಕ್ಷರು..

ಮೂರು ಬಾರಿ ಸಂಸದರು, ದೊಡ್ಡ ಪಕ್ಷವೊಂದರ ರಾಜ್ಯಧ್ಯಕ್ಷರು ಆದ ನಳಿನ್‌ ಕುಮಾರ್‌ ಕಟೀಲ್ ಪ್ರಚಾರದ ಹಪಾಹಪಿಗೆ ಬಿದ್ದು ಬಾಯಿಗೆ ಬಂದ ಸುಳ್ಳು ಹೇಳಿ ಸಿಕ್ಕಿಬಿದ್ದಿರೂ ಮೀಸೆ ಮಣ್ಣಗಲಿಲ್ಲ ಎಂದುಕೊಂಡು ಸುಮ್ಮನಿದ್ದಾರೆ. ಆದರೆ ರಾಜ್ಯ ಬಿಜೆಪಿ ಘಟಕ ಮಾತ್ರ ಸುಮ್ಮನಿರಲು ಸಿದ್ದರಿಲ್ಲ. ಘಟನೆಗೆ ತೇಪೆ ಹಚ್ಚಲು ಮತ್ತಷ್ಟು ನಗೆಪಾಟಿಲಿಗೀಡಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಕರ್ನಾಟಕವೂ “ಪಕ್ಷ ಎಂದರೆ ನಕಲಿ ಗಾಂಧಿ ಪರಿವಾರ, ಸಂಘಟನೆ ಎಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರುಗಳ ಆರಾಧನೆ ಹಾಗೂ ದೆಹಲಿಗೆ ಹೋಗುವುದೇ ಸಂಘಟನಾತ್ಮಕ ಪ್ರವಾಸ ಎಂದು ತಿಳಿದಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿಯ 36 ಸಂಘಟನಾತ್ಮಕ ಜಿಲ್ಲೆಗಳ ವಿಚಾರ ಹೇಗೆ ಅರ್ಥವಾದೀತು? ಅಪಪ್ರಚಾರ ಮಾಡುವುದನ್ನು ಬಿಟ್ಟು ಪಕ್ಷದ ಸಂಘಟನೆ ಕಡೆ ಗಮನ ಹರಿಸಲಿ.” ಎಂದು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಲು ಮುಂದಾಗಿದೆ.

ಅಂದರೆ ಈ ಬಿಜೆಪಿಯವರಷ್ಟು ಸುಳ್ಳು ಹೇಳುವವರು ಈ ದೇಶದಲ್ಲಿ ಯಾರೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಪ್ರವಾಹ ಸಂಭವಿಸಿ 2 ತಿಂಗಳು ಕಳೆದಿದ್ದರೂ ಸಮರ್ಪಕ ಪರಿಹಾರ, ಪುನರ್ವಸತಿ ನೀಡದೇ ಜನ ಬೀದಿಗೆ ಬಿದ್ದಿದ್ದರೂ ಸಹ ಮಾಡಬೇಕಾದ ಕೆಲಸ ಬಿಟ್ಟು ಪ್ರಚಾರ ಮುಂದಾಗಿರುವ ಬಿಜೆಪಿ ಅಲ್ಲಿಯೂ ಕಾಂಗ್ರೆಸ್‌ ಅನ್ನು ಟೀಕಿಸುವ ಮೂಲಕ ತಮ್ಮ ನೀಚ ಬುದ್ಧಿ ಪ್ರದರ್ಶಿಸಿದೆ ಎಂದು ಹಲವಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ.

ಅಸಲಿಗೆ ಬಿಜೆಪಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಮಹರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲಿಸಿದರೆ ಆಲಮಟ್ಟಿಯಿಂದ ನಿಮಗೆ ನೀರು ಬಿಡುತ್ತೇವೆಂದು ಕರ್ನಾಟಕ ದ್ರೋಹಿ ಕೆಲಸ ಮಾಡುತ್ತಿದ್ದಾರೆ. ಸಾಲದು ಎಂಬಂತೆ 36 ಸಂಘಟನಾತ್ಮಕ ಜಿಲ್ಲೆಗಳೆಂದು ನಾಟಕ ಆಡುತ್ತಿದ್ದಾರೆ. ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...