Homeಕರ್ನಾಟಕಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ...

ಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ…

ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ

- Advertisement -
- Advertisement -

’ಬಿದ್ದರೂ ಮೀಸೆ ಮಣ್ಣಾಗಲಿಲ್ಲ’ ಎನ್ನುವವರನ್ನು ನೋಡಿರುತ್ತೀರಿ. ಆದರೆ ಇಡೀ ಮಣ್ಣಿನಲ್ಲಿ ಹೂತು ಹಾಕಿದರೂ ಕೂಡ ಮೀಸೆ ಮಣ್ಣಾಗಲ್ಲಿಲ್ಲ ಎಂಬುವವರನ್ನು ನೀವು ನೋಡಿದ್ದೀರಾ? ಇಲ್ಲವಾದರೆ ಬನ್ನಿ ತೋರಿಸುತ್ತೇವೆ ಅವರೆ ಕರ್ನಾಟಕ ರಾಜ್ಯ ಬಿಜಿಪಿ ಘಟಕ…

ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವ ಭರದಲ್ಲಿ ಮೊದಲಿಗೆ 31 ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ವೀಕ್ಷಣೆ ಮುಗಿದಿದೆ ಈಗ 32ನೇ ಜಿಲ್ಲೆಗೆ ಬಂದಿದ್ದೀವಿ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿದ್ದನ್ನು ಇಡೀ ರಾಜ್ಯವೇ ನೋಡಿ ನಕ್ಕಿದೆ. ಇನ್ನು ಮುಂದುವರೆದು ಮಧ್ಯಾಹ್ನದ ವೇಳೆಗೆ ಕರ್ನಾಟಕದ 34 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ ಎಂದು ಹೇಳಿ ಮತ್ತೆ ನಗೆಪಾಟಿಲೀಗಿದ್ದಾರು ಮಾನ್ಯ ಅಧ್ಯಕ್ಷರು..

ಮೂರು ಬಾರಿ ಸಂಸದರು, ದೊಡ್ಡ ಪಕ್ಷವೊಂದರ ರಾಜ್ಯಧ್ಯಕ್ಷರು ಆದ ನಳಿನ್‌ ಕುಮಾರ್‌ ಕಟೀಲ್ ಪ್ರಚಾರದ ಹಪಾಹಪಿಗೆ ಬಿದ್ದು ಬಾಯಿಗೆ ಬಂದ ಸುಳ್ಳು ಹೇಳಿ ಸಿಕ್ಕಿಬಿದ್ದಿರೂ ಮೀಸೆ ಮಣ್ಣಗಲಿಲ್ಲ ಎಂದುಕೊಂಡು ಸುಮ್ಮನಿದ್ದಾರೆ. ಆದರೆ ರಾಜ್ಯ ಬಿಜೆಪಿ ಘಟಕ ಮಾತ್ರ ಸುಮ್ಮನಿರಲು ಸಿದ್ದರಿಲ್ಲ. ಘಟನೆಗೆ ತೇಪೆ ಹಚ್ಚಲು ಮತ್ತಷ್ಟು ನಗೆಪಾಟಿಲಿಗೀಡಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಕರ್ನಾಟಕವೂ “ಪಕ್ಷ ಎಂದರೆ ನಕಲಿ ಗಾಂಧಿ ಪರಿವಾರ, ಸಂಘಟನೆ ಎಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರುಗಳ ಆರಾಧನೆ ಹಾಗೂ ದೆಹಲಿಗೆ ಹೋಗುವುದೇ ಸಂಘಟನಾತ್ಮಕ ಪ್ರವಾಸ ಎಂದು ತಿಳಿದಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿಯ 36 ಸಂಘಟನಾತ್ಮಕ ಜಿಲ್ಲೆಗಳ ವಿಚಾರ ಹೇಗೆ ಅರ್ಥವಾದೀತು? ಅಪಪ್ರಚಾರ ಮಾಡುವುದನ್ನು ಬಿಟ್ಟು ಪಕ್ಷದ ಸಂಘಟನೆ ಕಡೆ ಗಮನ ಹರಿಸಲಿ.” ಎಂದು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಲು ಮುಂದಾಗಿದೆ.

ಅಂದರೆ ಈ ಬಿಜೆಪಿಯವರಷ್ಟು ಸುಳ್ಳು ಹೇಳುವವರು ಈ ದೇಶದಲ್ಲಿ ಯಾರೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಪ್ರವಾಹ ಸಂಭವಿಸಿ 2 ತಿಂಗಳು ಕಳೆದಿದ್ದರೂ ಸಮರ್ಪಕ ಪರಿಹಾರ, ಪುನರ್ವಸತಿ ನೀಡದೇ ಜನ ಬೀದಿಗೆ ಬಿದ್ದಿದ್ದರೂ ಸಹ ಮಾಡಬೇಕಾದ ಕೆಲಸ ಬಿಟ್ಟು ಪ್ರಚಾರ ಮುಂದಾಗಿರುವ ಬಿಜೆಪಿ ಅಲ್ಲಿಯೂ ಕಾಂಗ್ರೆಸ್‌ ಅನ್ನು ಟೀಕಿಸುವ ಮೂಲಕ ತಮ್ಮ ನೀಚ ಬುದ್ಧಿ ಪ್ರದರ್ಶಿಸಿದೆ ಎಂದು ಹಲವಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ.

ಅಸಲಿಗೆ ಬಿಜೆಪಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಮಹರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲಿಸಿದರೆ ಆಲಮಟ್ಟಿಯಿಂದ ನಿಮಗೆ ನೀರು ಬಿಡುತ್ತೇವೆಂದು ಕರ್ನಾಟಕ ದ್ರೋಹಿ ಕೆಲಸ ಮಾಡುತ್ತಿದ್ದಾರೆ. ಸಾಲದು ಎಂಬಂತೆ 36 ಸಂಘಟನಾತ್ಮಕ ಜಿಲ್ಲೆಗಳೆಂದು ನಾಟಕ ಆಡುತ್ತಿದ್ದಾರೆ. ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...