Homeಕರ್ನಾಟಕಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ...

ಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ…

ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ

- Advertisement -
- Advertisement -

’ಬಿದ್ದರೂ ಮೀಸೆ ಮಣ್ಣಾಗಲಿಲ್ಲ’ ಎನ್ನುವವರನ್ನು ನೋಡಿರುತ್ತೀರಿ. ಆದರೆ ಇಡೀ ಮಣ್ಣಿನಲ್ಲಿ ಹೂತು ಹಾಕಿದರೂ ಕೂಡ ಮೀಸೆ ಮಣ್ಣಾಗಲ್ಲಿಲ್ಲ ಎಂಬುವವರನ್ನು ನೀವು ನೋಡಿದ್ದೀರಾ? ಇಲ್ಲವಾದರೆ ಬನ್ನಿ ತೋರಿಸುತ್ತೇವೆ ಅವರೆ ಕರ್ನಾಟಕ ರಾಜ್ಯ ಬಿಜಿಪಿ ಘಟಕ…

ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವ ಭರದಲ್ಲಿ ಮೊದಲಿಗೆ 31 ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ವೀಕ್ಷಣೆ ಮುಗಿದಿದೆ ಈಗ 32ನೇ ಜಿಲ್ಲೆಗೆ ಬಂದಿದ್ದೀವಿ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿದ್ದನ್ನು ಇಡೀ ರಾಜ್ಯವೇ ನೋಡಿ ನಕ್ಕಿದೆ. ಇನ್ನು ಮುಂದುವರೆದು ಮಧ್ಯಾಹ್ನದ ವೇಳೆಗೆ ಕರ್ನಾಟಕದ 34 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ ಎಂದು ಹೇಳಿ ಮತ್ತೆ ನಗೆಪಾಟಿಲೀಗಿದ್ದಾರು ಮಾನ್ಯ ಅಧ್ಯಕ್ಷರು..

ಮೂರು ಬಾರಿ ಸಂಸದರು, ದೊಡ್ಡ ಪಕ್ಷವೊಂದರ ರಾಜ್ಯಧ್ಯಕ್ಷರು ಆದ ನಳಿನ್‌ ಕುಮಾರ್‌ ಕಟೀಲ್ ಪ್ರಚಾರದ ಹಪಾಹಪಿಗೆ ಬಿದ್ದು ಬಾಯಿಗೆ ಬಂದ ಸುಳ್ಳು ಹೇಳಿ ಸಿಕ್ಕಿಬಿದ್ದಿರೂ ಮೀಸೆ ಮಣ್ಣಗಲಿಲ್ಲ ಎಂದುಕೊಂಡು ಸುಮ್ಮನಿದ್ದಾರೆ. ಆದರೆ ರಾಜ್ಯ ಬಿಜೆಪಿ ಘಟಕ ಮಾತ್ರ ಸುಮ್ಮನಿರಲು ಸಿದ್ದರಿಲ್ಲ. ಘಟನೆಗೆ ತೇಪೆ ಹಚ್ಚಲು ಮತ್ತಷ್ಟು ನಗೆಪಾಟಿಲಿಗೀಡಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಕರ್ನಾಟಕವೂ “ಪಕ್ಷ ಎಂದರೆ ನಕಲಿ ಗಾಂಧಿ ಪರಿವಾರ, ಸಂಘಟನೆ ಎಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರುಗಳ ಆರಾಧನೆ ಹಾಗೂ ದೆಹಲಿಗೆ ಹೋಗುವುದೇ ಸಂಘಟನಾತ್ಮಕ ಪ್ರವಾಸ ಎಂದು ತಿಳಿದಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿಯ 36 ಸಂಘಟನಾತ್ಮಕ ಜಿಲ್ಲೆಗಳ ವಿಚಾರ ಹೇಗೆ ಅರ್ಥವಾದೀತು? ಅಪಪ್ರಚಾರ ಮಾಡುವುದನ್ನು ಬಿಟ್ಟು ಪಕ್ಷದ ಸಂಘಟನೆ ಕಡೆ ಗಮನ ಹರಿಸಲಿ.” ಎಂದು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಲು ಮುಂದಾಗಿದೆ.

ಅಂದರೆ ಈ ಬಿಜೆಪಿಯವರಷ್ಟು ಸುಳ್ಳು ಹೇಳುವವರು ಈ ದೇಶದಲ್ಲಿ ಯಾರೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಪ್ರವಾಹ ಸಂಭವಿಸಿ 2 ತಿಂಗಳು ಕಳೆದಿದ್ದರೂ ಸಮರ್ಪಕ ಪರಿಹಾರ, ಪುನರ್ವಸತಿ ನೀಡದೇ ಜನ ಬೀದಿಗೆ ಬಿದ್ದಿದ್ದರೂ ಸಹ ಮಾಡಬೇಕಾದ ಕೆಲಸ ಬಿಟ್ಟು ಪ್ರಚಾರ ಮುಂದಾಗಿರುವ ಬಿಜೆಪಿ ಅಲ್ಲಿಯೂ ಕಾಂಗ್ರೆಸ್‌ ಅನ್ನು ಟೀಕಿಸುವ ಮೂಲಕ ತಮ್ಮ ನೀಚ ಬುದ್ಧಿ ಪ್ರದರ್ಶಿಸಿದೆ ಎಂದು ಹಲವಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ.

ಅಸಲಿಗೆ ಬಿಜೆಪಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಮಹರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲಿಸಿದರೆ ಆಲಮಟ್ಟಿಯಿಂದ ನಿಮಗೆ ನೀರು ಬಿಡುತ್ತೇವೆಂದು ಕರ್ನಾಟಕ ದ್ರೋಹಿ ಕೆಲಸ ಮಾಡುತ್ತಿದ್ದಾರೆ. ಸಾಲದು ಎಂಬಂತೆ 36 ಸಂಘಟನಾತ್ಮಕ ಜಿಲ್ಲೆಗಳೆಂದು ನಾಟಕ ಆಡುತ್ತಿದ್ದಾರೆ. ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...