Homeಮುಖಪುಟಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ: ಪ್ರತಿಪಕ್ಷಗಳ ಗಂಭೀರ ಆರೋಪ

ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ: ಪ್ರತಿಪಕ್ಷಗಳ ಗಂಭೀರ ಆರೋಪ

- Advertisement -
- Advertisement -

ಅಸ್ಸಾಂ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ.

ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಟ್ವೀಟ್ ಮಾಡಿ,
“ಧ್ರುವೀಕರಣ? ವಿಫಲವಾಗಿದೆ.
ಮತಗಳನ್ನು ಖರೀದಿಸುವುದು? ವಿಫಲವಾಗಿದೆ.
ಅಭ್ಯರ್ಥಿಗಳನ್ನು ಖರೀದಿಸುವುದು? ವಿಫಲವಾಗಿದೆ.
ಸುಳ್ಳುಗಳು? ವಿಫಲವಾಗಿದೆ.
ಇಬ್ಬರು ಸಿಎಂಗಳು? ವಿಫಲವಾಗಿದೆ.
ಸಿಎಎ ಕುರಿತು ಎರಡು ಮಾತು? ವಿಫಲವಾಗಿದೆ.
ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯಿರಿ.
ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸರಣಿ ಟ್ವೀಟ್ ಮಾಡಿ ಇವಿಎಂ ಬಳಕೆಯ ಕುರಿತು ಗಂಭೀರವಾಗಿ ಪುನರ್ ವಿಮರ್ಶೆ ನಡೆಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರತಿ ಬಾರಿಯೂ ಇವಿಎಂ ಹೊತ್ತು ಸಾಗಿಸುವ ಖಾಸಗಿ ವಾಹನಗಳ ಚುನಾವಣಾ ವೀಡಿಯೊಗಳು ಕಂಡುಬರುತ್ತವೆ. ಆಶ್ಚರ್ಯಕರವಾಗಿ ಅವು ಈ ಕೆಳಗಿನ ವಿಷಯಗಳನ್ನು ಸಾಮಾನ್ಯವಾಗಿ ಹೊಂದಿತ್ತುವೆ.
1. ವಾಹನಗಳು ಸಾಮಾನ್ಯವಾಗಿ ಬಿಜೆಪಿ ಅಭ್ಯರ್ಥಿಗಳು ಅಥವಾ ಅವರ ಸಹವರ್ತಿಗಳಿಗೆ ಸೇರಿವೆ.
2. ಆ ವೀಡಿಯೊಗಳನ್ನು ಕೇವಲ ಆ ಒಂದು ಘಟನೆಯಾಗಿ ನೋಡಲಾಗುತ್ತದೆ ಮತ್ತು ತಿರುಚಿದ ವಿಡಿಯೋ ಎಂದು ತಳ್ಳಿಹಾಕಲಾಗುತ್ತದೆ.
3. ವೀಡಿಯೊಗಳನ್ನು ಬಹಿರಂಗಪಡಿಸಿದವರನ್ನು ಸೋಲಿನ ಭಯವುಳ್ಳವರು ಎಂದು ಆರೋಪಿಸಲು ಬಿಜೆಪಿ ತನ್ನ ಮಾಧ್ಯಮ ಯಂತ್ರೋಪಕರಣಗಳನ್ನು ಬಳಸುತ್ತದೆ.
ಆತಂಕದ ಸಂಗತಿಯೆಂದರೆ, ಇಂತಹ ಹಲವಾರು ಘಟನೆಗಳು ವರದಿಯಾಗುತ್ತಿವೆ ಮತ್ತು ಅವುಗಳ ಬಗ್ಗೆ ಇಸಿ ಏನೂ ಮಾಡಲಾಗುತ್ತಿಲ್ಲ. ಈ ದೂರುಗಳ ಬಗ್ಗೆ ಇಸಿ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಬೇಕಾಗಿದೆ ಮತ್ತು ಎಲ್ಲಾ ರಾಷ್ಟ್ರೀಯ ಪಕ್ಷಗಳು ಇವಿಎಂ ಬಳಕೆಯ ಬಗ್ಗೆ ಗಂಭೀರವಾದ ಮರು ಮೌಲ್ಯಮಾಪನವನ್ನು ನಡೆಸಬೇಕಾಗಿದೆ” ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

ನಿನ್ನೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದಲ್ಲಿ ಮತದಾನ ಮುಗಿದ ನಂತರ ಇವಿಎಂಗಳನ್ನು ಸರ್ಕಾರಿ ಭದ್ರತಾ ವಾಹನದಲ್ಲಿ ಇವಿಎಂಗಳನ್ನು ಇರಿಸುವ ಸ್ಟ್ರಾಂಗ್‌ ರೂಂಗೆ ಸಾಗಿಸಬೇಕಿತ್ತು. ಆದರೆ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಗಂಟೆಗಳಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಸೇರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಹೋಗುತ್ತಿದ್ದನ್ನು ಪ್ರತಿಪಕ್ಷದ ಕಾರ್ಯಕರ್ತರು ತಡೆದು ಘೇರಾವ್ ಹಾಕಿದ್ದಾರೆ. ಗುಂಪು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀಚಾರ್ಜ್ ನಡೆಸಿದ್ದಾರೆ. ಆಗ ಹಿಂಸೆಗೆ ತಿರುಗಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...