Homeಮುಖಪುಟಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ: ಪ್ರತಿಪಕ್ಷಗಳ ಗಂಭೀರ ಆರೋಪ

ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ: ಪ್ರತಿಪಕ್ಷಗಳ ಗಂಭೀರ ಆರೋಪ

- Advertisement -
- Advertisement -

ಅಸ್ಸಾಂ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ.

ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಟ್ವೀಟ್ ಮಾಡಿ,
“ಧ್ರುವೀಕರಣ? ವಿಫಲವಾಗಿದೆ.
ಮತಗಳನ್ನು ಖರೀದಿಸುವುದು? ವಿಫಲವಾಗಿದೆ.
ಅಭ್ಯರ್ಥಿಗಳನ್ನು ಖರೀದಿಸುವುದು? ವಿಫಲವಾಗಿದೆ.
ಸುಳ್ಳುಗಳು? ವಿಫಲವಾಗಿದೆ.
ಇಬ್ಬರು ಸಿಎಂಗಳು? ವಿಫಲವಾಗಿದೆ.
ಸಿಎಎ ಕುರಿತು ಎರಡು ಮಾತು? ವಿಫಲವಾಗಿದೆ.
ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯಿರಿ.
ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸರಣಿ ಟ್ವೀಟ್ ಮಾಡಿ ಇವಿಎಂ ಬಳಕೆಯ ಕುರಿತು ಗಂಭೀರವಾಗಿ ಪುನರ್ ವಿಮರ್ಶೆ ನಡೆಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರತಿ ಬಾರಿಯೂ ಇವಿಎಂ ಹೊತ್ತು ಸಾಗಿಸುವ ಖಾಸಗಿ ವಾಹನಗಳ ಚುನಾವಣಾ ವೀಡಿಯೊಗಳು ಕಂಡುಬರುತ್ತವೆ. ಆಶ್ಚರ್ಯಕರವಾಗಿ ಅವು ಈ ಕೆಳಗಿನ ವಿಷಯಗಳನ್ನು ಸಾಮಾನ್ಯವಾಗಿ ಹೊಂದಿತ್ತುವೆ.
1. ವಾಹನಗಳು ಸಾಮಾನ್ಯವಾಗಿ ಬಿಜೆಪಿ ಅಭ್ಯರ್ಥಿಗಳು ಅಥವಾ ಅವರ ಸಹವರ್ತಿಗಳಿಗೆ ಸೇರಿವೆ.
2. ಆ ವೀಡಿಯೊಗಳನ್ನು ಕೇವಲ ಆ ಒಂದು ಘಟನೆಯಾಗಿ ನೋಡಲಾಗುತ್ತದೆ ಮತ್ತು ತಿರುಚಿದ ವಿಡಿಯೋ ಎಂದು ತಳ್ಳಿಹಾಕಲಾಗುತ್ತದೆ.
3. ವೀಡಿಯೊಗಳನ್ನು ಬಹಿರಂಗಪಡಿಸಿದವರನ್ನು ಸೋಲಿನ ಭಯವುಳ್ಳವರು ಎಂದು ಆರೋಪಿಸಲು ಬಿಜೆಪಿ ತನ್ನ ಮಾಧ್ಯಮ ಯಂತ್ರೋಪಕರಣಗಳನ್ನು ಬಳಸುತ್ತದೆ.
ಆತಂಕದ ಸಂಗತಿಯೆಂದರೆ, ಇಂತಹ ಹಲವಾರು ಘಟನೆಗಳು ವರದಿಯಾಗುತ್ತಿವೆ ಮತ್ತು ಅವುಗಳ ಬಗ್ಗೆ ಇಸಿ ಏನೂ ಮಾಡಲಾಗುತ್ತಿಲ್ಲ. ಈ ದೂರುಗಳ ಬಗ್ಗೆ ಇಸಿ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಬೇಕಾಗಿದೆ ಮತ್ತು ಎಲ್ಲಾ ರಾಷ್ಟ್ರೀಯ ಪಕ್ಷಗಳು ಇವಿಎಂ ಬಳಕೆಯ ಬಗ್ಗೆ ಗಂಭೀರವಾದ ಮರು ಮೌಲ್ಯಮಾಪನವನ್ನು ನಡೆಸಬೇಕಾಗಿದೆ” ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

ನಿನ್ನೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದಲ್ಲಿ ಮತದಾನ ಮುಗಿದ ನಂತರ ಇವಿಎಂಗಳನ್ನು ಸರ್ಕಾರಿ ಭದ್ರತಾ ವಾಹನದಲ್ಲಿ ಇವಿಎಂಗಳನ್ನು ಇರಿಸುವ ಸ್ಟ್ರಾಂಗ್‌ ರೂಂಗೆ ಸಾಗಿಸಬೇಕಿತ್ತು. ಆದರೆ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಗಂಟೆಗಳಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಸೇರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಹೋಗುತ್ತಿದ್ದನ್ನು ಪ್ರತಿಪಕ್ಷದ ಕಾರ್ಯಕರ್ತರು ತಡೆದು ಘೇರಾವ್ ಹಾಕಿದ್ದಾರೆ. ಗುಂಪು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀಚಾರ್ಜ್ ನಡೆಸಿದ್ದಾರೆ. ಆಗ ಹಿಂಸೆಗೆ ತಿರುಗಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....