Homeಕರ್ನಾಟಕನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌...

ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಪ್ರತಿಪಾದಿಸಿ ನಕಲಿ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ‌ ಬಿಜೆಪಿ ಬೆಂಬಲಿಗ, ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ಶನಿವಾರ ಪ್ರಕಾಶ್‌ ರಾಜ್ ದೂರು ದಾಖಲಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

“ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿ ಮೈಸೂರಿನ ಲಕ್ಷ್ಮಿಪುರಂ ಠಾಣೆಗೆ ನಟ ಪ್ರಕಾಶ್ ರಾಜ್ ದೂರು ನೀಡಿದ್ದಾರೆ.

“ಪ್ರಶಾಂತ್ ಸಂಬರಗಿ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರಿದಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಶಾಂತ್ ಸಂಬರಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ‘‘ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದರು.‌

“ಸುಳ್ಳ ರಾಜನ ಹೇಡಿಗಳ ಸೈನ್ಯಕ್ಕೆ… ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ. ಪೊಲೀಸ್‌ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ಎಕ್ಸ್‌ ತಾಣದಲ್ಲಿ ಪ್ರಕಾಶ್‌ ರಾಜ್ ಬರೆದುಕೊಂಡಿದ್ದರು.

ತಾವು ಹಾಕಿರುವ ಚಿತ್ರ ನಕಲಿ ಎಂದು ಗೊತ್ತಾದ ತಕ್ಷಣ ಪ್ರಶಾಂತ್ ಸಂಬರಗಿ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ. ಇದನ್ನು ಗಮನಸಿದ ಪ್ರಕಾಶ್‌ ರಾಜ್‌, “ಹಬ್ಬಿಸಿದ ಸುಳ್ಳು ಸುದ್ದಿಯನ್ನು ಮಹಾವೀರ ಸಂಬರಗಿ ತಮ್ಮ ಖಾತೆಯಿಂದ ಈಗ ಹೆದರಿ ತೆಗೆದಾಯ್ತು. ಆದರೆ ಮಾಡಿದ ಕಿಡಿಗೇಡಿತನದಿಂದ ತಪ್ಪಿಸಿಕೊಳ್ಳಲಾಗದು ಎಂದು ಯಾರಾದರು ಉಗಿದು ಹೇಳಿ” ಎಂದು ಕುಟುಕಿದ್ದರು.

ಲಕ್ಷ್ಮೀಪುರಂ ಠಾಣೆಯಲ್ಲಿ ದೂರು ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ನಟ ಪ್ರಕಾಶ್‌ ರಾಜ್,‌ “ನಟಿಯರೂ ಸೇರಿದಂತೆ ಅನೇಕರಿಗೆ ಪ್ರಶಾಂತ್ ಸಂಬರಗಿ ಈ ರೀತಿ ತೊಂದರೆ ನೀಡಿದ್ದಾನೆ. ಆತನಿಗೆ ಪಾಠ ಆಗಬೇಕು. ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗಲಿ. ತಪ್ಪು ಪ್ರಚಾರ ಮಾಡುವುದು, ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ” ಎಂದು ಹೇಳಿದ್ದಾರೆ.

“ನಾನು ಮೂಢನಂಬಿಕೆಯನ್ನಷ್ಟೇ ಪ್ರಶ್ನಿಸುತ್ತೇನೆ. ಈ ಹಿಂದೆ ಕ್ರಿಶ್ಚಿಯನ್‌ಗಿಂತ ದೊಡ್ಡ ಮಾಫಿಯಾ ಇನ್ನೊಂದಿಲ್ಲ. ಮುಸ್ಲಿಂರಲ್ಲೂ ದೊಡ್ಡ ಟೆರೆರಿಸ್ಟ್‌ಗಳು ಇದ್ದಾರೆ ಎಂದು ಹೇಳಿದ್ದೇನೆ. ಅದು ಹೈಲೈಟ್ ಆಗಿಲ್ಲ. ನಾನು ಯಾವತ್ತೂ ಧರ್ಮ ಧರ್ಮಗಳನ್ನು ಎತ್ತಿ ಕಟ್ಟುವ ಕೆಲಸ ಮಾಡಿಲ್ಲ. ಅದೇ ಕೆಲಸ ಮಾಡುವವರು ದೂಷಿಸುತ್ತಾರೆ” ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

“ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು” ಎಂದು ಹೇಳಿದ್ದಾರೆ.

ಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸಿದ ಅವರು, “ಅವರವರ ಭಾವಕ್ಕೆ ಅವರ ಬಕುತಿಗೆ ಹೇಳುತ್ತಾ ಹೋಗಲಿ. ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಯಾವ ನಂಬಿಕೆಯ ಬಗ್ಗೆ ಟೀಕೆ ಮಾಡಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...