Homeಕರ್ನಾಟಕನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌...

ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಪ್ರತಿಪಾದಿಸಿ ನಕಲಿ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ‌ ಬಿಜೆಪಿ ಬೆಂಬಲಿಗ, ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ಶನಿವಾರ ಪ್ರಕಾಶ್‌ ರಾಜ್ ದೂರು ದಾಖಲಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

“ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿ ಮೈಸೂರಿನ ಲಕ್ಷ್ಮಿಪುರಂ ಠಾಣೆಗೆ ನಟ ಪ್ರಕಾಶ್ ರಾಜ್ ದೂರು ನೀಡಿದ್ದಾರೆ.

“ಪ್ರಶಾಂತ್ ಸಂಬರಗಿ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರಿದಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಶಾಂತ್ ಸಂಬರಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ‘‘ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದರು.‌

“ಸುಳ್ಳ ರಾಜನ ಹೇಡಿಗಳ ಸೈನ್ಯಕ್ಕೆ… ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ. ಪೊಲೀಸ್‌ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ಎಕ್ಸ್‌ ತಾಣದಲ್ಲಿ ಪ್ರಕಾಶ್‌ ರಾಜ್ ಬರೆದುಕೊಂಡಿದ್ದರು.

ತಾವು ಹಾಕಿರುವ ಚಿತ್ರ ನಕಲಿ ಎಂದು ಗೊತ್ತಾದ ತಕ್ಷಣ ಪ್ರಶಾಂತ್ ಸಂಬರಗಿ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ. ಇದನ್ನು ಗಮನಸಿದ ಪ್ರಕಾಶ್‌ ರಾಜ್‌, “ಹಬ್ಬಿಸಿದ ಸುಳ್ಳು ಸುದ್ದಿಯನ್ನು ಮಹಾವೀರ ಸಂಬರಗಿ ತಮ್ಮ ಖಾತೆಯಿಂದ ಈಗ ಹೆದರಿ ತೆಗೆದಾಯ್ತು. ಆದರೆ ಮಾಡಿದ ಕಿಡಿಗೇಡಿತನದಿಂದ ತಪ್ಪಿಸಿಕೊಳ್ಳಲಾಗದು ಎಂದು ಯಾರಾದರು ಉಗಿದು ಹೇಳಿ” ಎಂದು ಕುಟುಕಿದ್ದರು.

ಲಕ್ಷ್ಮೀಪುರಂ ಠಾಣೆಯಲ್ಲಿ ದೂರು ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ನಟ ಪ್ರಕಾಶ್‌ ರಾಜ್,‌ “ನಟಿಯರೂ ಸೇರಿದಂತೆ ಅನೇಕರಿಗೆ ಪ್ರಶಾಂತ್ ಸಂಬರಗಿ ಈ ರೀತಿ ತೊಂದರೆ ನೀಡಿದ್ದಾನೆ. ಆತನಿಗೆ ಪಾಠ ಆಗಬೇಕು. ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗಲಿ. ತಪ್ಪು ಪ್ರಚಾರ ಮಾಡುವುದು, ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ” ಎಂದು ಹೇಳಿದ್ದಾರೆ.

“ನಾನು ಮೂಢನಂಬಿಕೆಯನ್ನಷ್ಟೇ ಪ್ರಶ್ನಿಸುತ್ತೇನೆ. ಈ ಹಿಂದೆ ಕ್ರಿಶ್ಚಿಯನ್‌ಗಿಂತ ದೊಡ್ಡ ಮಾಫಿಯಾ ಇನ್ನೊಂದಿಲ್ಲ. ಮುಸ್ಲಿಂರಲ್ಲೂ ದೊಡ್ಡ ಟೆರೆರಿಸ್ಟ್‌ಗಳು ಇದ್ದಾರೆ ಎಂದು ಹೇಳಿದ್ದೇನೆ. ಅದು ಹೈಲೈಟ್ ಆಗಿಲ್ಲ. ನಾನು ಯಾವತ್ತೂ ಧರ್ಮ ಧರ್ಮಗಳನ್ನು ಎತ್ತಿ ಕಟ್ಟುವ ಕೆಲಸ ಮಾಡಿಲ್ಲ. ಅದೇ ಕೆಲಸ ಮಾಡುವವರು ದೂಷಿಸುತ್ತಾರೆ” ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

“ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು” ಎಂದು ಹೇಳಿದ್ದಾರೆ.

ಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸಿದ ಅವರು, “ಅವರವರ ಭಾವಕ್ಕೆ ಅವರ ಬಕುತಿಗೆ ಹೇಳುತ್ತಾ ಹೋಗಲಿ. ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಯಾವ ನಂಬಿಕೆಯ ಬಗ್ಗೆ ಟೀಕೆ ಮಾಡಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....