Homeಕರ್ನಾಟಕನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌...

ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಪ್ರತಿಪಾದಿಸಿ ನಕಲಿ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ‌ ಬಿಜೆಪಿ ಬೆಂಬಲಿಗ, ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ಶನಿವಾರ ಪ್ರಕಾಶ್‌ ರಾಜ್ ದೂರು ದಾಖಲಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

“ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿ ಮೈಸೂರಿನ ಲಕ್ಷ್ಮಿಪುರಂ ಠಾಣೆಗೆ ನಟ ಪ್ರಕಾಶ್ ರಾಜ್ ದೂರು ನೀಡಿದ್ದಾರೆ.

“ಪ್ರಶಾಂತ್ ಸಂಬರಗಿ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರಿದಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಶಾಂತ್ ಸಂಬರಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ‘‘ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದರು.‌

“ಸುಳ್ಳ ರಾಜನ ಹೇಡಿಗಳ ಸೈನ್ಯಕ್ಕೆ… ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ. ಪೊಲೀಸ್‌ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ಎಕ್ಸ್‌ ತಾಣದಲ್ಲಿ ಪ್ರಕಾಶ್‌ ರಾಜ್ ಬರೆದುಕೊಂಡಿದ್ದರು.

ತಾವು ಹಾಕಿರುವ ಚಿತ್ರ ನಕಲಿ ಎಂದು ಗೊತ್ತಾದ ತಕ್ಷಣ ಪ್ರಶಾಂತ್ ಸಂಬರಗಿ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ. ಇದನ್ನು ಗಮನಸಿದ ಪ್ರಕಾಶ್‌ ರಾಜ್‌, “ಹಬ್ಬಿಸಿದ ಸುಳ್ಳು ಸುದ್ದಿಯನ್ನು ಮಹಾವೀರ ಸಂಬರಗಿ ತಮ್ಮ ಖಾತೆಯಿಂದ ಈಗ ಹೆದರಿ ತೆಗೆದಾಯ್ತು. ಆದರೆ ಮಾಡಿದ ಕಿಡಿಗೇಡಿತನದಿಂದ ತಪ್ಪಿಸಿಕೊಳ್ಳಲಾಗದು ಎಂದು ಯಾರಾದರು ಉಗಿದು ಹೇಳಿ” ಎಂದು ಕುಟುಕಿದ್ದರು.

ಲಕ್ಷ್ಮೀಪುರಂ ಠಾಣೆಯಲ್ಲಿ ದೂರು ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ನಟ ಪ್ರಕಾಶ್‌ ರಾಜ್,‌ “ನಟಿಯರೂ ಸೇರಿದಂತೆ ಅನೇಕರಿಗೆ ಪ್ರಶಾಂತ್ ಸಂಬರಗಿ ಈ ರೀತಿ ತೊಂದರೆ ನೀಡಿದ್ದಾನೆ. ಆತನಿಗೆ ಪಾಠ ಆಗಬೇಕು. ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗಲಿ. ತಪ್ಪು ಪ್ರಚಾರ ಮಾಡುವುದು, ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ” ಎಂದು ಹೇಳಿದ್ದಾರೆ.

“ನಾನು ಮೂಢನಂಬಿಕೆಯನ್ನಷ್ಟೇ ಪ್ರಶ್ನಿಸುತ್ತೇನೆ. ಈ ಹಿಂದೆ ಕ್ರಿಶ್ಚಿಯನ್‌ಗಿಂತ ದೊಡ್ಡ ಮಾಫಿಯಾ ಇನ್ನೊಂದಿಲ್ಲ. ಮುಸ್ಲಿಂರಲ್ಲೂ ದೊಡ್ಡ ಟೆರೆರಿಸ್ಟ್‌ಗಳು ಇದ್ದಾರೆ ಎಂದು ಹೇಳಿದ್ದೇನೆ. ಅದು ಹೈಲೈಟ್ ಆಗಿಲ್ಲ. ನಾನು ಯಾವತ್ತೂ ಧರ್ಮ ಧರ್ಮಗಳನ್ನು ಎತ್ತಿ ಕಟ್ಟುವ ಕೆಲಸ ಮಾಡಿಲ್ಲ. ಅದೇ ಕೆಲಸ ಮಾಡುವವರು ದೂಷಿಸುತ್ತಾರೆ” ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

“ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು” ಎಂದು ಹೇಳಿದ್ದಾರೆ.

ಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸಿದ ಅವರು, “ಅವರವರ ಭಾವಕ್ಕೆ ಅವರ ಬಕುತಿಗೆ ಹೇಳುತ್ತಾ ಹೋಗಲಿ. ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಯಾವ ನಂಬಿಕೆಯ ಬಗ್ಗೆ ಟೀಕೆ ಮಾಡಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...