Homeಕರ್ನಾಟಕನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌...

ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಪ್ರತಿಪಾದಿಸಿ ನಕಲಿ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ‌ ಬಿಜೆಪಿ ಬೆಂಬಲಿಗ, ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ಶನಿವಾರ ಪ್ರಕಾಶ್‌ ರಾಜ್ ದೂರು ದಾಖಲಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

“ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿ ಮೈಸೂರಿನ ಲಕ್ಷ್ಮಿಪುರಂ ಠಾಣೆಗೆ ನಟ ಪ್ರಕಾಶ್ ರಾಜ್ ದೂರು ನೀಡಿದ್ದಾರೆ.

“ಪ್ರಶಾಂತ್ ಸಂಬರಗಿ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರಿದಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಶಾಂತ್ ಸಂಬರಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ‘‘ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದರು.‌

“ಸುಳ್ಳ ರಾಜನ ಹೇಡಿಗಳ ಸೈನ್ಯಕ್ಕೆ… ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ. ಪೊಲೀಸ್‌ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ಎಕ್ಸ್‌ ತಾಣದಲ್ಲಿ ಪ್ರಕಾಶ್‌ ರಾಜ್ ಬರೆದುಕೊಂಡಿದ್ದರು.

ತಾವು ಹಾಕಿರುವ ಚಿತ್ರ ನಕಲಿ ಎಂದು ಗೊತ್ತಾದ ತಕ್ಷಣ ಪ್ರಶಾಂತ್ ಸಂಬರಗಿ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ. ಇದನ್ನು ಗಮನಸಿದ ಪ್ರಕಾಶ್‌ ರಾಜ್‌, “ಹಬ್ಬಿಸಿದ ಸುಳ್ಳು ಸುದ್ದಿಯನ್ನು ಮಹಾವೀರ ಸಂಬರಗಿ ತಮ್ಮ ಖಾತೆಯಿಂದ ಈಗ ಹೆದರಿ ತೆಗೆದಾಯ್ತು. ಆದರೆ ಮಾಡಿದ ಕಿಡಿಗೇಡಿತನದಿಂದ ತಪ್ಪಿಸಿಕೊಳ್ಳಲಾಗದು ಎಂದು ಯಾರಾದರು ಉಗಿದು ಹೇಳಿ” ಎಂದು ಕುಟುಕಿದ್ದರು.

ಲಕ್ಷ್ಮೀಪುರಂ ಠಾಣೆಯಲ್ಲಿ ದೂರು ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ನಟ ಪ್ರಕಾಶ್‌ ರಾಜ್,‌ “ನಟಿಯರೂ ಸೇರಿದಂತೆ ಅನೇಕರಿಗೆ ಪ್ರಶಾಂತ್ ಸಂಬರಗಿ ಈ ರೀತಿ ತೊಂದರೆ ನೀಡಿದ್ದಾನೆ. ಆತನಿಗೆ ಪಾಠ ಆಗಬೇಕು. ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗಲಿ. ತಪ್ಪು ಪ್ರಚಾರ ಮಾಡುವುದು, ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ” ಎಂದು ಹೇಳಿದ್ದಾರೆ.

“ನಾನು ಮೂಢನಂಬಿಕೆಯನ್ನಷ್ಟೇ ಪ್ರಶ್ನಿಸುತ್ತೇನೆ. ಈ ಹಿಂದೆ ಕ್ರಿಶ್ಚಿಯನ್‌ಗಿಂತ ದೊಡ್ಡ ಮಾಫಿಯಾ ಇನ್ನೊಂದಿಲ್ಲ. ಮುಸ್ಲಿಂರಲ್ಲೂ ದೊಡ್ಡ ಟೆರೆರಿಸ್ಟ್‌ಗಳು ಇದ್ದಾರೆ ಎಂದು ಹೇಳಿದ್ದೇನೆ. ಅದು ಹೈಲೈಟ್ ಆಗಿಲ್ಲ. ನಾನು ಯಾವತ್ತೂ ಧರ್ಮ ಧರ್ಮಗಳನ್ನು ಎತ್ತಿ ಕಟ್ಟುವ ಕೆಲಸ ಮಾಡಿಲ್ಲ. ಅದೇ ಕೆಲಸ ಮಾಡುವವರು ದೂಷಿಸುತ್ತಾರೆ” ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

“ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು” ಎಂದು ಹೇಳಿದ್ದಾರೆ.

ಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸಿದ ಅವರು, “ಅವರವರ ಭಾವಕ್ಕೆ ಅವರ ಬಕುತಿಗೆ ಹೇಳುತ್ತಾ ಹೋಗಲಿ. ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಯಾವ ನಂಬಿಕೆಯ ಬಗ್ಗೆ ಟೀಕೆ ಮಾಡಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...