Homeಕರ್ನಾಟಕಬಿಜೆಪಿಯಲ್ಲಿ ಟಿಕೆಟ್ ಗಾಗಿ ಶುರುವಾಯ್ತು ಭಾರೀ ಗಲಾಟೆ: ಶರತ್ ಬಚ್ಚೇಗೌಡರ ಬೆಂಬಲಿಗರಿಂದ ಬಿಎಸ್‌ವೈ ಮನೆ ಮುಂದೆ...

ಬಿಜೆಪಿಯಲ್ಲಿ ಟಿಕೆಟ್ ಗಾಗಿ ಶುರುವಾಯ್ತು ಭಾರೀ ಗಲಾಟೆ: ಶರತ್ ಬಚ್ಚೇಗೌಡರ ಬೆಂಬಲಿಗರಿಂದ ಬಿಎಸ್‌ವೈ ಮನೆ ಮುಂದೆ ಪ್ರತಿಭಟನೆ

- Advertisement -
- Advertisement -

ನಿರೀಕ್ಷೆಯಂತೆಯೇ ಉಪಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಬಂಡಾಯ ಬಿರುಸುಗೊಂಡಿದೆ. ಅನರ್ಹರ ವಲಸೆಯಿಂದಾಗಿ ಮೂಲ ಬಿಜೆಪಿಗರು ಟಿಕೆಟ್ ಕೈತಪ್ಪುವ ಮೊದಲೇ ಎಚ್ಚೆತ್ತುಕೊಂಡಿದ್ದು ಬಂಡಾಯದ ಬಾವುಟ ಹಾರಿಸಿದ್ದಾರೆ.

ಹೊಸಕೋಟೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ ಶರತ್ ಬಚ್ಚೇಗೌಡರ ಬೆಂಬಲಿಗರಿಂದ ಇಂದು ಮುಖ್ಯಮಂತ್ರಿ ಬಿಎಸ್‌ವೈ ಮನೆ ಮುಂದೆ ಭಾರೀ ಪ್ರತಿಭಟನೆ ನಡೆದಿದ್ದು, ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರನಾಗಿ ಕಣಕ್ಕಿಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ಬಿಎಸ್‌ವೈ ಮನೆ ಎದುರು ನಡೆದ ಪ್ರತಿಭಟನೆಯಲ್ಲಿ ಬಚ್ಚೇಗೌಡರಿಗೆ ಜಯವಾಗಲಿ, ನರೇಂದ್ರ ಜಯವಾಗಲಿ ಎಂಬ ಘೋಷಣೆ ಮೊಳಗಿದರೆ, ಯಡಿಯೂರಪ್ಪನವರಿಗೆ ಜಯವಾಗಲಿ ಎಂಬ ಘೋಷಣೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಜೊತೆಗೆ ಶರತ್ ಬಚ್ಚೇಗೌಡರಿಗೆ ಟಿಕೆಟ್ ನೀಡದಿದ್ದರೆ ಬಿಜೆಪಿ ಸೋಲು ಖಚಿತ ಎಂದು ಬೆಂಬಲಿಗರು ಖಡಕ್ ಆಗಿ ವಾರ್ನಿಂಗ್ ನೀಡಿದ್ದಾರೆ.

ಈ ಕುರಿತು ಶರತ್ ಬಚ್ಚೆಗೌಡ ಮಾತನಾಡಿ ನಾನೀಗಾಗಲೇ ಯಡಿಯೂರಪ್ಪನವರ ಬಳಿ ಮಾತಾಡಿದ್ದೇನೆ. ಅವರು ಟಿಕೇಟ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಅನರ್ಹರ ವಿಚಾರ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿದೆ. ಹಾಗಾಗಿ ಕಾದು ನೋಡಿ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.

ನಿನ್ನೆ ಚುನಾವಣಾ ಆಯೋಗ ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದೇ ಎಂದಿದ್ದೇ ತಡ ಮೂಲ ಬಿಜೆಪಿಗರಲ್ಲಿ ಆತಂಕಮೂಡಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಅವರಿಗೆ ಇದು ದೊಡ್ಡ ಶಾಕ್ ಆಗಿದ್ದು ಕೂಡಲೇ ಕಾರ್ಯಪ್ರವೃತ್ತಿಯಾಗಿದ್ದಾರೆ. ಅದರಲ್ಲಿ ಯಶವಂತಪುರದಲ್ಲಿ ಜಗ್ಗೇಶ್, ಹೀರೆಕೇರೂರಿನಲ್ಲಿ ಬಣಗಾರ್, ಕಾಗವಾಡದಲ್ಲಿ ರಾಜೂಕಾ, ಮಹಾಲಕ್ಷ್ಮಿ ಲೇಔಟ್ ನಲ್ಲಿ ಹರೀಶ್, ಯಲ್ಲಾಪುರದಲ್ಲಿ ವಿ.ಎಸ್ ಪಾಟೀಲ್, ಗೋಕಾಕ್ ನಲ್ಲಿ ಅಶೋಕ್ ಪೂಜಾರಿ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.

ಬಂಡಾಯಗಾರರಲ್ಲಿ ಕೆಲವರು ಈಗಾಗಲೇ ಕಾಂಗ್ರೆಸ್ ನ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದಿದ್ದಲ್ಲಿ ಕಾಂಗ್ರೆಸ್ ಹಾರಿ ಟಿಕೆಟ್ ಪಡೆಯಲು ಒಳಗಿನಿಂದಲೇ ಪ್ರಯತ್ನ ಮಾಡುತ್ತಿದ್ದಾರೆ. ಗೋಕಾಕ್ ನ ಬಿಜೆಪಿ ಮುಖಂಡ ಅಶೋಕ್ ಪೂಜಾರಿಯವರಂತೂ ನನಗೆ ಕಾಂಗ್ರೆಸ್ ಟಿಕೇಟ್ ನೀಡದಿದ್ದರೂ ಸಹ ಬಿಜೆಪಿ ಸೋಲಿಸಲು ಕಾಂಗ್ರೆಸ್ ಅನ್ನೇ ಬೆಂಬಲಿಸುತ್ತೇನೆ ಎಂಬ ಬ್ಲಾಕ್ ಮೇಲ್ ಸಹ ಮಾಡಿದ್ದಾರೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...