Homeಕರ್ನಾಟಕಬಿಜೆಪಿಯಲ್ಲಿ ಟಿಕೆಟ್ ಗಾಗಿ ಶುರುವಾಯ್ತು ಭಾರೀ ಗಲಾಟೆ: ಶರತ್ ಬಚ್ಚೇಗೌಡರ ಬೆಂಬಲಿಗರಿಂದ ಬಿಎಸ್‌ವೈ ಮನೆ ಮುಂದೆ...

ಬಿಜೆಪಿಯಲ್ಲಿ ಟಿಕೆಟ್ ಗಾಗಿ ಶುರುವಾಯ್ತು ಭಾರೀ ಗಲಾಟೆ: ಶರತ್ ಬಚ್ಚೇಗೌಡರ ಬೆಂಬಲಿಗರಿಂದ ಬಿಎಸ್‌ವೈ ಮನೆ ಮುಂದೆ ಪ್ರತಿಭಟನೆ

- Advertisement -
- Advertisement -

ನಿರೀಕ್ಷೆಯಂತೆಯೇ ಉಪಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಬಂಡಾಯ ಬಿರುಸುಗೊಂಡಿದೆ. ಅನರ್ಹರ ವಲಸೆಯಿಂದಾಗಿ ಮೂಲ ಬಿಜೆಪಿಗರು ಟಿಕೆಟ್ ಕೈತಪ್ಪುವ ಮೊದಲೇ ಎಚ್ಚೆತ್ತುಕೊಂಡಿದ್ದು ಬಂಡಾಯದ ಬಾವುಟ ಹಾರಿಸಿದ್ದಾರೆ.

ಹೊಸಕೋಟೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ ಶರತ್ ಬಚ್ಚೇಗೌಡರ ಬೆಂಬಲಿಗರಿಂದ ಇಂದು ಮುಖ್ಯಮಂತ್ರಿ ಬಿಎಸ್‌ವೈ ಮನೆ ಮುಂದೆ ಭಾರೀ ಪ್ರತಿಭಟನೆ ನಡೆದಿದ್ದು, ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರನಾಗಿ ಕಣಕ್ಕಿಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ಬಿಎಸ್‌ವೈ ಮನೆ ಎದುರು ನಡೆದ ಪ್ರತಿಭಟನೆಯಲ್ಲಿ ಬಚ್ಚೇಗೌಡರಿಗೆ ಜಯವಾಗಲಿ, ನರೇಂದ್ರ ಜಯವಾಗಲಿ ಎಂಬ ಘೋಷಣೆ ಮೊಳಗಿದರೆ, ಯಡಿಯೂರಪ್ಪನವರಿಗೆ ಜಯವಾಗಲಿ ಎಂಬ ಘೋಷಣೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಜೊತೆಗೆ ಶರತ್ ಬಚ್ಚೇಗೌಡರಿಗೆ ಟಿಕೆಟ್ ನೀಡದಿದ್ದರೆ ಬಿಜೆಪಿ ಸೋಲು ಖಚಿತ ಎಂದು ಬೆಂಬಲಿಗರು ಖಡಕ್ ಆಗಿ ವಾರ್ನಿಂಗ್ ನೀಡಿದ್ದಾರೆ.

ಈ ಕುರಿತು ಶರತ್ ಬಚ್ಚೆಗೌಡ ಮಾತನಾಡಿ ನಾನೀಗಾಗಲೇ ಯಡಿಯೂರಪ್ಪನವರ ಬಳಿ ಮಾತಾಡಿದ್ದೇನೆ. ಅವರು ಟಿಕೇಟ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಅನರ್ಹರ ವಿಚಾರ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿದೆ. ಹಾಗಾಗಿ ಕಾದು ನೋಡಿ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.

ನಿನ್ನೆ ಚುನಾವಣಾ ಆಯೋಗ ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದೇ ಎಂದಿದ್ದೇ ತಡ ಮೂಲ ಬಿಜೆಪಿಗರಲ್ಲಿ ಆತಂಕಮೂಡಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಅವರಿಗೆ ಇದು ದೊಡ್ಡ ಶಾಕ್ ಆಗಿದ್ದು ಕೂಡಲೇ ಕಾರ್ಯಪ್ರವೃತ್ತಿಯಾಗಿದ್ದಾರೆ. ಅದರಲ್ಲಿ ಯಶವಂತಪುರದಲ್ಲಿ ಜಗ್ಗೇಶ್, ಹೀರೆಕೇರೂರಿನಲ್ಲಿ ಬಣಗಾರ್, ಕಾಗವಾಡದಲ್ಲಿ ರಾಜೂಕಾ, ಮಹಾಲಕ್ಷ್ಮಿ ಲೇಔಟ್ ನಲ್ಲಿ ಹರೀಶ್, ಯಲ್ಲಾಪುರದಲ್ಲಿ ವಿ.ಎಸ್ ಪಾಟೀಲ್, ಗೋಕಾಕ್ ನಲ್ಲಿ ಅಶೋಕ್ ಪೂಜಾರಿ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.

ಬಂಡಾಯಗಾರರಲ್ಲಿ ಕೆಲವರು ಈಗಾಗಲೇ ಕಾಂಗ್ರೆಸ್ ನ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದಿದ್ದಲ್ಲಿ ಕಾಂಗ್ರೆಸ್ ಹಾರಿ ಟಿಕೆಟ್ ಪಡೆಯಲು ಒಳಗಿನಿಂದಲೇ ಪ್ರಯತ್ನ ಮಾಡುತ್ತಿದ್ದಾರೆ. ಗೋಕಾಕ್ ನ ಬಿಜೆಪಿ ಮುಖಂಡ ಅಶೋಕ್ ಪೂಜಾರಿಯವರಂತೂ ನನಗೆ ಕಾಂಗ್ರೆಸ್ ಟಿಕೇಟ್ ನೀಡದಿದ್ದರೂ ಸಹ ಬಿಜೆಪಿ ಸೋಲಿಸಲು ಕಾಂಗ್ರೆಸ್ ಅನ್ನೇ ಬೆಂಬಲಿಸುತ್ತೇನೆ ಎಂಬ ಬ್ಲಾಕ್ ಮೇಲ್ ಸಹ ಮಾಡಿದ್ದಾರೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...