Homeಮುಖಪುಟ2016ರ ಪಾಟ್ನಾ ಪೋಟೋ ಬಳಸಿ, ‘ಬಂದ್ ಯಶಸ್ವಿಯಾಗಿಲ್ಲ’ ಎಂದ ಬಿಜೆಪಿ ಬೆಂಬಲಿಗರು!

2016ರ ಪಾಟ್ನಾ ಪೋಟೋ ಬಳಸಿ, ‘ಬಂದ್ ಯಶಸ್ವಿಯಾಗಿಲ್ಲ’ ಎಂದ ಬಿಜೆಪಿ ಬೆಂಬಲಿಗರು!

- Advertisement -
- Advertisement -

ಸೆ.27ರಂದು ರೈತರು ಕರೆ ನೀಡಿದ್ದ ಭಾರತ್‌ ಬಂದ್‌ ಯಶಸ್ವಿಯಾಗಿದೆ. ಆದರೆ ಇದನ್ನು ಸಹಿಸದ ಹಲವು ಬಿಜೆಪಿ ಬೆಂಬಲಿಗರು, ‘ಬಂದ್ ಯಶಸ್ವಿಯಾಗಿಲ್ಲ’ ಎಂದು ಬಿಂಬಿಸಲು ಹಳೆಯ ಪೋಟೋವೊಂದನ್ನು ಶೇರ್‌ ಮಾಡಿ ನಗೆಪಾಟಲಿಗೀಡಾಗಿದೆ.

“ನನ್ನ ನಗರದಲ್ಲಿ ಭಾರತ್‌ ಬಂದ್‌ ಪರಿಣಾಮ ಬೀರಿಲ್ಲ” ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಒಂದೇ ಪೋಟೋವನ್ನು, ವಿವಿಧ ನಗರಗಳ ಹೆಸರಲ್ಲಿ ಬಿಂಬಿಸಿ ಬಿಜೆಪಿಯ ಬೆಂಬಲಿಗರು ಹಂಚಿಕೊಂಡಿದ್ದಾರೆ. ಸುರಾತ್‌, ದೆಹಲಿ, ಮುಂಬೈ- ಎಲ್ಲಕ್ಕೂ ಒಂದೇ ಪೋಟೋವನ್ನು ಬಳಸಲಾಗಿದೆ.

ಈ ಕೆಳಗಿರುವ ಪೋಟೋವನ್ನೇ ನೋಡಿ. “ನನ್ನ ನಗರ ಪೂರ್ಣ ತೆರೆದಿದೆ. ಭಾರತ್‌ ಬಂದ್‌ಗೆ ಸೂರತ್‌ ಬೆಂಬಲಿಸಿಲ್ಲ” ಎಂದು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ ‘ಸೂರತ್‌’ ಜಾಗದಲ್ಲಿ ‘ದೆಹಲಿ’, ‘ಪುಣೆ’ ಹೀಗೆ ಬೇರೊಂದು ನಗರದ ಹೆಸರು ಹಾಕಿ ಅನೇಕರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. ಫೇಸ್‌ಬುಕ್‌, ಟ್ವಿಟ್ಟರ್‌ನಲ್ಲಿ ಸಾವಿರಾರು ಮಂದಿ ಇದೇ ರೀತಿ ಶೇರ್‌ ಮಾಡಿ, ರೈತರ ಹೋರಾಟವನ್ನು ಅಪಹಾಸ್ಯ ಮಾಡಲು ಯತ್ನಿಸಿದ್ದಾರೆ.

‘ಒಂದು ರಸ್ತೆ, ಒಂದು ದೇಶ’

‘ಎಲ್ಲರೂ ಸಮಾನರು, ಎಲ್ಲರಿಗೂ ಒಂದೇ ಕಾನೂನು’ ಎಂದು ಆಗಾಗ್ಗೆ ಹೇಳುತ್ತದೆ. ಎಲ್ಲದರಲ್ಲೂ ‘ಏಕಸಂಸ್ಕೃತಿ’ ಬಿಂಬಿಸುವ ಬಿಜೆಪಿ, ‘ಒಂದು ರಾಷ್ಟ್ರ, ಒಂದು ಕಾನೂನು’, ‘ಒಂದು ರಾಷ್ಟ್ರ ಒಂದು ತೆರಿಗೆ’ ಎನ್ನುವ ಘೋಷಣೆಗಳನ್ನು ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪತ್ರಕರ್ತ ಎಸ್‌.ಸಿ.ದಿನೇಶ್‌ಕುಮಾರ್‌, ‘ಒಂದು ದೇಶ ಒಂದು ರಸ್ತೆ’ ಎಂದು ಪೋಟೋಗಳನ್ನು ಶೇರ್‌ ಮಾಡಿದ್ದಾರೆ. ‘ಒಂದು ದೇಶ, ಒಂದು ರಸ್ತೆ, ಒಂದೇ ಟ್ವೀಟ್‌’ ಎಂದು ಬರಹಗಾರ್ತಿ ಅಶ್ರೀಕ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಅನೇಕರು ಬಿಜೆಪಿಯ ಟ್ರೋಲ್‌ ಪಡೆಯ ಸುಳ್ಳುಗಳನ್ನು ಕಟುವಾಗಿ ಟೀಕಿಸಿದ್ದಾರೆ.

ಈ ವೈರಲ್‌ ಪೋಟೋ ಯಾವಾಗ ತೆಗೆದದ್ದು?

‘ದಿ ಕ್ವಿಂಟ್‌’ ಜಾಲತಾಣ ಈ ಪೋಟೋದ ಅಸಲಿ ಕಥೆಯನ್ನು ಪತ್ತೆ ಹಚ್ಚಿದೆ. ಜನಜಂಗುಳಿಯಿಂದ ತುಳುಕುತ್ತಿರುವ ಈ ಪೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು ಎಂದು ತಿಳಿಸಿದೆ. ಇದು ಬಿಹಾರದ ಪಾಟ್ನಾ ನಗರದ್ದಾಗಿದ್ದು, ಸುಮಾರು 2016ರಿಂದಲೂ ಇಂಟರ್‌ನೆಟ್‌ನಲ್ಲಿ ಲಭ್ಯವಿದೆ. ಪಾಟ್ನಾದ ಟ್ರಾಫಿಕ್‌ ಸಮಸ್ಯೆ ಕುರಿತು ಬರೆಯಲಾದ ಸುದ್ದಿಗಳಲ್ಲಿ ಈ ಪೋಟೋ ಬಳಕೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...