Homeಮುಖಪುಟ2016ರ ಪಾಟ್ನಾ ಪೋಟೋ ಬಳಸಿ, ‘ಬಂದ್ ಯಶಸ್ವಿಯಾಗಿಲ್ಲ’ ಎಂದ ಬಿಜೆಪಿ ಬೆಂಬಲಿಗರು!

2016ರ ಪಾಟ್ನಾ ಪೋಟೋ ಬಳಸಿ, ‘ಬಂದ್ ಯಶಸ್ವಿಯಾಗಿಲ್ಲ’ ಎಂದ ಬಿಜೆಪಿ ಬೆಂಬಲಿಗರು!

- Advertisement -
- Advertisement -

ಸೆ.27ರಂದು ರೈತರು ಕರೆ ನೀಡಿದ್ದ ಭಾರತ್‌ ಬಂದ್‌ ಯಶಸ್ವಿಯಾಗಿದೆ. ಆದರೆ ಇದನ್ನು ಸಹಿಸದ ಹಲವು ಬಿಜೆಪಿ ಬೆಂಬಲಿಗರು, ‘ಬಂದ್ ಯಶಸ್ವಿಯಾಗಿಲ್ಲ’ ಎಂದು ಬಿಂಬಿಸಲು ಹಳೆಯ ಪೋಟೋವೊಂದನ್ನು ಶೇರ್‌ ಮಾಡಿ ನಗೆಪಾಟಲಿಗೀಡಾಗಿದೆ.

“ನನ್ನ ನಗರದಲ್ಲಿ ಭಾರತ್‌ ಬಂದ್‌ ಪರಿಣಾಮ ಬೀರಿಲ್ಲ” ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಒಂದೇ ಪೋಟೋವನ್ನು, ವಿವಿಧ ನಗರಗಳ ಹೆಸರಲ್ಲಿ ಬಿಂಬಿಸಿ ಬಿಜೆಪಿಯ ಬೆಂಬಲಿಗರು ಹಂಚಿಕೊಂಡಿದ್ದಾರೆ. ಸುರಾತ್‌, ದೆಹಲಿ, ಮುಂಬೈ- ಎಲ್ಲಕ್ಕೂ ಒಂದೇ ಪೋಟೋವನ್ನು ಬಳಸಲಾಗಿದೆ.

ಈ ಕೆಳಗಿರುವ ಪೋಟೋವನ್ನೇ ನೋಡಿ. “ನನ್ನ ನಗರ ಪೂರ್ಣ ತೆರೆದಿದೆ. ಭಾರತ್‌ ಬಂದ್‌ಗೆ ಸೂರತ್‌ ಬೆಂಬಲಿಸಿಲ್ಲ” ಎಂದು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ ‘ಸೂರತ್‌’ ಜಾಗದಲ್ಲಿ ‘ದೆಹಲಿ’, ‘ಪುಣೆ’ ಹೀಗೆ ಬೇರೊಂದು ನಗರದ ಹೆಸರು ಹಾಕಿ ಅನೇಕರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. ಫೇಸ್‌ಬುಕ್‌, ಟ್ವಿಟ್ಟರ್‌ನಲ್ಲಿ ಸಾವಿರಾರು ಮಂದಿ ಇದೇ ರೀತಿ ಶೇರ್‌ ಮಾಡಿ, ರೈತರ ಹೋರಾಟವನ್ನು ಅಪಹಾಸ್ಯ ಮಾಡಲು ಯತ್ನಿಸಿದ್ದಾರೆ.

‘ಒಂದು ರಸ್ತೆ, ಒಂದು ದೇಶ’

‘ಎಲ್ಲರೂ ಸಮಾನರು, ಎಲ್ಲರಿಗೂ ಒಂದೇ ಕಾನೂನು’ ಎಂದು ಆಗಾಗ್ಗೆ ಹೇಳುತ್ತದೆ. ಎಲ್ಲದರಲ್ಲೂ ‘ಏಕಸಂಸ್ಕೃತಿ’ ಬಿಂಬಿಸುವ ಬಿಜೆಪಿ, ‘ಒಂದು ರಾಷ್ಟ್ರ, ಒಂದು ಕಾನೂನು’, ‘ಒಂದು ರಾಷ್ಟ್ರ ಒಂದು ತೆರಿಗೆ’ ಎನ್ನುವ ಘೋಷಣೆಗಳನ್ನು ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪತ್ರಕರ್ತ ಎಸ್‌.ಸಿ.ದಿನೇಶ್‌ಕುಮಾರ್‌, ‘ಒಂದು ದೇಶ ಒಂದು ರಸ್ತೆ’ ಎಂದು ಪೋಟೋಗಳನ್ನು ಶೇರ್‌ ಮಾಡಿದ್ದಾರೆ. ‘ಒಂದು ದೇಶ, ಒಂದು ರಸ್ತೆ, ಒಂದೇ ಟ್ವೀಟ್‌’ ಎಂದು ಬರಹಗಾರ್ತಿ ಅಶ್ರೀಕ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಅನೇಕರು ಬಿಜೆಪಿಯ ಟ್ರೋಲ್‌ ಪಡೆಯ ಸುಳ್ಳುಗಳನ್ನು ಕಟುವಾಗಿ ಟೀಕಿಸಿದ್ದಾರೆ.

ಈ ವೈರಲ್‌ ಪೋಟೋ ಯಾವಾಗ ತೆಗೆದದ್ದು?

‘ದಿ ಕ್ವಿಂಟ್‌’ ಜಾಲತಾಣ ಈ ಪೋಟೋದ ಅಸಲಿ ಕಥೆಯನ್ನು ಪತ್ತೆ ಹಚ್ಚಿದೆ. ಜನಜಂಗುಳಿಯಿಂದ ತುಳುಕುತ್ತಿರುವ ಈ ಪೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು ಎಂದು ತಿಳಿಸಿದೆ. ಇದು ಬಿಹಾರದ ಪಾಟ್ನಾ ನಗರದ್ದಾಗಿದ್ದು, ಸುಮಾರು 2016ರಿಂದಲೂ ಇಂಟರ್‌ನೆಟ್‌ನಲ್ಲಿ ಲಭ್ಯವಿದೆ. ಪಾಟ್ನಾದ ಟ್ರಾಫಿಕ್‌ ಸಮಸ್ಯೆ ಕುರಿತು ಬರೆಯಲಾದ ಸುದ್ದಿಗಳಲ್ಲಿ ಈ ಪೋಟೋ ಬಳಕೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...