Homeಮುಖಪುಟ2016ರ ಪಾಟ್ನಾ ಪೋಟೋ ಬಳಸಿ, ‘ಬಂದ್ ಯಶಸ್ವಿಯಾಗಿಲ್ಲ’ ಎಂದ ಬಿಜೆಪಿ ಬೆಂಬಲಿಗರು!

2016ರ ಪಾಟ್ನಾ ಪೋಟೋ ಬಳಸಿ, ‘ಬಂದ್ ಯಶಸ್ವಿಯಾಗಿಲ್ಲ’ ಎಂದ ಬಿಜೆಪಿ ಬೆಂಬಲಿಗರು!

- Advertisement -
- Advertisement -

ಸೆ.27ರಂದು ರೈತರು ಕರೆ ನೀಡಿದ್ದ ಭಾರತ್‌ ಬಂದ್‌ ಯಶಸ್ವಿಯಾಗಿದೆ. ಆದರೆ ಇದನ್ನು ಸಹಿಸದ ಹಲವು ಬಿಜೆಪಿ ಬೆಂಬಲಿಗರು, ‘ಬಂದ್ ಯಶಸ್ವಿಯಾಗಿಲ್ಲ’ ಎಂದು ಬಿಂಬಿಸಲು ಹಳೆಯ ಪೋಟೋವೊಂದನ್ನು ಶೇರ್‌ ಮಾಡಿ ನಗೆಪಾಟಲಿಗೀಡಾಗಿದೆ.

“ನನ್ನ ನಗರದಲ್ಲಿ ಭಾರತ್‌ ಬಂದ್‌ ಪರಿಣಾಮ ಬೀರಿಲ್ಲ” ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಒಂದೇ ಪೋಟೋವನ್ನು, ವಿವಿಧ ನಗರಗಳ ಹೆಸರಲ್ಲಿ ಬಿಂಬಿಸಿ ಬಿಜೆಪಿಯ ಬೆಂಬಲಿಗರು ಹಂಚಿಕೊಂಡಿದ್ದಾರೆ. ಸುರಾತ್‌, ದೆಹಲಿ, ಮುಂಬೈ- ಎಲ್ಲಕ್ಕೂ ಒಂದೇ ಪೋಟೋವನ್ನು ಬಳಸಲಾಗಿದೆ.

ಈ ಕೆಳಗಿರುವ ಪೋಟೋವನ್ನೇ ನೋಡಿ. “ನನ್ನ ನಗರ ಪೂರ್ಣ ತೆರೆದಿದೆ. ಭಾರತ್‌ ಬಂದ್‌ಗೆ ಸೂರತ್‌ ಬೆಂಬಲಿಸಿಲ್ಲ” ಎಂದು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ ‘ಸೂರತ್‌’ ಜಾಗದಲ್ಲಿ ‘ದೆಹಲಿ’, ‘ಪುಣೆ’ ಹೀಗೆ ಬೇರೊಂದು ನಗರದ ಹೆಸರು ಹಾಕಿ ಅನೇಕರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. ಫೇಸ್‌ಬುಕ್‌, ಟ್ವಿಟ್ಟರ್‌ನಲ್ಲಿ ಸಾವಿರಾರು ಮಂದಿ ಇದೇ ರೀತಿ ಶೇರ್‌ ಮಾಡಿ, ರೈತರ ಹೋರಾಟವನ್ನು ಅಪಹಾಸ್ಯ ಮಾಡಲು ಯತ್ನಿಸಿದ್ದಾರೆ.

‘ಒಂದು ರಸ್ತೆ, ಒಂದು ದೇಶ’

‘ಎಲ್ಲರೂ ಸಮಾನರು, ಎಲ್ಲರಿಗೂ ಒಂದೇ ಕಾನೂನು’ ಎಂದು ಆಗಾಗ್ಗೆ ಹೇಳುತ್ತದೆ. ಎಲ್ಲದರಲ್ಲೂ ‘ಏಕಸಂಸ್ಕೃತಿ’ ಬಿಂಬಿಸುವ ಬಿಜೆಪಿ, ‘ಒಂದು ರಾಷ್ಟ್ರ, ಒಂದು ಕಾನೂನು’, ‘ಒಂದು ರಾಷ್ಟ್ರ ಒಂದು ತೆರಿಗೆ’ ಎನ್ನುವ ಘೋಷಣೆಗಳನ್ನು ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪತ್ರಕರ್ತ ಎಸ್‌.ಸಿ.ದಿನೇಶ್‌ಕುಮಾರ್‌, ‘ಒಂದು ದೇಶ ಒಂದು ರಸ್ತೆ’ ಎಂದು ಪೋಟೋಗಳನ್ನು ಶೇರ್‌ ಮಾಡಿದ್ದಾರೆ. ‘ಒಂದು ದೇಶ, ಒಂದು ರಸ್ತೆ, ಒಂದೇ ಟ್ವೀಟ್‌’ ಎಂದು ಬರಹಗಾರ್ತಿ ಅಶ್ರೀಕ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಅನೇಕರು ಬಿಜೆಪಿಯ ಟ್ರೋಲ್‌ ಪಡೆಯ ಸುಳ್ಳುಗಳನ್ನು ಕಟುವಾಗಿ ಟೀಕಿಸಿದ್ದಾರೆ.

ಈ ವೈರಲ್‌ ಪೋಟೋ ಯಾವಾಗ ತೆಗೆದದ್ದು?

‘ದಿ ಕ್ವಿಂಟ್‌’ ಜಾಲತಾಣ ಈ ಪೋಟೋದ ಅಸಲಿ ಕಥೆಯನ್ನು ಪತ್ತೆ ಹಚ್ಚಿದೆ. ಜನಜಂಗುಳಿಯಿಂದ ತುಳುಕುತ್ತಿರುವ ಈ ಪೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು ಎಂದು ತಿಳಿಸಿದೆ. ಇದು ಬಿಹಾರದ ಪಾಟ್ನಾ ನಗರದ್ದಾಗಿದ್ದು, ಸುಮಾರು 2016ರಿಂದಲೂ ಇಂಟರ್‌ನೆಟ್‌ನಲ್ಲಿ ಲಭ್ಯವಿದೆ. ಪಾಟ್ನಾದ ಟ್ರಾಫಿಕ್‌ ಸಮಸ್ಯೆ ಕುರಿತು ಬರೆಯಲಾದ ಸುದ್ದಿಗಳಲ್ಲಿ ಈ ಪೋಟೋ ಬಳಕೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...