Homeಮುಖಪುಟಮೇಘಾಲಯದಲ್ಲಿ ಎನ್‌ಪಿಪಿಗೆ ಬಿಜೆಪಿ ಬೆಂಬಲ: ಹಿಂದಿನ ಮೋದಿ ಟೀಕೆಯ ಭಾಷಣ ಹಂಚಿಕೊಂಡ ಕಾಂಗ್ರೆಸ್

ಮೇಘಾಲಯದಲ್ಲಿ ಎನ್‌ಪಿಪಿಗೆ ಬಿಜೆಪಿ ಬೆಂಬಲ: ಹಿಂದಿನ ಮೋದಿ ಟೀಕೆಯ ಭಾಷಣ ಹಂಚಿಕೊಂಡ ಕಾಂಗ್ರೆಸ್

- Advertisement -
- Advertisement -

ಮೇಘಾಲಯ ವಿಧಾನಸಾಭಾ ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಪ್ರಮುಖರು, ”ರಾಷ್ಟ್ರೀಯ ಪೀಪಲ್ಸ್ ಪಕ್ಷ(ಎನ್‌ಪಿಪಿ)ದ ನಾಯಕ ಮತ್ತು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರನ್ನು ದೇಶದಲ್ಲಿ ‘ಅತ್ಯಂತ ಭ್ರಷ್ಟ’ ರಾಜ್ಯ ಸರ್ಕಾರವನ್ನು ನಡೆಸುತ್ತಿದ್ದಾರೆ” ಎಂದು ನಿರಂತರವಾಗಿ ಗುರಿಯಾಗಿಸಿ ವಾಗ್ಧಾಳಿ ನಡೆಸಿದ್ದರು.

ಭ್ರಷ್ಟಾಚಾರದ ವಿಷಯದಲ್ಲಿ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ವಿರುದ್ಧ ಪ್ರಚಾರ ನಡೆಸುತ್ತಿದ್ದ ಬಿಜೆಪಿ ನಾಯಕರು, ಇದೀಗ ಅದೇ ಎನ್‌ಪಿಪಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಸೋಮವಾರ ಬಿಜೆಪಿಯನ್ನು ಗುರಿಯಾಗಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿರುವ ಹಿಂದಿನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು, ”ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ದೇಶದ ‘ಅತ್ಯಂತ ಭ್ರಷ್ಟ’ ರಾಜ್ಯ ಸರ್ಕಾರವನ್ನು ನಡೆಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವೀಡಿಯೊದಲ್ಲಿ, ಪ್ರಧಾನಿ ಮೋದಿ ಅವರು ಮಾತನಾಡಿದ್ದು, ”ನಾನು ಜನರ ಮಾತುಗಳನ್ನು ಕೇಳಿದಾಗ ನನಗೆ ತುಂಬಾ ದುಃಖವಾಗುತ್ತದೆ. ಹಣ ಖರ್ಚು ಮಾಡಿಲ್ಲ, ರಸ್ತೆ ನಿರ್ಮಾಣ ಮಾಡಿಲ್ಲ, ಶಾಲೆ, ಕಾಲೇಜು, ಆಸ್ಪತ್ರೆ ನಿರ್ಮಾಣ ಮಾಡಿಲ್ಲ ಎಂದು ಜನ ಹೇಳುತ್ತಾರೆ. ಹಾಗಾದರೆ ಆ ಹಣ ಎಲ್ಲಿ ಹೋಯಿತು?” ಎಂದು ಅವರು ಹೇಳುವುದನ್ನು ನೋಡಬಹುದು.

ಇದನ್ನೂ ಓದಿ: ವಿಧಾನಸಭಾ ಫಲಿತಾಂಶ: ನಾಗಲ್ಯಾಂಡ್, ತ್ರಿಪುರದಲ್ಲಿ ಬಿಜೆಪಿ ಮುನ್ನಡೆ – ಮೇಘಾಲಯದಲ್ಲಿ NPP ಮುನ್ನಡೆ

ಹಿಂದಿನ ಅವಧಿಯಲ್ಲಿ ಬಿಜೆಪಿ ಮತ್ತು ಎನ್‌ಪಿಪಿ ಮೈತ್ರಿ ಸರ್ಕಾರ ರಚಿಸಿದ್ದರು. ಆದರೆ ಚುನಾವಣೆಗೆ ಮುಂಚೆಯೇ ಸಂಬಂಧವನ್ನು ಮುರಿದು, ಎರಡೂ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಿದವು. 60 ಸದಸ್ಯ ಬಲದ ಮೇಘಾಲಯದ ವಿಧಾನಸಭೆಯ 59 ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆದಿತ್ತು. ಬುಡಕಟ್ಟು ಮತ್ತು ಕ್ರೈಸ್ತ ಸಮುದಾಯದ ಪ್ರಾಬಲ್ಯವಿರುವ ಚಿಕ್ಕ ರಾಜ್ಯವಾದ ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) 26 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರ ರಚನೆ ಮಾಡಲು ಮೂವರು ಸದಸ್ಯರ ಕೊರತೆ ಎದುರಿಸುತ್ತಿದೆ. ಅದು ಈಗ ಬೇರೆ ಪಕ್ಷದ ಬೆಂಬಲದೊಂದಿಗೆ ಸರ್ಕಾರ ರಚಿಸಬೇಕಿದೆ. ಇದೀಗ ಎನ್‌ಪಿಪಿ ಜೊತೆ ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಿದೆ.

ಜೈರಾಮ್ ರಮೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ”ಕೆಲವು ದಿನಗಳ ಹಿಂದೆ ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ಅವರ ಸರ್ಕಾರವು ಪ್ರಧಾನಿ ಮತ್ತು ಗೃಹಸಚಿವರ ಪ್ರಕಾರ ದೇಶದ ಅತ್ಯಂತ ಭ್ರಷ್ಟವಾಗಿತ್ತು. ಈಗ ಸಹಜವಾಗಿಯೇ ಎಲ್ಲವನ್ನೂ ಮರೆತು ಬಿಜೆಪಿ ಅವರ ಜೊತೆ ಕೈ ಜೋಡಿಸುತ್ತಿದೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ”ಬಿಜೆಪಿ ವಾಷಿಂಗ್ ಮೆಷಿನ್ ಈಗ ಪೂರ್ಣ ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಶುಕ್ರವಾರ ಸಂಗ್ಮಾ ಅವರು ಮೇಘಾಲಯ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ”ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಶ್ಲಾಘನೀಯ ಸಾಧನೆಗಾಗಿ ನಾನು ಕಾನ್ರಾಡ್ ಸಂಗ್ಮಾ ಅವರನ್ನು ಅಭಿನಂದಿಸುತ್ತೇನೆ. ನನ್ನ ಸ್ನೇಹಿತ, ದಿವಂಗತ ಪಿಎ ಸಂಗ್ಮಾ ಜಿ ಅವರು ಇದ್ದಿದ್ದರೆ ತುಂಬಾ ಹೆಮ್ಮೆಪಡುತ್ತಿದ್ದರು. ಮೇಘಾಲಯದ ಪ್ರಗತಿಗಾಗಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಮೋದಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...