Homeಮುಖಪುಟಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಸಾರ್ವಜನಿಕ ಯೋಜನೆ, ಕಾರ್ಯಕ್ರಮಗಳನ್ನು ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಂಡಿದ್ದು ಇದು ಮೊದಲೇನೂ ಅಲ್ಲ...

- Advertisement -
- Advertisement -

ಭಾರತ ಅಲಂಕರಿಸಲಿರುವ ‘ಜಿ 20- ಅಧ್ಯಕ್ಷ ಸ್ಥಾನ’ದ ಲೋಗೋದಲ್ಲಿ ಬಿಜೆಪಿಯ ಚಿಹ್ನೆಯನ್ನು ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಪ್ರತಿಕ್ರಿಯಿಸಿದ್ದು, “ಕಮಲವು ದೇಶದ ಸಾಂಸ್ಕೃತಿಕ ಗುರುತಿನ ಭಾಗವಾಗಿದೆ” ಎಂದಿದ್ದಾರೆ.

“ಭಾರತೀಯ ಜನತಾ ಪಕ್ಷವನ್ನು ಪ್ರಚಾರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಲೋಗೋದಲ್ಲಿ ಕಮಲದ  ಚಿತ್ರವನ್ನು ಬಳಸಿದೆ” ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಮಲವು ಹಿಂದುತ್ವ ಪಕ್ಷದ ಚುನಾವಣಾ ಚಿಹ್ನೆಯೂ ಆಗಿದೆ.

“ಸತ್ಯವೆಂದರೆ ಭಾರತ ಸರ್ಕಾರವು 1950ರಲ್ಲಿ ಕಮಲವನ್ನು ರಾಷ್ಟ್ರೀಯ ಹೂವು ಎಂದು ಘೋಷಿಸಿದೆ” ಎಂದು ರಾಜನಾಥ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ. “ಅವರು ಹಾಗೆ ಮಾಡಿದ್ದಾರೆ, ಏಕೆಂದರೆ ಕಮಲವು ನಮ್ಮ ಸಾಂಸ್ಕೃತಿಕ ಗುರುತಿನ ಸಂಕೇತವಾಗಿದೆ” ಎಂದು ಸಮರ್ಥಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿ- 20 ಅಥವಾ 20 ದೇಶಗಳ ಸಮೂಹದ ಅಧ್ಯಕ್ಷ ಸ್ಥಾನವನ್ನು ಅದರ ಸದಸ್ಯರು ಕ್ರಮಬದ್ಧವಾಗಿ ವಹಿಸುವುದು ನಡೆದು ಬಂದಿದೆ. ಪ್ರಸ್ತುತ ಅಧ್ಯಕ್ಷ ಸ್ಥಾನ ಇಂಡೋನೇಷ್ಯಾ ವಹಿಸಿದ್ದು, ಡಿಸೆಂಬರ್ 1 ರಂದು ಭಾರತ ಈ ಸ್ಥಾನವನ್ನು ಅಲಂಕರಿಸುವ ನಿರೀಕ್ಷೆ ಇದೆ.

ನವೆಂಬರ್ 8ರಂದು ಲೋಗೋವನ್ನು ಬಿಡುಗಡೆ ಮಾಡಿದ ನಂತರ ಪ್ರಧಾನ ಮಂತ್ರಿ ಕಚೇರಿಯು ಪತ್ರಿಕಾ ಪ್ರಕಟಣೆ ನೀಡಿತ್ತು. “ಭಾರತದ ರಾಷ್ಟ್ರಧ್ವಜದ ರೋಮಾಂಚಕ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಮತ್ತು ನೀಲಿ ಬಣ್ಣಗಳಿಂದ ಸ್ಫೂರ್ತಿ ಪಡೆಯಲಾಗಿದೆ” ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

“ಇದು (ಲೋಗೋ) ಭೂಮಿಯನ್ನು ಕಮಲದೊಂದಿಗೆ ಜೋಡಿಸುತ್ತದೆ. ಭಾರತದ ರಾಷ್ಟ್ರೀಯ ಹೂವು- ಸವಾಲುಗಳ ನಡುವೆ ಬೆಳೆಯುವುದನ್ನು ಪ್ರತಿಬಿಂಬಿಸುತ್ತದೆ. ಭೂಮಿಯ ಚಿತ್ರವು ಭಾರತದ ಪರಿಸರಪ್ರಜ್ಞೆಯ ಜೀವನ ವಿಧಾನವನ್ನು ಪ್ರತಿಬಿಂಬಿಸುತ್ತದೆ, ಇದು ಪ್ರಕೃತಿಯೊಂದಿಗೆ ಪರಿಪೂರ್ಣ ಸಾಮರಸ್ಯವನ್ನು ಸೂಚಿಸುತ್ತದೆ” ಎಂದು ಕಚೇರಿ ಹೇಳಿತ್ತು.

ನವೆಂಬರ್ 9ರಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಂಗ್ರೆಸ್ ಧ್ವಜವನ್ನು ಭಾರತದ ರಾಷ್ಟ್ರಧ್ವಜ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು” ಎಂದಿದ್ದರು.

“ಈಗ, ಬಿಜೆಪಿಯ ಚುನಾವಣಾ ಚಿಹ್ನೆಯು ಜಿ-20ರ ಭಾರತದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಲಾಂಛನವಾಗಿದೆ! ಆಘಾತಕಾರಿಯಾದರೂ, ಮೋದಿ ಮತ್ತು ಬಿಜೆಪಿ ತಮ್ಮನ್ನು ನಾಚಿಕೆಯಿಲ್ಲದೆ ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ” ಎಂದು ಕುಟುಕಿದ್ದರು.

ಇದಕ್ಕೆ ರಾಜನಾಥ್ ಸಿಂಗ್‌, “ಭಾರತದ ಸಂಸ್ಕೃತಿಯ ಪ್ರತೀಕಗಳ ಸುತ್ತ ವಿವಾದಗಳು ಸೃಷ್ಟಿಯಾಗುತ್ತಿರುವುದು ನೋವಿನ ಸಂಗತಿ” ಎಂದು ಪ್ರತಿಕ್ರಿಯಿಸಿದರು.

ಆರೋಪ ಮಾಡುವುದಕ್ಕೂ ಮಿತಿ ಇದೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. “ಇದು ಯಾವುದೋ ಪಕ್ಷದ ಚುನಾವಣಾ ಚಿಹ್ನೆಯಾಗಿರುವುದರಿಂದ, ನಾವು ಅದನ್ನು ಬಿಟ್ಟುಬಿಡಬೇಕೆ? ಕಮಲವನ್ನು ಭಾರತದ ರಾಷ್ಟ್ರೀಯ ಹೂವು ಎಂದು ಗುರುತಿಸುವುದನ್ನು ರದ್ದುಗೊಳಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರು ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿದ್ದಾರೆ.“ಕೈ ಎಂಬ ಪದದ ಬಳಕೆಯನ್ನು ಸಹ ನಿಲ್ಲಿಸಬೇಕೇ?” ಎಂದು ಕೇಳಿದ್ದಾರೆ.

ಯಾವುದೋ ಪಕ್ಷದ ಚುನಾವಣಾ ಚಿಹ್ನೆ ಸೈಕಲ್ ಆಗಿದ್ದರೆ, ಅದು ಚುನಾವಣಾ ಚಿಹ್ನೆ ಎಂಬ ಕಾರಣಕ್ಕೆ ನಾವು ಸೈಕಲ್ ಮೇಲೆ ಕುಳಿತುಕೊಳ್ಳಬಾರದೇ ಎಂದಿದ್ದಾರೆ.

‘ಈ ರೀತಿಯ ಆರೋಪಗಳು ಮೊದಲೇನಲ್ಲ’

ಸರ್ಕಾರಿ ಯೋಜನೆಗಳಲ್ಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಿಜೆಪಿ ತನ್ನ ಪಕ್ಷವನ್ನು ಪ್ರಚಾರ ಮಾಡಿಕೊಳ್ಳುತ್ತಿದೆ ಎಂಬ ಆರೋಪ ಇದೇ ಮೊದಲೇನೂ ಅಲ್ಲ.

‘ಭಾರತೀಯ ಜನೌಷಧಿ ಪರಿಯೋಜನ’ವನ್ನು ಪಕ್ಷದ ಪ್ರಚಾರಕ್ಕೆ ಬಳಸಿದ್ದು ಟೀಕೆಗೆ ಒಳಗಾಗಿತ್ತು. ಔಷಧಿಯ ಪ್ಯಾಕೆಟ್ ಮೇಲೆ ‘ಭಾಜಪ’ ಎಂಬುದನ್ನು ಕೇಸರಿ ಬಣ್ಣದಲ್ಲಿ ಬಳಸಿದ್ದು ವರದಿಯಾಗಿತ್ತು.

“ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು”- ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಗಿತ್ತು.

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ ಎಂದು ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...