Homeಮುಖಪುಟಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಸಾರ್ವಜನಿಕ ಯೋಜನೆ, ಕಾರ್ಯಕ್ರಮಗಳನ್ನು ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಂಡಿದ್ದು ಇದು ಮೊದಲೇನೂ ಅಲ್ಲ...

- Advertisement -
- Advertisement -

ಭಾರತ ಅಲಂಕರಿಸಲಿರುವ ‘ಜಿ 20- ಅಧ್ಯಕ್ಷ ಸ್ಥಾನ’ದ ಲೋಗೋದಲ್ಲಿ ಬಿಜೆಪಿಯ ಚಿಹ್ನೆಯನ್ನು ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಪ್ರತಿಕ್ರಿಯಿಸಿದ್ದು, “ಕಮಲವು ದೇಶದ ಸಾಂಸ್ಕೃತಿಕ ಗುರುತಿನ ಭಾಗವಾಗಿದೆ” ಎಂದಿದ್ದಾರೆ.

“ಭಾರತೀಯ ಜನತಾ ಪಕ್ಷವನ್ನು ಪ್ರಚಾರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಲೋಗೋದಲ್ಲಿ ಕಮಲದ  ಚಿತ್ರವನ್ನು ಬಳಸಿದೆ” ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಮಲವು ಹಿಂದುತ್ವ ಪಕ್ಷದ ಚುನಾವಣಾ ಚಿಹ್ನೆಯೂ ಆಗಿದೆ.

“ಸತ್ಯವೆಂದರೆ ಭಾರತ ಸರ್ಕಾರವು 1950ರಲ್ಲಿ ಕಮಲವನ್ನು ರಾಷ್ಟ್ರೀಯ ಹೂವು ಎಂದು ಘೋಷಿಸಿದೆ” ಎಂದು ರಾಜನಾಥ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ. “ಅವರು ಹಾಗೆ ಮಾಡಿದ್ದಾರೆ, ಏಕೆಂದರೆ ಕಮಲವು ನಮ್ಮ ಸಾಂಸ್ಕೃತಿಕ ಗುರುತಿನ ಸಂಕೇತವಾಗಿದೆ” ಎಂದು ಸಮರ್ಥಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿ- 20 ಅಥವಾ 20 ದೇಶಗಳ ಸಮೂಹದ ಅಧ್ಯಕ್ಷ ಸ್ಥಾನವನ್ನು ಅದರ ಸದಸ್ಯರು ಕ್ರಮಬದ್ಧವಾಗಿ ವಹಿಸುವುದು ನಡೆದು ಬಂದಿದೆ. ಪ್ರಸ್ತುತ ಅಧ್ಯಕ್ಷ ಸ್ಥಾನ ಇಂಡೋನೇಷ್ಯಾ ವಹಿಸಿದ್ದು, ಡಿಸೆಂಬರ್ 1 ರಂದು ಭಾರತ ಈ ಸ್ಥಾನವನ್ನು ಅಲಂಕರಿಸುವ ನಿರೀಕ್ಷೆ ಇದೆ.

ನವೆಂಬರ್ 8ರಂದು ಲೋಗೋವನ್ನು ಬಿಡುಗಡೆ ಮಾಡಿದ ನಂತರ ಪ್ರಧಾನ ಮಂತ್ರಿ ಕಚೇರಿಯು ಪತ್ರಿಕಾ ಪ್ರಕಟಣೆ ನೀಡಿತ್ತು. “ಭಾರತದ ರಾಷ್ಟ್ರಧ್ವಜದ ರೋಮಾಂಚಕ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಮತ್ತು ನೀಲಿ ಬಣ್ಣಗಳಿಂದ ಸ್ಫೂರ್ತಿ ಪಡೆಯಲಾಗಿದೆ” ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

“ಇದು (ಲೋಗೋ) ಭೂಮಿಯನ್ನು ಕಮಲದೊಂದಿಗೆ ಜೋಡಿಸುತ್ತದೆ. ಭಾರತದ ರಾಷ್ಟ್ರೀಯ ಹೂವು- ಸವಾಲುಗಳ ನಡುವೆ ಬೆಳೆಯುವುದನ್ನು ಪ್ರತಿಬಿಂಬಿಸುತ್ತದೆ. ಭೂಮಿಯ ಚಿತ್ರವು ಭಾರತದ ಪರಿಸರಪ್ರಜ್ಞೆಯ ಜೀವನ ವಿಧಾನವನ್ನು ಪ್ರತಿಬಿಂಬಿಸುತ್ತದೆ, ಇದು ಪ್ರಕೃತಿಯೊಂದಿಗೆ ಪರಿಪೂರ್ಣ ಸಾಮರಸ್ಯವನ್ನು ಸೂಚಿಸುತ್ತದೆ” ಎಂದು ಕಚೇರಿ ಹೇಳಿತ್ತು.

ನವೆಂಬರ್ 9ರಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಂಗ್ರೆಸ್ ಧ್ವಜವನ್ನು ಭಾರತದ ರಾಷ್ಟ್ರಧ್ವಜ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು” ಎಂದಿದ್ದರು.

“ಈಗ, ಬಿಜೆಪಿಯ ಚುನಾವಣಾ ಚಿಹ್ನೆಯು ಜಿ-20ರ ಭಾರತದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಲಾಂಛನವಾಗಿದೆ! ಆಘಾತಕಾರಿಯಾದರೂ, ಮೋದಿ ಮತ್ತು ಬಿಜೆಪಿ ತಮ್ಮನ್ನು ನಾಚಿಕೆಯಿಲ್ಲದೆ ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ” ಎಂದು ಕುಟುಕಿದ್ದರು.

ಇದಕ್ಕೆ ರಾಜನಾಥ್ ಸಿಂಗ್‌, “ಭಾರತದ ಸಂಸ್ಕೃತಿಯ ಪ್ರತೀಕಗಳ ಸುತ್ತ ವಿವಾದಗಳು ಸೃಷ್ಟಿಯಾಗುತ್ತಿರುವುದು ನೋವಿನ ಸಂಗತಿ” ಎಂದು ಪ್ರತಿಕ್ರಿಯಿಸಿದರು.

ಆರೋಪ ಮಾಡುವುದಕ್ಕೂ ಮಿತಿ ಇದೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. “ಇದು ಯಾವುದೋ ಪಕ್ಷದ ಚುನಾವಣಾ ಚಿಹ್ನೆಯಾಗಿರುವುದರಿಂದ, ನಾವು ಅದನ್ನು ಬಿಟ್ಟುಬಿಡಬೇಕೆ? ಕಮಲವನ್ನು ಭಾರತದ ರಾಷ್ಟ್ರೀಯ ಹೂವು ಎಂದು ಗುರುತಿಸುವುದನ್ನು ರದ್ದುಗೊಳಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರು ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿದ್ದಾರೆ.“ಕೈ ಎಂಬ ಪದದ ಬಳಕೆಯನ್ನು ಸಹ ನಿಲ್ಲಿಸಬೇಕೇ?” ಎಂದು ಕೇಳಿದ್ದಾರೆ.

ಯಾವುದೋ ಪಕ್ಷದ ಚುನಾವಣಾ ಚಿಹ್ನೆ ಸೈಕಲ್ ಆಗಿದ್ದರೆ, ಅದು ಚುನಾವಣಾ ಚಿಹ್ನೆ ಎಂಬ ಕಾರಣಕ್ಕೆ ನಾವು ಸೈಕಲ್ ಮೇಲೆ ಕುಳಿತುಕೊಳ್ಳಬಾರದೇ ಎಂದಿದ್ದಾರೆ.

‘ಈ ರೀತಿಯ ಆರೋಪಗಳು ಮೊದಲೇನಲ್ಲ’

ಸರ್ಕಾರಿ ಯೋಜನೆಗಳಲ್ಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಿಜೆಪಿ ತನ್ನ ಪಕ್ಷವನ್ನು ಪ್ರಚಾರ ಮಾಡಿಕೊಳ್ಳುತ್ತಿದೆ ಎಂಬ ಆರೋಪ ಇದೇ ಮೊದಲೇನೂ ಅಲ್ಲ.

‘ಭಾರತೀಯ ಜನೌಷಧಿ ಪರಿಯೋಜನ’ವನ್ನು ಪಕ್ಷದ ಪ್ರಚಾರಕ್ಕೆ ಬಳಸಿದ್ದು ಟೀಕೆಗೆ ಒಳಗಾಗಿತ್ತು. ಔಷಧಿಯ ಪ್ಯಾಕೆಟ್ ಮೇಲೆ ‘ಭಾಜಪ’ ಎಂಬುದನ್ನು ಕೇಸರಿ ಬಣ್ಣದಲ್ಲಿ ಬಳಸಿದ್ದು ವರದಿಯಾಗಿತ್ತು.

“ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು”- ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಗಿತ್ತು.

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ ಎಂದು ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...