Homeಮುಖಪುಟಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಸಾರ್ವಜನಿಕ ಯೋಜನೆ, ಕಾರ್ಯಕ್ರಮಗಳನ್ನು ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಂಡಿದ್ದು ಇದು ಮೊದಲೇನೂ ಅಲ್ಲ...

- Advertisement -
- Advertisement -

ಭಾರತ ಅಲಂಕರಿಸಲಿರುವ ‘ಜಿ 20- ಅಧ್ಯಕ್ಷ ಸ್ಥಾನ’ದ ಲೋಗೋದಲ್ಲಿ ಬಿಜೆಪಿಯ ಚಿಹ್ನೆಯನ್ನು ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಪ್ರತಿಕ್ರಿಯಿಸಿದ್ದು, “ಕಮಲವು ದೇಶದ ಸಾಂಸ್ಕೃತಿಕ ಗುರುತಿನ ಭಾಗವಾಗಿದೆ” ಎಂದಿದ್ದಾರೆ.

“ಭಾರತೀಯ ಜನತಾ ಪಕ್ಷವನ್ನು ಪ್ರಚಾರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಲೋಗೋದಲ್ಲಿ ಕಮಲದ  ಚಿತ್ರವನ್ನು ಬಳಸಿದೆ” ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಮಲವು ಹಿಂದುತ್ವ ಪಕ್ಷದ ಚುನಾವಣಾ ಚಿಹ್ನೆಯೂ ಆಗಿದೆ.

“ಸತ್ಯವೆಂದರೆ ಭಾರತ ಸರ್ಕಾರವು 1950ರಲ್ಲಿ ಕಮಲವನ್ನು ರಾಷ್ಟ್ರೀಯ ಹೂವು ಎಂದು ಘೋಷಿಸಿದೆ” ಎಂದು ರಾಜನಾಥ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ. “ಅವರು ಹಾಗೆ ಮಾಡಿದ್ದಾರೆ, ಏಕೆಂದರೆ ಕಮಲವು ನಮ್ಮ ಸಾಂಸ್ಕೃತಿಕ ಗುರುತಿನ ಸಂಕೇತವಾಗಿದೆ” ಎಂದು ಸಮರ್ಥಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿ- 20 ಅಥವಾ 20 ದೇಶಗಳ ಸಮೂಹದ ಅಧ್ಯಕ್ಷ ಸ್ಥಾನವನ್ನು ಅದರ ಸದಸ್ಯರು ಕ್ರಮಬದ್ಧವಾಗಿ ವಹಿಸುವುದು ನಡೆದು ಬಂದಿದೆ. ಪ್ರಸ್ತುತ ಅಧ್ಯಕ್ಷ ಸ್ಥಾನ ಇಂಡೋನೇಷ್ಯಾ ವಹಿಸಿದ್ದು, ಡಿಸೆಂಬರ್ 1 ರಂದು ಭಾರತ ಈ ಸ್ಥಾನವನ್ನು ಅಲಂಕರಿಸುವ ನಿರೀಕ್ಷೆ ಇದೆ.

ನವೆಂಬರ್ 8ರಂದು ಲೋಗೋವನ್ನು ಬಿಡುಗಡೆ ಮಾಡಿದ ನಂತರ ಪ್ರಧಾನ ಮಂತ್ರಿ ಕಚೇರಿಯು ಪತ್ರಿಕಾ ಪ್ರಕಟಣೆ ನೀಡಿತ್ತು. “ಭಾರತದ ರಾಷ್ಟ್ರಧ್ವಜದ ರೋಮಾಂಚಕ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಮತ್ತು ನೀಲಿ ಬಣ್ಣಗಳಿಂದ ಸ್ಫೂರ್ತಿ ಪಡೆಯಲಾಗಿದೆ” ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

“ಇದು (ಲೋಗೋ) ಭೂಮಿಯನ್ನು ಕಮಲದೊಂದಿಗೆ ಜೋಡಿಸುತ್ತದೆ. ಭಾರತದ ರಾಷ್ಟ್ರೀಯ ಹೂವು- ಸವಾಲುಗಳ ನಡುವೆ ಬೆಳೆಯುವುದನ್ನು ಪ್ರತಿಬಿಂಬಿಸುತ್ತದೆ. ಭೂಮಿಯ ಚಿತ್ರವು ಭಾರತದ ಪರಿಸರಪ್ರಜ್ಞೆಯ ಜೀವನ ವಿಧಾನವನ್ನು ಪ್ರತಿಬಿಂಬಿಸುತ್ತದೆ, ಇದು ಪ್ರಕೃತಿಯೊಂದಿಗೆ ಪರಿಪೂರ್ಣ ಸಾಮರಸ್ಯವನ್ನು ಸೂಚಿಸುತ್ತದೆ” ಎಂದು ಕಚೇರಿ ಹೇಳಿತ್ತು.

ನವೆಂಬರ್ 9ರಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಂಗ್ರೆಸ್ ಧ್ವಜವನ್ನು ಭಾರತದ ರಾಷ್ಟ್ರಧ್ವಜ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು” ಎಂದಿದ್ದರು.

“ಈಗ, ಬಿಜೆಪಿಯ ಚುನಾವಣಾ ಚಿಹ್ನೆಯು ಜಿ-20ರ ಭಾರತದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಲಾಂಛನವಾಗಿದೆ! ಆಘಾತಕಾರಿಯಾದರೂ, ಮೋದಿ ಮತ್ತು ಬಿಜೆಪಿ ತಮ್ಮನ್ನು ನಾಚಿಕೆಯಿಲ್ಲದೆ ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ” ಎಂದು ಕುಟುಕಿದ್ದರು.

ಇದಕ್ಕೆ ರಾಜನಾಥ್ ಸಿಂಗ್‌, “ಭಾರತದ ಸಂಸ್ಕೃತಿಯ ಪ್ರತೀಕಗಳ ಸುತ್ತ ವಿವಾದಗಳು ಸೃಷ್ಟಿಯಾಗುತ್ತಿರುವುದು ನೋವಿನ ಸಂಗತಿ” ಎಂದು ಪ್ರತಿಕ್ರಿಯಿಸಿದರು.

ಆರೋಪ ಮಾಡುವುದಕ್ಕೂ ಮಿತಿ ಇದೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. “ಇದು ಯಾವುದೋ ಪಕ್ಷದ ಚುನಾವಣಾ ಚಿಹ್ನೆಯಾಗಿರುವುದರಿಂದ, ನಾವು ಅದನ್ನು ಬಿಟ್ಟುಬಿಡಬೇಕೆ? ಕಮಲವನ್ನು ಭಾರತದ ರಾಷ್ಟ್ರೀಯ ಹೂವು ಎಂದು ಗುರುತಿಸುವುದನ್ನು ರದ್ದುಗೊಳಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರು ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿದ್ದಾರೆ.“ಕೈ ಎಂಬ ಪದದ ಬಳಕೆಯನ್ನು ಸಹ ನಿಲ್ಲಿಸಬೇಕೇ?” ಎಂದು ಕೇಳಿದ್ದಾರೆ.

ಯಾವುದೋ ಪಕ್ಷದ ಚುನಾವಣಾ ಚಿಹ್ನೆ ಸೈಕಲ್ ಆಗಿದ್ದರೆ, ಅದು ಚುನಾವಣಾ ಚಿಹ್ನೆ ಎಂಬ ಕಾರಣಕ್ಕೆ ನಾವು ಸೈಕಲ್ ಮೇಲೆ ಕುಳಿತುಕೊಳ್ಳಬಾರದೇ ಎಂದಿದ್ದಾರೆ.

‘ಈ ರೀತಿಯ ಆರೋಪಗಳು ಮೊದಲೇನಲ್ಲ’

ಸರ್ಕಾರಿ ಯೋಜನೆಗಳಲ್ಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಿಜೆಪಿ ತನ್ನ ಪಕ್ಷವನ್ನು ಪ್ರಚಾರ ಮಾಡಿಕೊಳ್ಳುತ್ತಿದೆ ಎಂಬ ಆರೋಪ ಇದೇ ಮೊದಲೇನೂ ಅಲ್ಲ.

‘ಭಾರತೀಯ ಜನೌಷಧಿ ಪರಿಯೋಜನ’ವನ್ನು ಪಕ್ಷದ ಪ್ರಚಾರಕ್ಕೆ ಬಳಸಿದ್ದು ಟೀಕೆಗೆ ಒಳಗಾಗಿತ್ತು. ಔಷಧಿಯ ಪ್ಯಾಕೆಟ್ ಮೇಲೆ ‘ಭಾಜಪ’ ಎಂಬುದನ್ನು ಕೇಸರಿ ಬಣ್ಣದಲ್ಲಿ ಬಳಸಿದ್ದು ವರದಿಯಾಗಿತ್ತು.

“ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು”- ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಗಿತ್ತು.

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ ಎಂದು ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...