Homeಮುಖಪುಟಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಸಾರ್ವಜನಿಕ ಯೋಜನೆ, ಕಾರ್ಯಕ್ರಮಗಳನ್ನು ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಂಡಿದ್ದು ಇದು ಮೊದಲೇನೂ ಅಲ್ಲ...

- Advertisement -
- Advertisement -

ಭಾರತ ಅಲಂಕರಿಸಲಿರುವ ‘ಜಿ 20- ಅಧ್ಯಕ್ಷ ಸ್ಥಾನ’ದ ಲೋಗೋದಲ್ಲಿ ಬಿಜೆಪಿಯ ಚಿಹ್ನೆಯನ್ನು ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಪ್ರತಿಕ್ರಿಯಿಸಿದ್ದು, “ಕಮಲವು ದೇಶದ ಸಾಂಸ್ಕೃತಿಕ ಗುರುತಿನ ಭಾಗವಾಗಿದೆ” ಎಂದಿದ್ದಾರೆ.

“ಭಾರತೀಯ ಜನತಾ ಪಕ್ಷವನ್ನು ಪ್ರಚಾರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಲೋಗೋದಲ್ಲಿ ಕಮಲದ  ಚಿತ್ರವನ್ನು ಬಳಸಿದೆ” ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಮಲವು ಹಿಂದುತ್ವ ಪಕ್ಷದ ಚುನಾವಣಾ ಚಿಹ್ನೆಯೂ ಆಗಿದೆ.

“ಸತ್ಯವೆಂದರೆ ಭಾರತ ಸರ್ಕಾರವು 1950ರಲ್ಲಿ ಕಮಲವನ್ನು ರಾಷ್ಟ್ರೀಯ ಹೂವು ಎಂದು ಘೋಷಿಸಿದೆ” ಎಂದು ರಾಜನಾಥ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ. “ಅವರು ಹಾಗೆ ಮಾಡಿದ್ದಾರೆ, ಏಕೆಂದರೆ ಕಮಲವು ನಮ್ಮ ಸಾಂಸ್ಕೃತಿಕ ಗುರುತಿನ ಸಂಕೇತವಾಗಿದೆ” ಎಂದು ಸಮರ್ಥಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿ- 20 ಅಥವಾ 20 ದೇಶಗಳ ಸಮೂಹದ ಅಧ್ಯಕ್ಷ ಸ್ಥಾನವನ್ನು ಅದರ ಸದಸ್ಯರು ಕ್ರಮಬದ್ಧವಾಗಿ ವಹಿಸುವುದು ನಡೆದು ಬಂದಿದೆ. ಪ್ರಸ್ತುತ ಅಧ್ಯಕ್ಷ ಸ್ಥಾನ ಇಂಡೋನೇಷ್ಯಾ ವಹಿಸಿದ್ದು, ಡಿಸೆಂಬರ್ 1 ರಂದು ಭಾರತ ಈ ಸ್ಥಾನವನ್ನು ಅಲಂಕರಿಸುವ ನಿರೀಕ್ಷೆ ಇದೆ.

ನವೆಂಬರ್ 8ರಂದು ಲೋಗೋವನ್ನು ಬಿಡುಗಡೆ ಮಾಡಿದ ನಂತರ ಪ್ರಧಾನ ಮಂತ್ರಿ ಕಚೇರಿಯು ಪತ್ರಿಕಾ ಪ್ರಕಟಣೆ ನೀಡಿತ್ತು. “ಭಾರತದ ರಾಷ್ಟ್ರಧ್ವಜದ ರೋಮಾಂಚಕ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಮತ್ತು ನೀಲಿ ಬಣ್ಣಗಳಿಂದ ಸ್ಫೂರ್ತಿ ಪಡೆಯಲಾಗಿದೆ” ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

“ಇದು (ಲೋಗೋ) ಭೂಮಿಯನ್ನು ಕಮಲದೊಂದಿಗೆ ಜೋಡಿಸುತ್ತದೆ. ಭಾರತದ ರಾಷ್ಟ್ರೀಯ ಹೂವು- ಸವಾಲುಗಳ ನಡುವೆ ಬೆಳೆಯುವುದನ್ನು ಪ್ರತಿಬಿಂಬಿಸುತ್ತದೆ. ಭೂಮಿಯ ಚಿತ್ರವು ಭಾರತದ ಪರಿಸರಪ್ರಜ್ಞೆಯ ಜೀವನ ವಿಧಾನವನ್ನು ಪ್ರತಿಬಿಂಬಿಸುತ್ತದೆ, ಇದು ಪ್ರಕೃತಿಯೊಂದಿಗೆ ಪರಿಪೂರ್ಣ ಸಾಮರಸ್ಯವನ್ನು ಸೂಚಿಸುತ್ತದೆ” ಎಂದು ಕಚೇರಿ ಹೇಳಿತ್ತು.

ನವೆಂಬರ್ 9ರಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಂಗ್ರೆಸ್ ಧ್ವಜವನ್ನು ಭಾರತದ ರಾಷ್ಟ್ರಧ್ವಜ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು” ಎಂದಿದ್ದರು.

“ಈಗ, ಬಿಜೆಪಿಯ ಚುನಾವಣಾ ಚಿಹ್ನೆಯು ಜಿ-20ರ ಭಾರತದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಲಾಂಛನವಾಗಿದೆ! ಆಘಾತಕಾರಿಯಾದರೂ, ಮೋದಿ ಮತ್ತು ಬಿಜೆಪಿ ತಮ್ಮನ್ನು ನಾಚಿಕೆಯಿಲ್ಲದೆ ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ” ಎಂದು ಕುಟುಕಿದ್ದರು.

ಇದಕ್ಕೆ ರಾಜನಾಥ್ ಸಿಂಗ್‌, “ಭಾರತದ ಸಂಸ್ಕೃತಿಯ ಪ್ರತೀಕಗಳ ಸುತ್ತ ವಿವಾದಗಳು ಸೃಷ್ಟಿಯಾಗುತ್ತಿರುವುದು ನೋವಿನ ಸಂಗತಿ” ಎಂದು ಪ್ರತಿಕ್ರಿಯಿಸಿದರು.

ಆರೋಪ ಮಾಡುವುದಕ್ಕೂ ಮಿತಿ ಇದೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. “ಇದು ಯಾವುದೋ ಪಕ್ಷದ ಚುನಾವಣಾ ಚಿಹ್ನೆಯಾಗಿರುವುದರಿಂದ, ನಾವು ಅದನ್ನು ಬಿಟ್ಟುಬಿಡಬೇಕೆ? ಕಮಲವನ್ನು ಭಾರತದ ರಾಷ್ಟ್ರೀಯ ಹೂವು ಎಂದು ಗುರುತಿಸುವುದನ್ನು ರದ್ದುಗೊಳಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರು ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿದ್ದಾರೆ.“ಕೈ ಎಂಬ ಪದದ ಬಳಕೆಯನ್ನು ಸಹ ನಿಲ್ಲಿಸಬೇಕೇ?” ಎಂದು ಕೇಳಿದ್ದಾರೆ.

ಯಾವುದೋ ಪಕ್ಷದ ಚುನಾವಣಾ ಚಿಹ್ನೆ ಸೈಕಲ್ ಆಗಿದ್ದರೆ, ಅದು ಚುನಾವಣಾ ಚಿಹ್ನೆ ಎಂಬ ಕಾರಣಕ್ಕೆ ನಾವು ಸೈಕಲ್ ಮೇಲೆ ಕುಳಿತುಕೊಳ್ಳಬಾರದೇ ಎಂದಿದ್ದಾರೆ.

‘ಈ ರೀತಿಯ ಆರೋಪಗಳು ಮೊದಲೇನಲ್ಲ’

ಸರ್ಕಾರಿ ಯೋಜನೆಗಳಲ್ಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಿಜೆಪಿ ತನ್ನ ಪಕ್ಷವನ್ನು ಪ್ರಚಾರ ಮಾಡಿಕೊಳ್ಳುತ್ತಿದೆ ಎಂಬ ಆರೋಪ ಇದೇ ಮೊದಲೇನೂ ಅಲ್ಲ.

‘ಭಾರತೀಯ ಜನೌಷಧಿ ಪರಿಯೋಜನ’ವನ್ನು ಪಕ್ಷದ ಪ್ರಚಾರಕ್ಕೆ ಬಳಸಿದ್ದು ಟೀಕೆಗೆ ಒಳಗಾಗಿತ್ತು. ಔಷಧಿಯ ಪ್ಯಾಕೆಟ್ ಮೇಲೆ ‘ಭಾಜಪ’ ಎಂಬುದನ್ನು ಕೇಸರಿ ಬಣ್ಣದಲ್ಲಿ ಬಳಸಿದ್ದು ವರದಿಯಾಗಿತ್ತು.

“ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು”- ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಗಿತ್ತು.

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ ಎಂದು ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...