Homeಮುಖಪುಟಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಸಾರ್ವಜನಿಕ ಯೋಜನೆ, ಕಾರ್ಯಕ್ರಮಗಳನ್ನು ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಂಡಿದ್ದು ಇದು ಮೊದಲೇನೂ ಅಲ್ಲ...

- Advertisement -
- Advertisement -

ಭಾರತ ಅಲಂಕರಿಸಲಿರುವ ‘ಜಿ 20- ಅಧ್ಯಕ್ಷ ಸ್ಥಾನ’ದ ಲೋಗೋದಲ್ಲಿ ಬಿಜೆಪಿಯ ಚಿಹ್ನೆಯನ್ನು ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಪ್ರತಿಕ್ರಿಯಿಸಿದ್ದು, “ಕಮಲವು ದೇಶದ ಸಾಂಸ್ಕೃತಿಕ ಗುರುತಿನ ಭಾಗವಾಗಿದೆ” ಎಂದಿದ್ದಾರೆ.

“ಭಾರತೀಯ ಜನತಾ ಪಕ್ಷವನ್ನು ಪ್ರಚಾರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಲೋಗೋದಲ್ಲಿ ಕಮಲದ  ಚಿತ್ರವನ್ನು ಬಳಸಿದೆ” ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಮಲವು ಹಿಂದುತ್ವ ಪಕ್ಷದ ಚುನಾವಣಾ ಚಿಹ್ನೆಯೂ ಆಗಿದೆ.

“ಸತ್ಯವೆಂದರೆ ಭಾರತ ಸರ್ಕಾರವು 1950ರಲ್ಲಿ ಕಮಲವನ್ನು ರಾಷ್ಟ್ರೀಯ ಹೂವು ಎಂದು ಘೋಷಿಸಿದೆ” ಎಂದು ರಾಜನಾಥ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ. “ಅವರು ಹಾಗೆ ಮಾಡಿದ್ದಾರೆ, ಏಕೆಂದರೆ ಕಮಲವು ನಮ್ಮ ಸಾಂಸ್ಕೃತಿಕ ಗುರುತಿನ ಸಂಕೇತವಾಗಿದೆ” ಎಂದು ಸಮರ್ಥಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿ- 20 ಅಥವಾ 20 ದೇಶಗಳ ಸಮೂಹದ ಅಧ್ಯಕ್ಷ ಸ್ಥಾನವನ್ನು ಅದರ ಸದಸ್ಯರು ಕ್ರಮಬದ್ಧವಾಗಿ ವಹಿಸುವುದು ನಡೆದು ಬಂದಿದೆ. ಪ್ರಸ್ತುತ ಅಧ್ಯಕ್ಷ ಸ್ಥಾನ ಇಂಡೋನೇಷ್ಯಾ ವಹಿಸಿದ್ದು, ಡಿಸೆಂಬರ್ 1 ರಂದು ಭಾರತ ಈ ಸ್ಥಾನವನ್ನು ಅಲಂಕರಿಸುವ ನಿರೀಕ್ಷೆ ಇದೆ.

ನವೆಂಬರ್ 8ರಂದು ಲೋಗೋವನ್ನು ಬಿಡುಗಡೆ ಮಾಡಿದ ನಂತರ ಪ್ರಧಾನ ಮಂತ್ರಿ ಕಚೇರಿಯು ಪತ್ರಿಕಾ ಪ್ರಕಟಣೆ ನೀಡಿತ್ತು. “ಭಾರತದ ರಾಷ್ಟ್ರಧ್ವಜದ ರೋಮಾಂಚಕ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಮತ್ತು ನೀಲಿ ಬಣ್ಣಗಳಿಂದ ಸ್ಫೂರ್ತಿ ಪಡೆಯಲಾಗಿದೆ” ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

“ಇದು (ಲೋಗೋ) ಭೂಮಿಯನ್ನು ಕಮಲದೊಂದಿಗೆ ಜೋಡಿಸುತ್ತದೆ. ಭಾರತದ ರಾಷ್ಟ್ರೀಯ ಹೂವು- ಸವಾಲುಗಳ ನಡುವೆ ಬೆಳೆಯುವುದನ್ನು ಪ್ರತಿಬಿಂಬಿಸುತ್ತದೆ. ಭೂಮಿಯ ಚಿತ್ರವು ಭಾರತದ ಪರಿಸರಪ್ರಜ್ಞೆಯ ಜೀವನ ವಿಧಾನವನ್ನು ಪ್ರತಿಬಿಂಬಿಸುತ್ತದೆ, ಇದು ಪ್ರಕೃತಿಯೊಂದಿಗೆ ಪರಿಪೂರ್ಣ ಸಾಮರಸ್ಯವನ್ನು ಸೂಚಿಸುತ್ತದೆ” ಎಂದು ಕಚೇರಿ ಹೇಳಿತ್ತು.

ನವೆಂಬರ್ 9ರಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಂಗ್ರೆಸ್ ಧ್ವಜವನ್ನು ಭಾರತದ ರಾಷ್ಟ್ರಧ್ವಜ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು” ಎಂದಿದ್ದರು.

“ಈಗ, ಬಿಜೆಪಿಯ ಚುನಾವಣಾ ಚಿಹ್ನೆಯು ಜಿ-20ರ ಭಾರತದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಲಾಂಛನವಾಗಿದೆ! ಆಘಾತಕಾರಿಯಾದರೂ, ಮೋದಿ ಮತ್ತು ಬಿಜೆಪಿ ತಮ್ಮನ್ನು ನಾಚಿಕೆಯಿಲ್ಲದೆ ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ” ಎಂದು ಕುಟುಕಿದ್ದರು.

ಇದಕ್ಕೆ ರಾಜನಾಥ್ ಸಿಂಗ್‌, “ಭಾರತದ ಸಂಸ್ಕೃತಿಯ ಪ್ರತೀಕಗಳ ಸುತ್ತ ವಿವಾದಗಳು ಸೃಷ್ಟಿಯಾಗುತ್ತಿರುವುದು ನೋವಿನ ಸಂಗತಿ” ಎಂದು ಪ್ರತಿಕ್ರಿಯಿಸಿದರು.

ಆರೋಪ ಮಾಡುವುದಕ್ಕೂ ಮಿತಿ ಇದೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. “ಇದು ಯಾವುದೋ ಪಕ್ಷದ ಚುನಾವಣಾ ಚಿಹ್ನೆಯಾಗಿರುವುದರಿಂದ, ನಾವು ಅದನ್ನು ಬಿಟ್ಟುಬಿಡಬೇಕೆ? ಕಮಲವನ್ನು ಭಾರತದ ರಾಷ್ಟ್ರೀಯ ಹೂವು ಎಂದು ಗುರುತಿಸುವುದನ್ನು ರದ್ದುಗೊಳಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರು ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿದ್ದಾರೆ.“ಕೈ ಎಂಬ ಪದದ ಬಳಕೆಯನ್ನು ಸಹ ನಿಲ್ಲಿಸಬೇಕೇ?” ಎಂದು ಕೇಳಿದ್ದಾರೆ.

ಯಾವುದೋ ಪಕ್ಷದ ಚುನಾವಣಾ ಚಿಹ್ನೆ ಸೈಕಲ್ ಆಗಿದ್ದರೆ, ಅದು ಚುನಾವಣಾ ಚಿಹ್ನೆ ಎಂಬ ಕಾರಣಕ್ಕೆ ನಾವು ಸೈಕಲ್ ಮೇಲೆ ಕುಳಿತುಕೊಳ್ಳಬಾರದೇ ಎಂದಿದ್ದಾರೆ.

‘ಈ ರೀತಿಯ ಆರೋಪಗಳು ಮೊದಲೇನಲ್ಲ’

ಸರ್ಕಾರಿ ಯೋಜನೆಗಳಲ್ಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಿಜೆಪಿ ತನ್ನ ಪಕ್ಷವನ್ನು ಪ್ರಚಾರ ಮಾಡಿಕೊಳ್ಳುತ್ತಿದೆ ಎಂಬ ಆರೋಪ ಇದೇ ಮೊದಲೇನೂ ಅಲ್ಲ.

‘ಭಾರತೀಯ ಜನೌಷಧಿ ಪರಿಯೋಜನ’ವನ್ನು ಪಕ್ಷದ ಪ್ರಚಾರಕ್ಕೆ ಬಳಸಿದ್ದು ಟೀಕೆಗೆ ಒಳಗಾಗಿತ್ತು. ಔಷಧಿಯ ಪ್ಯಾಕೆಟ್ ಮೇಲೆ ‘ಭಾಜಪ’ ಎಂಬುದನ್ನು ಕೇಸರಿ ಬಣ್ಣದಲ್ಲಿ ಬಳಸಿದ್ದು ವರದಿಯಾಗಿತ್ತು.

“ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು”- ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಗಿತ್ತು.

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ ಎಂದು ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...