Homeಮುಖಪುಟಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಿಂದ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರ ಕುರಿತು ಕೀಳುಮಟ್ಟದ ಟ್ವೀಟ್‌ ಮಾಡಿದ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೀರೊಧವನ್ನು ಎದುರಿಸುತ್ತಿದೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರು ಕಳೆದ ಆರು ತಿಂಗಳಿಂದ ಗೃಹಬಂಧನದಲ್ಲಿದ್ದಾರೆ. ಕಳೆದ ವಾರ ಅವರು ಉದ್ದ ಗಡ್ಡ ಬಿಟ್ಟಿದ್ದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದನ್ನು ಗುರಿಯಾಗಿಸಿಕೊಂಡು ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌‌ನಲ್ಲಿ ಶೇವಿಂಗ್‌ ಕಿಟ್‌ ಕಳಿಸಿಕೊಡುತ್ತೇವೆ ಎಂದು ಕೀಳು ಮಟ್ಟದ ಟ್ರೋಲ್‌ ಮಾಡಿದೆ.

“ಆತ್ಮೀಯ ಓಮರ್‌ ಅಬ್ದುಲ್ಲಾ ನಿಮ್ಮ ಭ್ರಷ್ಟ ಸ್ನೇಹಿತರಲ್ಲಿ ಹೆಚ್ಚಿನವರು ಸ್ವತಂತ್ರವಾಗಿ ಹೊರಗಿನ ಜೀವನವನ್ನು ಆನಂದಿಸುತ್ತಿರುವಾಗ ನಿಮ್ಮನ್ನು ಈ ರೀತಿ ನೋಡುವುದು ತುಂಬಾ ಬೇಸರ ತರಿಸಿದೆ. ಹಾಗಾಗಿ ನಮ್ಮ ಪ್ರಾಮಾಣಿಕ ಕೊಡುಗೆಯನ್ನು ದಯೆಯಿಂದ ಸ್ವೀಕರಿಸಿ, ಯಾವುದೇ ಸಹಾಯದ ಸಂದರ್ಭದಲ್ಲಿ ಈ ವಿಷಯದಲ್ಲಿ ಹೆಚ್ಚಿನ ಸಹಾಯಕ್ಕಾಗಿ ನಿಮ್ಮ ಕಾಂಗ್ರೆಸ್‌ ಪಕ್ಷವನ್ನು ಮುಕ್ತವಾಗಿ ಸಂಪರ್ಕಿಸಿ ಎಂದು ಟ್ರೋಲ್‌ ಮಾಡಲಾಗಿದೆ.”

ಇದಕ್ಕೆ ಪತ್ರಕರ್ತೆ ನಿಧಿ ರಾಜ್ದನ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಇತರ ನಾಯಕರನ್ನು ಸುಮಾರು 6 ತಿಂಗಳುಗಳ ಕಾಲ ಬಂಧನದಲ್ಲಿಟ್ಟಿರುವುದನ್ನು ಬೆಳಕಿಗೆ ತರುವ ಅವರ ಪ್ರಯತ್ನಕ್ಕಾಗಿ ಆ ಫೋಟೊ ಹಾಕಲಾಗಿತ್ತು. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಆದರೆ ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಹ್ಯಾಂಡಲ್ ಈ ರೀತಿ ಟ್ವೀಟ್‌ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.

ಯಾರಾದರೂ ಇಷ್ಟು ಅಸೂಕ್ಷ್ಮ ಮತ್ತು ದ್ವೇಷಪೂರಿತರಾಗಲು ಹೇಗೆ ಸಾಧ್ಯ? ಇದು ನಮ್ಮ ದೇಶದ ಅತಿದೊಡ್ಡ ರಾಷ್ಟ್ರೀಯ ರಾಜಕೀಯ ಪಕ್ಷವು ತಮಗೆ ಆಗದವರ ಬಗ್ಗೆ ಅಪಪ್ರಚಾರ ಮಾಡಲು ಯಾವ ಮಟ್ಟಕ್ಕಿಳಿದಿದೆ ಎಂಬುದನ್ನು ನೋಡಿ ದಿಗಿಲುಗೊಂಡೆ! ನಾಚಿಕೆಯಾಗಬೇಕು ಎಂದು ಮತ್ತೊಬ್ಬ ಪತ್ರಕರ್ತ ರಿಷಿ ಸೂರಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊನ್ನೆ ಕಾಂಗ್ರೆಸ್‌ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತದ ಸಂವಿಧಾನವನ್ನು ಗಿಫ್ಟ್‌ ಮಾಡಿತ್ತು. ಆತ್ಮೀಯ ಪ್ರಧಾನಿಗಳೇ, ಸಂವಿಧಾನವು ಶೀಘ್ರದಲ್ಲೇ ನಿಮ್ಮನ್ನು ತಲುಪುತ್ತಿದೆ. ದೇಶವನ್ನು ವಿಭಜಿಸುತ್ತಿರುವ ನಿಮಗೆ ಸಮಯ ಸಿಕ್ಕಾಗ, ದಯವಿಟ್ಟು ಅದನ್ನು ಓದಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು. ಅದಕ್ಕೆ ಕೋಪಗೊಂಡು ತಮಿಳುನಾಡು ಬಿಜೆಪಿ ಈ ಟ್ರೋಲ್‌ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...