Homeಮುಖಪುಟಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಿಂದ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರ ಕುರಿತು ಕೀಳುಮಟ್ಟದ ಟ್ವೀಟ್‌ ಮಾಡಿದ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೀರೊಧವನ್ನು ಎದುರಿಸುತ್ತಿದೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರು ಕಳೆದ ಆರು ತಿಂಗಳಿಂದ ಗೃಹಬಂಧನದಲ್ಲಿದ್ದಾರೆ. ಕಳೆದ ವಾರ ಅವರು ಉದ್ದ ಗಡ್ಡ ಬಿಟ್ಟಿದ್ದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದನ್ನು ಗುರಿಯಾಗಿಸಿಕೊಂಡು ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌‌ನಲ್ಲಿ ಶೇವಿಂಗ್‌ ಕಿಟ್‌ ಕಳಿಸಿಕೊಡುತ್ತೇವೆ ಎಂದು ಕೀಳು ಮಟ್ಟದ ಟ್ರೋಲ್‌ ಮಾಡಿದೆ.

“ಆತ್ಮೀಯ ಓಮರ್‌ ಅಬ್ದುಲ್ಲಾ ನಿಮ್ಮ ಭ್ರಷ್ಟ ಸ್ನೇಹಿತರಲ್ಲಿ ಹೆಚ್ಚಿನವರು ಸ್ವತಂತ್ರವಾಗಿ ಹೊರಗಿನ ಜೀವನವನ್ನು ಆನಂದಿಸುತ್ತಿರುವಾಗ ನಿಮ್ಮನ್ನು ಈ ರೀತಿ ನೋಡುವುದು ತುಂಬಾ ಬೇಸರ ತರಿಸಿದೆ. ಹಾಗಾಗಿ ನಮ್ಮ ಪ್ರಾಮಾಣಿಕ ಕೊಡುಗೆಯನ್ನು ದಯೆಯಿಂದ ಸ್ವೀಕರಿಸಿ, ಯಾವುದೇ ಸಹಾಯದ ಸಂದರ್ಭದಲ್ಲಿ ಈ ವಿಷಯದಲ್ಲಿ ಹೆಚ್ಚಿನ ಸಹಾಯಕ್ಕಾಗಿ ನಿಮ್ಮ ಕಾಂಗ್ರೆಸ್‌ ಪಕ್ಷವನ್ನು ಮುಕ್ತವಾಗಿ ಸಂಪರ್ಕಿಸಿ ಎಂದು ಟ್ರೋಲ್‌ ಮಾಡಲಾಗಿದೆ.”

ಇದಕ್ಕೆ ಪತ್ರಕರ್ತೆ ನಿಧಿ ರಾಜ್ದನ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಇತರ ನಾಯಕರನ್ನು ಸುಮಾರು 6 ತಿಂಗಳುಗಳ ಕಾಲ ಬಂಧನದಲ್ಲಿಟ್ಟಿರುವುದನ್ನು ಬೆಳಕಿಗೆ ತರುವ ಅವರ ಪ್ರಯತ್ನಕ್ಕಾಗಿ ಆ ಫೋಟೊ ಹಾಕಲಾಗಿತ್ತು. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಆದರೆ ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಹ್ಯಾಂಡಲ್ ಈ ರೀತಿ ಟ್ವೀಟ್‌ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.

ಯಾರಾದರೂ ಇಷ್ಟು ಅಸೂಕ್ಷ್ಮ ಮತ್ತು ದ್ವೇಷಪೂರಿತರಾಗಲು ಹೇಗೆ ಸಾಧ್ಯ? ಇದು ನಮ್ಮ ದೇಶದ ಅತಿದೊಡ್ಡ ರಾಷ್ಟ್ರೀಯ ರಾಜಕೀಯ ಪಕ್ಷವು ತಮಗೆ ಆಗದವರ ಬಗ್ಗೆ ಅಪಪ್ರಚಾರ ಮಾಡಲು ಯಾವ ಮಟ್ಟಕ್ಕಿಳಿದಿದೆ ಎಂಬುದನ್ನು ನೋಡಿ ದಿಗಿಲುಗೊಂಡೆ! ನಾಚಿಕೆಯಾಗಬೇಕು ಎಂದು ಮತ್ತೊಬ್ಬ ಪತ್ರಕರ್ತ ರಿಷಿ ಸೂರಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊನ್ನೆ ಕಾಂಗ್ರೆಸ್‌ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತದ ಸಂವಿಧಾನವನ್ನು ಗಿಫ್ಟ್‌ ಮಾಡಿತ್ತು. ಆತ್ಮೀಯ ಪ್ರಧಾನಿಗಳೇ, ಸಂವಿಧಾನವು ಶೀಘ್ರದಲ್ಲೇ ನಿಮ್ಮನ್ನು ತಲುಪುತ್ತಿದೆ. ದೇಶವನ್ನು ವಿಭಜಿಸುತ್ತಿರುವ ನಿಮಗೆ ಸಮಯ ಸಿಕ್ಕಾಗ, ದಯವಿಟ್ಟು ಅದನ್ನು ಓದಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು. ಅದಕ್ಕೆ ಕೋಪಗೊಂಡು ತಮಿಳುನಾಡು ಬಿಜೆಪಿ ಈ ಟ್ರೋಲ್‌ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...