Homeಮುಖಪುಟಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಿಂದ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರ ಕುರಿತು ಕೀಳುಮಟ್ಟದ ಟ್ವೀಟ್‌ ಮಾಡಿದ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೀರೊಧವನ್ನು ಎದುರಿಸುತ್ತಿದೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರು ಕಳೆದ ಆರು ತಿಂಗಳಿಂದ ಗೃಹಬಂಧನದಲ್ಲಿದ್ದಾರೆ. ಕಳೆದ ವಾರ ಅವರು ಉದ್ದ ಗಡ್ಡ ಬಿಟ್ಟಿದ್ದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದನ್ನು ಗುರಿಯಾಗಿಸಿಕೊಂಡು ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌‌ನಲ್ಲಿ ಶೇವಿಂಗ್‌ ಕಿಟ್‌ ಕಳಿಸಿಕೊಡುತ್ತೇವೆ ಎಂದು ಕೀಳು ಮಟ್ಟದ ಟ್ರೋಲ್‌ ಮಾಡಿದೆ.

“ಆತ್ಮೀಯ ಓಮರ್‌ ಅಬ್ದುಲ್ಲಾ ನಿಮ್ಮ ಭ್ರಷ್ಟ ಸ್ನೇಹಿತರಲ್ಲಿ ಹೆಚ್ಚಿನವರು ಸ್ವತಂತ್ರವಾಗಿ ಹೊರಗಿನ ಜೀವನವನ್ನು ಆನಂದಿಸುತ್ತಿರುವಾಗ ನಿಮ್ಮನ್ನು ಈ ರೀತಿ ನೋಡುವುದು ತುಂಬಾ ಬೇಸರ ತರಿಸಿದೆ. ಹಾಗಾಗಿ ನಮ್ಮ ಪ್ರಾಮಾಣಿಕ ಕೊಡುಗೆಯನ್ನು ದಯೆಯಿಂದ ಸ್ವೀಕರಿಸಿ, ಯಾವುದೇ ಸಹಾಯದ ಸಂದರ್ಭದಲ್ಲಿ ಈ ವಿಷಯದಲ್ಲಿ ಹೆಚ್ಚಿನ ಸಹಾಯಕ್ಕಾಗಿ ನಿಮ್ಮ ಕಾಂಗ್ರೆಸ್‌ ಪಕ್ಷವನ್ನು ಮುಕ್ತವಾಗಿ ಸಂಪರ್ಕಿಸಿ ಎಂದು ಟ್ರೋಲ್‌ ಮಾಡಲಾಗಿದೆ.”

ಇದಕ್ಕೆ ಪತ್ರಕರ್ತೆ ನಿಧಿ ರಾಜ್ದನ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಇತರ ನಾಯಕರನ್ನು ಸುಮಾರು 6 ತಿಂಗಳುಗಳ ಕಾಲ ಬಂಧನದಲ್ಲಿಟ್ಟಿರುವುದನ್ನು ಬೆಳಕಿಗೆ ತರುವ ಅವರ ಪ್ರಯತ್ನಕ್ಕಾಗಿ ಆ ಫೋಟೊ ಹಾಕಲಾಗಿತ್ತು. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಆದರೆ ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಹ್ಯಾಂಡಲ್ ಈ ರೀತಿ ಟ್ವೀಟ್‌ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.

ಯಾರಾದರೂ ಇಷ್ಟು ಅಸೂಕ್ಷ್ಮ ಮತ್ತು ದ್ವೇಷಪೂರಿತರಾಗಲು ಹೇಗೆ ಸಾಧ್ಯ? ಇದು ನಮ್ಮ ದೇಶದ ಅತಿದೊಡ್ಡ ರಾಷ್ಟ್ರೀಯ ರಾಜಕೀಯ ಪಕ್ಷವು ತಮಗೆ ಆಗದವರ ಬಗ್ಗೆ ಅಪಪ್ರಚಾರ ಮಾಡಲು ಯಾವ ಮಟ್ಟಕ್ಕಿಳಿದಿದೆ ಎಂಬುದನ್ನು ನೋಡಿ ದಿಗಿಲುಗೊಂಡೆ! ನಾಚಿಕೆಯಾಗಬೇಕು ಎಂದು ಮತ್ತೊಬ್ಬ ಪತ್ರಕರ್ತ ರಿಷಿ ಸೂರಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊನ್ನೆ ಕಾಂಗ್ರೆಸ್‌ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತದ ಸಂವಿಧಾನವನ್ನು ಗಿಫ್ಟ್‌ ಮಾಡಿತ್ತು. ಆತ್ಮೀಯ ಪ್ರಧಾನಿಗಳೇ, ಸಂವಿಧಾನವು ಶೀಘ್ರದಲ್ಲೇ ನಿಮ್ಮನ್ನು ತಲುಪುತ್ತಿದೆ. ದೇಶವನ್ನು ವಿಭಜಿಸುತ್ತಿರುವ ನಿಮಗೆ ಸಮಯ ಸಿಕ್ಕಾಗ, ದಯವಿಟ್ಟು ಅದನ್ನು ಓದಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು. ಅದಕ್ಕೆ ಕೋಪಗೊಂಡು ತಮಿಳುನಾಡು ಬಿಜೆಪಿ ಈ ಟ್ರೋಲ್‌ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...