Homeಮುಖಪುಟಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಿಂದ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರ ಕುರಿತು ಕೀಳುಮಟ್ಟದ ಟ್ವೀಟ್‌ ಮಾಡಿದ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೀರೊಧವನ್ನು ಎದುರಿಸುತ್ತಿದೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರು ಕಳೆದ ಆರು ತಿಂಗಳಿಂದ ಗೃಹಬಂಧನದಲ್ಲಿದ್ದಾರೆ. ಕಳೆದ ವಾರ ಅವರು ಉದ್ದ ಗಡ್ಡ ಬಿಟ್ಟಿದ್ದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದನ್ನು ಗುರಿಯಾಗಿಸಿಕೊಂಡು ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌‌ನಲ್ಲಿ ಶೇವಿಂಗ್‌ ಕಿಟ್‌ ಕಳಿಸಿಕೊಡುತ್ತೇವೆ ಎಂದು ಕೀಳು ಮಟ್ಟದ ಟ್ರೋಲ್‌ ಮಾಡಿದೆ.

“ಆತ್ಮೀಯ ಓಮರ್‌ ಅಬ್ದುಲ್ಲಾ ನಿಮ್ಮ ಭ್ರಷ್ಟ ಸ್ನೇಹಿತರಲ್ಲಿ ಹೆಚ್ಚಿನವರು ಸ್ವತಂತ್ರವಾಗಿ ಹೊರಗಿನ ಜೀವನವನ್ನು ಆನಂದಿಸುತ್ತಿರುವಾಗ ನಿಮ್ಮನ್ನು ಈ ರೀತಿ ನೋಡುವುದು ತುಂಬಾ ಬೇಸರ ತರಿಸಿದೆ. ಹಾಗಾಗಿ ನಮ್ಮ ಪ್ರಾಮಾಣಿಕ ಕೊಡುಗೆಯನ್ನು ದಯೆಯಿಂದ ಸ್ವೀಕರಿಸಿ, ಯಾವುದೇ ಸಹಾಯದ ಸಂದರ್ಭದಲ್ಲಿ ಈ ವಿಷಯದಲ್ಲಿ ಹೆಚ್ಚಿನ ಸಹಾಯಕ್ಕಾಗಿ ನಿಮ್ಮ ಕಾಂಗ್ರೆಸ್‌ ಪಕ್ಷವನ್ನು ಮುಕ್ತವಾಗಿ ಸಂಪರ್ಕಿಸಿ ಎಂದು ಟ್ರೋಲ್‌ ಮಾಡಲಾಗಿದೆ.”

ಇದಕ್ಕೆ ಪತ್ರಕರ್ತೆ ನಿಧಿ ರಾಜ್ದನ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಇತರ ನಾಯಕರನ್ನು ಸುಮಾರು 6 ತಿಂಗಳುಗಳ ಕಾಲ ಬಂಧನದಲ್ಲಿಟ್ಟಿರುವುದನ್ನು ಬೆಳಕಿಗೆ ತರುವ ಅವರ ಪ್ರಯತ್ನಕ್ಕಾಗಿ ಆ ಫೋಟೊ ಹಾಕಲಾಗಿತ್ತು. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಆದರೆ ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಹ್ಯಾಂಡಲ್ ಈ ರೀತಿ ಟ್ವೀಟ್‌ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.

ಯಾರಾದರೂ ಇಷ್ಟು ಅಸೂಕ್ಷ್ಮ ಮತ್ತು ದ್ವೇಷಪೂರಿತರಾಗಲು ಹೇಗೆ ಸಾಧ್ಯ? ಇದು ನಮ್ಮ ದೇಶದ ಅತಿದೊಡ್ಡ ರಾಷ್ಟ್ರೀಯ ರಾಜಕೀಯ ಪಕ್ಷವು ತಮಗೆ ಆಗದವರ ಬಗ್ಗೆ ಅಪಪ್ರಚಾರ ಮಾಡಲು ಯಾವ ಮಟ್ಟಕ್ಕಿಳಿದಿದೆ ಎಂಬುದನ್ನು ನೋಡಿ ದಿಗಿಲುಗೊಂಡೆ! ನಾಚಿಕೆಯಾಗಬೇಕು ಎಂದು ಮತ್ತೊಬ್ಬ ಪತ್ರಕರ್ತ ರಿಷಿ ಸೂರಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊನ್ನೆ ಕಾಂಗ್ರೆಸ್‌ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತದ ಸಂವಿಧಾನವನ್ನು ಗಿಫ್ಟ್‌ ಮಾಡಿತ್ತು. ಆತ್ಮೀಯ ಪ್ರಧಾನಿಗಳೇ, ಸಂವಿಧಾನವು ಶೀಘ್ರದಲ್ಲೇ ನಿಮ್ಮನ್ನು ತಲುಪುತ್ತಿದೆ. ದೇಶವನ್ನು ವಿಭಜಿಸುತ್ತಿರುವ ನಿಮಗೆ ಸಮಯ ಸಿಕ್ಕಾಗ, ದಯವಿಟ್ಟು ಅದನ್ನು ಓದಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು. ಅದಕ್ಕೆ ಕೋಪಗೊಂಡು ತಮಿಳುನಾಡು ಬಿಜೆಪಿ ಈ ಟ್ರೋಲ್‌ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...