Homeಮುಖಪುಟಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಿಂದ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರ ಕುರಿತು ಕೀಳುಮಟ್ಟದ ಟ್ವೀಟ್‌ ಮಾಡಿದ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೀರೊಧವನ್ನು ಎದುರಿಸುತ್ತಿದೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾರವರು ಕಳೆದ ಆರು ತಿಂಗಳಿಂದ ಗೃಹಬಂಧನದಲ್ಲಿದ್ದಾರೆ. ಕಳೆದ ವಾರ ಅವರು ಉದ್ದ ಗಡ್ಡ ಬಿಟ್ಟಿದ್ದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದನ್ನು ಗುರಿಯಾಗಿಸಿಕೊಂಡು ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌‌ನಲ್ಲಿ ಶೇವಿಂಗ್‌ ಕಿಟ್‌ ಕಳಿಸಿಕೊಡುತ್ತೇವೆ ಎಂದು ಕೀಳು ಮಟ್ಟದ ಟ್ರೋಲ್‌ ಮಾಡಿದೆ.

“ಆತ್ಮೀಯ ಓಮರ್‌ ಅಬ್ದುಲ್ಲಾ ನಿಮ್ಮ ಭ್ರಷ್ಟ ಸ್ನೇಹಿತರಲ್ಲಿ ಹೆಚ್ಚಿನವರು ಸ್ವತಂತ್ರವಾಗಿ ಹೊರಗಿನ ಜೀವನವನ್ನು ಆನಂದಿಸುತ್ತಿರುವಾಗ ನಿಮ್ಮನ್ನು ಈ ರೀತಿ ನೋಡುವುದು ತುಂಬಾ ಬೇಸರ ತರಿಸಿದೆ. ಹಾಗಾಗಿ ನಮ್ಮ ಪ್ರಾಮಾಣಿಕ ಕೊಡುಗೆಯನ್ನು ದಯೆಯಿಂದ ಸ್ವೀಕರಿಸಿ, ಯಾವುದೇ ಸಹಾಯದ ಸಂದರ್ಭದಲ್ಲಿ ಈ ವಿಷಯದಲ್ಲಿ ಹೆಚ್ಚಿನ ಸಹಾಯಕ್ಕಾಗಿ ನಿಮ್ಮ ಕಾಂಗ್ರೆಸ್‌ ಪಕ್ಷವನ್ನು ಮುಕ್ತವಾಗಿ ಸಂಪರ್ಕಿಸಿ ಎಂದು ಟ್ರೋಲ್‌ ಮಾಡಲಾಗಿದೆ.”

ಇದಕ್ಕೆ ಪತ್ರಕರ್ತೆ ನಿಧಿ ರಾಜ್ದನ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಇತರ ನಾಯಕರನ್ನು ಸುಮಾರು 6 ತಿಂಗಳುಗಳ ಕಾಲ ಬಂಧನದಲ್ಲಿಟ್ಟಿರುವುದನ್ನು ಬೆಳಕಿಗೆ ತರುವ ಅವರ ಪ್ರಯತ್ನಕ್ಕಾಗಿ ಆ ಫೋಟೊ ಹಾಕಲಾಗಿತ್ತು. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಆದರೆ ಬಿಜೆಪಿಯ ತಮಿಳುನಾಡು ಘಟಕದ ಅಧಿಕೃತ ಹ್ಯಾಂಡಲ್ ಈ ರೀತಿ ಟ್ವೀಟ್‌ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.

ಯಾರಾದರೂ ಇಷ್ಟು ಅಸೂಕ್ಷ್ಮ ಮತ್ತು ದ್ವೇಷಪೂರಿತರಾಗಲು ಹೇಗೆ ಸಾಧ್ಯ? ಇದು ನಮ್ಮ ದೇಶದ ಅತಿದೊಡ್ಡ ರಾಷ್ಟ್ರೀಯ ರಾಜಕೀಯ ಪಕ್ಷವು ತಮಗೆ ಆಗದವರ ಬಗ್ಗೆ ಅಪಪ್ರಚಾರ ಮಾಡಲು ಯಾವ ಮಟ್ಟಕ್ಕಿಳಿದಿದೆ ಎಂಬುದನ್ನು ನೋಡಿ ದಿಗಿಲುಗೊಂಡೆ! ನಾಚಿಕೆಯಾಗಬೇಕು ಎಂದು ಮತ್ತೊಬ್ಬ ಪತ್ರಕರ್ತ ರಿಷಿ ಸೂರಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಟ್ರೋಲ್‌ ಮಾಡುವವರನ್ನು ಪ್ರಧಾನಿಯವರ ಫಾಲೋ ಮಾಡುತ್ತಿರುವಾಗ ಬಿಜೆಪಿಯ ಟ್ರೋಲ್‌ ಬಗ್ಗೆ ನೀರಿಕ್ಷಿಸುವುದೇನಿದೆ ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊನ್ನೆ ಕಾಂಗ್ರೆಸ್‌ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತದ ಸಂವಿಧಾನವನ್ನು ಗಿಫ್ಟ್‌ ಮಾಡಿತ್ತು. ಆತ್ಮೀಯ ಪ್ರಧಾನಿಗಳೇ, ಸಂವಿಧಾನವು ಶೀಘ್ರದಲ್ಲೇ ನಿಮ್ಮನ್ನು ತಲುಪುತ್ತಿದೆ. ದೇಶವನ್ನು ವಿಭಜಿಸುತ್ತಿರುವ ನಿಮಗೆ ಸಮಯ ಸಿಕ್ಕಾಗ, ದಯವಿಟ್ಟು ಅದನ್ನು ಓದಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು. ಅದಕ್ಕೆ ಕೋಪಗೊಂಡು ತಮಿಳುನಾಡು ಬಿಜೆಪಿ ಈ ಟ್ರೋಲ್‌ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...