Homeಕರ್ನಾಟಕಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ದೇಶದಲ್ಲಿರುವ ಎಲ್ಲ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರಿಗೆ ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಅವರು ಸತ್ಯದ ತಲೆ ಮೇಲೆ ಹೊಡೆದಂತೆ ಬುರುಡೆ ಬಿಡ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿಯವರು. ನೆಹರು-ಇಂದಿರಾ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಕಾಂಗ್ರೆಸ್ ಜನರ ಪ್ರಗತಿಗಾಗಿ ಹುಟ್ಟಿದ ಹೋರಾಟದ ಸಿದ್ಧಾಂತ ಮತ್ತು ಚಳವಳಿ; ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ’ ಎಂದರು.

‘ಹಿಂದೂ ಬೇರೆ – ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ’ ಎಂದು ವಾಗ್ದಾಳಿ ನಡೆಸಿದರು.

‘ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬೆಲ್ಲ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ, ಪ್ರಧಾನಿ ಆಗುತ್ತಾರೆ ಎಂಬ ಭರವಸೆ ನನಗಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಮಹಾತ್ಮ ಗಾಂಧಿಯವರು ಬ್ರಿಟಿಷರನ್ನು ಅಹಿಂಸೆಯ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು’ ಎಂದರು.

‘ಬಿಜೆಪಿ, ಜನ ಸಂಘ, ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ ಆರ್‌ಎಸ್‌ಎಸ್ ಹುಟ್ಟಿತ್ತು. ಆದರೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಂಗಿತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು’ ಎಂದು ಹೇಳಿದರು.

‘ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ’ ಎಂದು ಅವರು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ಆಹ್ವಾನ: ‘ಕೈ’ ನಾಯಕರ ಭಿನ್ನ ಹೇಳಿಕೆ, ಕೇರಳ ಕಾಂಗ್ರೆಸ್‌ನಲ್ಲಿ ಗೊಂದಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...