Homeಕರ್ನಾಟಕಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ದೇಶದಲ್ಲಿರುವ ಎಲ್ಲ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರಿಗೆ ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಅವರು ಸತ್ಯದ ತಲೆ ಮೇಲೆ ಹೊಡೆದಂತೆ ಬುರುಡೆ ಬಿಡ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿಯವರು. ನೆಹರು-ಇಂದಿರಾ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಕಾಂಗ್ರೆಸ್ ಜನರ ಪ್ರಗತಿಗಾಗಿ ಹುಟ್ಟಿದ ಹೋರಾಟದ ಸಿದ್ಧಾಂತ ಮತ್ತು ಚಳವಳಿ; ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ’ ಎಂದರು.

‘ಹಿಂದೂ ಬೇರೆ – ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ’ ಎಂದು ವಾಗ್ದಾಳಿ ನಡೆಸಿದರು.

‘ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬೆಲ್ಲ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ, ಪ್ರಧಾನಿ ಆಗುತ್ತಾರೆ ಎಂಬ ಭರವಸೆ ನನಗಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಮಹಾತ್ಮ ಗಾಂಧಿಯವರು ಬ್ರಿಟಿಷರನ್ನು ಅಹಿಂಸೆಯ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು’ ಎಂದರು.

‘ಬಿಜೆಪಿ, ಜನ ಸಂಘ, ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ ಆರ್‌ಎಸ್‌ಎಸ್ ಹುಟ್ಟಿತ್ತು. ಆದರೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಂಗಿತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು’ ಎಂದು ಹೇಳಿದರು.

‘ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ’ ಎಂದು ಅವರು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ಆಹ್ವಾನ: ‘ಕೈ’ ನಾಯಕರ ಭಿನ್ನ ಹೇಳಿಕೆ, ಕೇರಳ ಕಾಂಗ್ರೆಸ್‌ನಲ್ಲಿ ಗೊಂದಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...