ತಮ್ಮ ಪಕ್ಷವನ್ನು ನಗರ ನಕ್ಸಲ್ ಪಕ್ಷ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯನ್ನು ‘ಭಯೋತ್ಪಾದಕ ಪಕ್ಷ’ ಎಂದು ಶನಿವಾರ ಆರೋಪಿಸಿದ್ದಾರೆ. ದೇಶದಾದ್ಯಂತ ದಲಿತ, ಹಿಂದುಳಿದ ವರ್ಗ ಮತ್ತು ಬುಡಕಟ್ಟು ಸಮುದಾಯಗಳ ಮೇಲಿನ ದೌರ್ಜನ್ಯಗಳನ್ನು ಬಿಜೆಪಿ ಬೆಂಬಲಿಸುತ್ತದೆ ಅವರು ಆರೋಪಿಸಿದ್ದಾರೆ. ಬಿಜೆಪಿ ಭಯೋತ್ಪಾದಕ ಪಕ್ಷ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕಲಬುರ್ಗಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ಪ್ರಗತಿಪರ ಚಿಂತಕರನ್ನು “ನಗರ ನಕ್ಸಲರು” ಎಂದು ಕರೆದು ಅವಮಾನಿಸುವ ಅಭ್ಯಾಸವನ್ನು ಹೊಂದಿದ್ದು, “ದೇಶದಾದ್ಯಂತ ದಲಿತರು ಮತ್ತು ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಸಮುದಾಯಗಳ ಮೇಲಿನ ದೌರ್ಜನ್ಯಗಳು ಹೆಚ್ಚಿವೆ. ಬಿಜೆಪಿ ಇಂತಹ ಪ್ರಕರಣಗಳನ್ನು ಬೆಂಬಲಿಸುತ್ತದೆ, ಆದರೆ ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುತ್ತದೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಬಿಜೆಪಿ ನೇತೃತ್ವದ ಎನ್ಡಿಎ ದೇಶದಲ್ಲಿ ಆಡಳಿತ ನಡೆಸುತ್ತಿರುವುದರಿಂದ ವಿವಿಧ ಅಪರಾಧಗಳಿಗೆ ಇತರ ಪಕ್ಷಗಳನ್ನು ದೂಷಿಸುವ ಬದಲು, ಎಸ್ಸಿ, ಎಸ್ಟಿ ಮತ್ತು ಬಿಸಿಗಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮೋದಿ ಕ್ರಮಕೈಗೊಳ್ಳಬೇಕು. ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಮೋದಿ ಕ್ರಮ ಕೈಗೊಳ್ಳಲಿ ಎಂದು ಖರ್ಗೆ ಹೇಳಿದ್ದಾರೆ.
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಒಗ್ಗಟ್ಟಿನ ಕರೆಗೆ ಪ್ರತಿಕ್ರಿಯಿಸಿದ ಖರ್ಗೆ, “ಭಾಗವತ್ ಹೇಳುವುದು ಒಂದು, ಆದರೆ ಮಾಡುವುದು ಇನ್ನೊಂದು. ಎಲ್ಲಾ ಭಾರತೀಯರನ್ನು ಒಗ್ಗೂಡಿಸಲು ನಿಜವಾಗಿಯೂ ಬಯಸಿದರೆ ಭಾಗವತ್ ಅವರ ಸಂಘಟನೆ ಬಿಜೆಪಿಯನ್ನು ಏಕೆ ಬೆಂಬಲಿಸುತ್ತಿದೆ?” ಎಂದು ಪ್ರಶ್ನಿಸಿದರು. ಬಿಜೆಪಿ ಭಯೋತ್ಪಾದಕ ಪಕ್ಷ
ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ
ಇತ್ತೀಚಿನ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಕ್ಸಿಟ್ ಪೂಲ್ಗಳು ಕಾಂಗ್ರೆಸ್ ಪಕ್ಷವು ಆರಾಮವಾಗಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿತ್ತು. ಹರಿಯಾಣದಲ್ಲಿ ಸೋಲನ್ನು ಒಪ್ಪಿಕೊಳ್ಳಲು ಬಿಜೆಪಿ ನಾಯಕರು ಮತ್ತು ಅವರ ಮೈತ್ರಿಕೂಟದ ಪಾಲುದಾರರೂ ಸಿದ್ಧರಾಗಿದ್ದರು ಎಂದು ಖರ್ಗೆ ಹೇಳಿದ್ದಾರೆ.
“ಅಲ್ಲಿ ಏನು ಪವಾಡ ನಡೆದಿದೆಯೋ ಗೊತ್ತಿಲ್ಲ. ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಪಕ್ಷ ಕಾರಣಗಳನ್ನು ವಿಶ್ಲೇಷಿಸುತ್ತಿದೆ. ನಾನು ಹರಿಯಾಣದಾದ್ಯಂತ ಬೂತ್ವಾರು ವರದಿ ಕೇಳಿದ್ದೇನೆ. ವರದಿ ಬಂದ ನಂತರವಷ್ಟೇ ನಾನು ಪ್ರತಿಕ್ರಿಯಿಸುತ್ತೇನೆ” ಎಂದು ಖರ್ಗೆ ತಿಳಿಸಿದ್ದಾರೆ.
ಅದಾಗ್ಯೂ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ದಲಿತ ಸಿಎಂ ಬೇಡಿಕೆ ಕುರಿತು ಪ್ರತಿಕ್ರಿಯಿಸಲು ಖರ್ಗೆ ನಿರಾಕರಿಸಿದ್ದಾರೆ.
ವಿಡಿಯೊ ನೋಡಿ: ಬೆಂಗಳೂರಿನ ಕೆಆರ್ ಮಾರ್ಕೆಟ್ ಮೇಲ್ಸೇತುವೆಯಿಂದ ಅಪರಿಚಿತ ವ್ಯಕ್ತಿಯೊಬ್ಬರು ನೋಟುಗಳನ್ನು ಎಸೆಯುತ್ತಿರುವ ವಿಡಿಯೋ ವೈರಲ್


