Homeಮುಖಪುಟಬಿಜೆಪಿ ಭಯೋತ್ಪಾದಕ ಪಕ್ಷ; ದಲಿತರ ಮೇಲಿನ ದಾಳಿಗೆ ಬೆಂಬಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಭಯೋತ್ಪಾದಕ ಪಕ್ಷ; ದಲಿತರ ಮೇಲಿನ ದಾಳಿಗೆ ಬೆಂಬಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ತಮ್ಮ ಪಕ್ಷವನ್ನು ನಗರ ನಕ್ಸಲ್ ಪಕ್ಷ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯನ್ನು ‘ಭಯೋತ್ಪಾದಕ ಪಕ್ಷ’ ಎಂದು ಶನಿವಾರ ಆರೋಪಿಸಿದ್ದಾರೆ. ದೇಶದಾದ್ಯಂತ ದಲಿತ, ಹಿಂದುಳಿದ ವರ್ಗ ಮತ್ತು ಬುಡಕಟ್ಟು ಸಮುದಾಯಗಳ ಮೇಲಿನ ದೌರ್ಜನ್ಯಗಳನ್ನು ಬಿಜೆಪಿ ಬೆಂಬಲಿಸುತ್ತದೆ ಅವರು ಆರೋಪಿಸಿದ್ದಾರೆ. ಬಿಜೆಪಿ ಭಯೋತ್ಪಾದಕ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಲಬುರ್ಗಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ಪ್ರಗತಿಪರ ಚಿಂತಕರನ್ನು “ನಗರ ನಕ್ಸಲರು” ಎಂದು ಕರೆದು ಅವಮಾನಿಸುವ ಅಭ್ಯಾಸವನ್ನು ಹೊಂದಿದ್ದು, “ದೇಶದಾದ್ಯಂತ ದಲಿತರು ಮತ್ತು ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಸಮುದಾಯಗಳ ಮೇಲಿನ ದೌರ್ಜನ್ಯಗಳು ಹೆಚ್ಚಿವೆ. ಬಿಜೆಪಿ ಇಂತಹ ಪ್ರಕರಣಗಳನ್ನು ಬೆಂಬಲಿಸುತ್ತದೆ, ಆದರೆ ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬಿಜೆಪಿ ನೇತೃತ್ವದ ಎನ್‌ಡಿಎ ದೇಶದಲ್ಲಿ ಆಡಳಿತ ನಡೆಸುತ್ತಿರುವುದರಿಂದ ವಿವಿಧ ಅಪರಾಧಗಳಿಗೆ ಇತರ ಪಕ್ಷಗಳನ್ನು ದೂಷಿಸುವ ಬದಲು, ಎಸ್‌ಸಿ, ಎಸ್‌ಟಿ ಮತ್ತು ಬಿಸಿಗಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮೋದಿ ಕ್ರಮಕೈಗೊಳ್ಳಬೇಕು. ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಮೋದಿ ಕ್ರಮ ಕೈಗೊಳ್ಳಲಿ ಎಂದು ಖರ್ಗೆ ಹೇಳಿದ್ದಾರೆ.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಒಗ್ಗಟ್ಟಿನ ಕರೆಗೆ ಪ್ರತಿಕ್ರಿಯಿಸಿದ ಖರ್ಗೆ, “ಭಾಗವತ್ ಹೇಳುವುದು ಒಂದು, ಆದರೆ ಮಾಡುವುದು ಇನ್ನೊಂದು. ಎಲ್ಲಾ ಭಾರತೀಯರನ್ನು ಒಗ್ಗೂಡಿಸಲು ನಿಜವಾಗಿಯೂ ಬಯಸಿದರೆ ಭಾಗವತ್ ಅವರ ಸಂಘಟನೆ ಬಿಜೆಪಿಯನ್ನು ಏಕೆ ಬೆಂಬಲಿಸುತ್ತಿದೆ?” ಎಂದು ಪ್ರಶ್ನಿಸಿದರು. ಬಿಜೆಪಿ ಭಯೋತ್ಪಾದಕ ಪಕ್ಷ

ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಇತ್ತೀಚಿನ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಕ್ಸಿಟ್‌ ಪೂಲ್‌ಗಳು ಕಾಂಗ್ರೆಸ್ ಪಕ್ಷವು ಆರಾಮವಾಗಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿತ್ತು. ಹರಿಯಾಣದಲ್ಲಿ ಸೋಲನ್ನು ಒಪ್ಪಿಕೊಳ್ಳಲು ಬಿಜೆಪಿ ನಾಯಕರು ಮತ್ತು ಅವರ ಮೈತ್ರಿಕೂಟದ ಪಾಲುದಾರರೂ ಸಿದ್ಧರಾಗಿದ್ದರು ಎಂದು ಖರ್ಗೆ ಹೇಳಿದ್ದಾರೆ.

“ಅಲ್ಲಿ ಏನು ಪವಾಡ ನಡೆದಿದೆಯೋ ಗೊತ್ತಿಲ್ಲ. ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಪಕ್ಷ ಕಾರಣಗಳನ್ನು ವಿಶ್ಲೇಷಿಸುತ್ತಿದೆ. ನಾನು ಹರಿಯಾಣದಾದ್ಯಂತ ಬೂತ್‌ವಾರು ವರದಿ ಕೇಳಿದ್ದೇನೆ. ವರದಿ ಬಂದ ನಂತರವಷ್ಟೇ ನಾನು ಪ್ರತಿಕ್ರಿಯಿಸುತ್ತೇನೆ” ಎಂದು ಖರ್ಗೆ ತಿಳಿಸಿದ್ದಾರೆ.

ಅದಾಗ್ಯೂ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ದಲಿತ ಸಿಎಂ ಬೇಡಿಕೆ ಕುರಿತು ಪ್ರತಿಕ್ರಿಯಿಸಲು ಖರ್ಗೆ ನಿರಾಕರಿಸಿದ್ದಾರೆ.

ವಿಡಿಯೊ ನೋಡಿ: ಬೆಂಗಳೂರಿನ ಕೆಆರ್ ಮಾರ್ಕೆಟ್ ಮೇಲ್ಸೇತುವೆಯಿಂದ ಅಪರಿಚಿತ ವ್ಯಕ್ತಿಯೊಬ್ಬರು ನೋಟುಗಳನ್ನು ಎಸೆಯುತ್ತಿರುವ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...