Homeಕರ್ನಾಟಕಜಗದೀಶ್ ಶೆಟ್ಟರ್‌ಗೆ ಐಟಿ ದಾಳಿಯ ಬೆದರಿಕೆ ಹಾಕಿದ ಬಿಜೆಪಿ: ಕಾಂಗ್ರೆಸ್ ಆರೋಪ

ಜಗದೀಶ್ ಶೆಟ್ಟರ್‌ಗೆ ಐಟಿ ದಾಳಿಯ ಬೆದರಿಕೆ ಹಾಕಿದ ಬಿಜೆಪಿ: ಕಾಂಗ್ರೆಸ್ ಆರೋಪ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಪಕ್ಷದಲ್ಲಿ ಉಳಿಸಿಕೊಳ್ಳಲು ಅವರಿಗೆ ಐಟಿ ದಾಳಿಯ ಬೆದರಿಕೆ ಹಾಕಲಾಗಿತ್ತು ಎಂದು ಕಾಂಗ್ರೆಸ್ ಹೊಸ ಬಾಂಬ್ ಸಿಡಿಸಿದೆ.

ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಅವರು, ”ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಆಶ್ರಯದಲ್ಲಿ ರಾಜಕೀಯ ಆರಂಭಿಸಿದ ಪ್ರಹ್ಲಾದ್ ಜೋಶಿ ತಮ್ಮ ಅಧಿಕಾರದ ದರ್ಪದಿಂದ ಎರಡು ದಿನಗಳ ಹಿಂದೆ ಜಗದೀಶ್ ಶೆಟ್ಟರ್ ಅವರ ಮನವೊಲಿಕೆ ಪ್ರಯತ್ನದ ವೇಳೆ ಐಟಿ ದಾಳಿಯ ಬೆದರಿಕೆ ಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

”ಜಗದೀಶ್ ಶೆಟ್ಟರ್‌ಗೆ ನೀವು ಬಿಜೆಪಿ ತೊರೆದರೆ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಜೋಶಿ ಅವರು ಬೆದರಿಕೆ ಹಾಕಿದ್ದಾರೆ” ಎಂದು ರಮೇಶ್‌ ಬಾಬು ಹೇಳಿದರು.

”ಆದರೆ, ಮೂಲತಃ ಶೆಟ್ಟರ್ ವಕೀಲರಾಗಿದ್ದು, ಅವರು ಜೋಶಿ ಅವರಿಗೆ ‘ನಾನು ವಕೀಲ ನಿಮ್ಮ ಬೆದರಿಕೆಗೆ ಜಗ್ಗುವುದಿಲ್ಲ’ ಎಂದು ಹೇಳಿ ಬಿಜೆಪಿ ಬಿಡುವ ದೃಢ ನಿರ್ಧಾರಕ್ಕೆ ಬಂದರು. ಅವರು ತಮ್ಮ ಸ್ವಾಭಿಮಾನ ಹಾಗೂ ರಾಜಕೀಯ ಇಚ್ಛಾಶಕ್ತಿಗಾಗಿ ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ಸೇರ್ಪಡೆಯಾಗಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ನಿಂದ 4ನೇ ಪಟ್ಟಿ ಬಿಡುಗಡೆ: ಹು-ಧಾ ಸೆಂಟ್ರಲ್‌ನಿಂದ ಶೆಟ್ಟರ್ ಸ್ಪರ್ಧೆ

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ. ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ. ಪ್ರಲ್ಹಾದ್ ಜೋಷಿ ಅವರು ಕೂಡಲೇ ಶೆಟ್ಟರ್ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು” ಎಂದು ಹೇಳಿದೆ.

”ರಾಜ್ಯ ಕಂಡಿರುವ ಕೆಲವೇ ಸಜ್ಜನ ರಾಜಕಾರಣಿಗಳಲ್ಲಿ ಜಗದೀಶ್ ಶೆಟ್ಟರ್ ಒಬ್ಬರು. ಬಹಳ ಪ್ರಾಮಾಣಿಕವಾಗಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ” ಎಂದು ರಮೇಶ್ ಬಾಬು ಹೇಳಿದರು.

ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ರೈಡ್ ಪ್ಲ್ಯಾನ್: ಡಿಕೆಶಿ

ಈ ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ”ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸುತ್ತಿಲ್ಲ. ಜೊತೆಗೆ ನಮ್ಮ ನಾಯಕರ ಜೊತೆಗಿರುವ ಉದ್ದಿಮೆದಾರರನ್ನೂ ಸಹ ಗುರಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

”ಕಾಂಗ್ರೆಸ್ ನಾಯಕರ ಮನೆಗೆ ಬಂದು ಹೋಗುವ ‘ಬ್ಯುಸಿನೆಸ್‌ ಮನ್‌’ಗಳಿಗೆ ಬೆದರಿಕೆ ಹಾಕಲಾಗುತ್ತಿದೆ. ಐಟಿ ಅಧಿಕಾರಿಗಳ ದಾಳಿ ಕುರಿತು ಅವರೆಲ್ಲ ಭಯಬಿದ್ದಿದ್ದಾರೆ. ಆ ಕಾರಣದಿಂದ ಅವರು ನಮ್ಮ ಕರೆಗಳನ್ನೂ ಸ್ವೀಕರಿಸುತ್ತಿಲ್ಲ” ಎಂದು ಹೇಳಿಕೊಂಡಿದ್ದಾರೆ.

”ಐಟಿ ಅಧಿಕಾರಿಗಳು ನಮ್ಮ ಮೇಲಷ್ಟೆ ದಾಳಿ ಮಾಡುತ್ತಿದ್ದಾರೆ ಎಂದರೆ ಬಿಜೆಪಿಯಲ್ಲಿ ಇರುವವರೆಲ್ಲ ಸತ್ಯ ಹರಿಶ್ಚಂದ್ರರೇ? ಇಂತರ ರಾಜಕೀಯ ಪ್ರೇರಿತ ದಾಳಿಗಳನ್ನು ನಾವು ಎದುರಿಸುತ್ತೇವೆ” ಎಂದು  ಹೇಳಿದರು.

ಇದೇ ವೇಳೆ ಶೆಟ್ಟರ್, ಸವದಿ ಕುರಿತು ಮಾತನಾಡಿದ ಅವರು, ”ಈ ಮೊದಲು ನಮ್ಮ ಗುರಿ 140 ಸ್ಥಾನಗಳಾಗಿತ್ತು. ಆದರೆ, ಸವದಿ ಮತ್ತು ಶೆಟ್ಟರ್ ಆಗಮನದಿಂದ ನಾವು 150 ಸ್ಥಾನಗಳನ್ನು  ಗೆಲ್ಲಲಿದ್ದೇವೆ. ಲಿಂಗಾಯತ ಮತ್ತು ವಿರಶೈವ ಮತಗಳು ಈ ಚುನಾವಣೆಯಲ್ಲಿ ನಮಗೆ ಬರುತ್ತವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...