Homeಕರ್ನಾಟಕಜಗದೀಶ್ ಶೆಟ್ಟರ್‌ಗೆ ಐಟಿ ದಾಳಿಯ ಬೆದರಿಕೆ ಹಾಕಿದ ಬಿಜೆಪಿ: ಕಾಂಗ್ರೆಸ್ ಆರೋಪ

ಜಗದೀಶ್ ಶೆಟ್ಟರ್‌ಗೆ ಐಟಿ ದಾಳಿಯ ಬೆದರಿಕೆ ಹಾಕಿದ ಬಿಜೆಪಿ: ಕಾಂಗ್ರೆಸ್ ಆರೋಪ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಪಕ್ಷದಲ್ಲಿ ಉಳಿಸಿಕೊಳ್ಳಲು ಅವರಿಗೆ ಐಟಿ ದಾಳಿಯ ಬೆದರಿಕೆ ಹಾಕಲಾಗಿತ್ತು ಎಂದು ಕಾಂಗ್ರೆಸ್ ಹೊಸ ಬಾಂಬ್ ಸಿಡಿಸಿದೆ.

ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಅವರು, ”ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಆಶ್ರಯದಲ್ಲಿ ರಾಜಕೀಯ ಆರಂಭಿಸಿದ ಪ್ರಹ್ಲಾದ್ ಜೋಶಿ ತಮ್ಮ ಅಧಿಕಾರದ ದರ್ಪದಿಂದ ಎರಡು ದಿನಗಳ ಹಿಂದೆ ಜಗದೀಶ್ ಶೆಟ್ಟರ್ ಅವರ ಮನವೊಲಿಕೆ ಪ್ರಯತ್ನದ ವೇಳೆ ಐಟಿ ದಾಳಿಯ ಬೆದರಿಕೆ ಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

”ಜಗದೀಶ್ ಶೆಟ್ಟರ್‌ಗೆ ನೀವು ಬಿಜೆಪಿ ತೊರೆದರೆ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಜೋಶಿ ಅವರು ಬೆದರಿಕೆ ಹಾಕಿದ್ದಾರೆ” ಎಂದು ರಮೇಶ್‌ ಬಾಬು ಹೇಳಿದರು.

”ಆದರೆ, ಮೂಲತಃ ಶೆಟ್ಟರ್ ವಕೀಲರಾಗಿದ್ದು, ಅವರು ಜೋಶಿ ಅವರಿಗೆ ‘ನಾನು ವಕೀಲ ನಿಮ್ಮ ಬೆದರಿಕೆಗೆ ಜಗ್ಗುವುದಿಲ್ಲ’ ಎಂದು ಹೇಳಿ ಬಿಜೆಪಿ ಬಿಡುವ ದೃಢ ನಿರ್ಧಾರಕ್ಕೆ ಬಂದರು. ಅವರು ತಮ್ಮ ಸ್ವಾಭಿಮಾನ ಹಾಗೂ ರಾಜಕೀಯ ಇಚ್ಛಾಶಕ್ತಿಗಾಗಿ ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ಸೇರ್ಪಡೆಯಾಗಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ನಿಂದ 4ನೇ ಪಟ್ಟಿ ಬಿಡುಗಡೆ: ಹು-ಧಾ ಸೆಂಟ್ರಲ್‌ನಿಂದ ಶೆಟ್ಟರ್ ಸ್ಪರ್ಧೆ

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ. ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ. ಪ್ರಲ್ಹಾದ್ ಜೋಷಿ ಅವರು ಕೂಡಲೇ ಶೆಟ್ಟರ್ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು” ಎಂದು ಹೇಳಿದೆ.

”ರಾಜ್ಯ ಕಂಡಿರುವ ಕೆಲವೇ ಸಜ್ಜನ ರಾಜಕಾರಣಿಗಳಲ್ಲಿ ಜಗದೀಶ್ ಶೆಟ್ಟರ್ ಒಬ್ಬರು. ಬಹಳ ಪ್ರಾಮಾಣಿಕವಾಗಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ” ಎಂದು ರಮೇಶ್ ಬಾಬು ಹೇಳಿದರು.

ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ರೈಡ್ ಪ್ಲ್ಯಾನ್: ಡಿಕೆಶಿ

ಈ ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ”ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸುತ್ತಿಲ್ಲ. ಜೊತೆಗೆ ನಮ್ಮ ನಾಯಕರ ಜೊತೆಗಿರುವ ಉದ್ದಿಮೆದಾರರನ್ನೂ ಸಹ ಗುರಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

”ಕಾಂಗ್ರೆಸ್ ನಾಯಕರ ಮನೆಗೆ ಬಂದು ಹೋಗುವ ‘ಬ್ಯುಸಿನೆಸ್‌ ಮನ್‌’ಗಳಿಗೆ ಬೆದರಿಕೆ ಹಾಕಲಾಗುತ್ತಿದೆ. ಐಟಿ ಅಧಿಕಾರಿಗಳ ದಾಳಿ ಕುರಿತು ಅವರೆಲ್ಲ ಭಯಬಿದ್ದಿದ್ದಾರೆ. ಆ ಕಾರಣದಿಂದ ಅವರು ನಮ್ಮ ಕರೆಗಳನ್ನೂ ಸ್ವೀಕರಿಸುತ್ತಿಲ್ಲ” ಎಂದು ಹೇಳಿಕೊಂಡಿದ್ದಾರೆ.

”ಐಟಿ ಅಧಿಕಾರಿಗಳು ನಮ್ಮ ಮೇಲಷ್ಟೆ ದಾಳಿ ಮಾಡುತ್ತಿದ್ದಾರೆ ಎಂದರೆ ಬಿಜೆಪಿಯಲ್ಲಿ ಇರುವವರೆಲ್ಲ ಸತ್ಯ ಹರಿಶ್ಚಂದ್ರರೇ? ಇಂತರ ರಾಜಕೀಯ ಪ್ರೇರಿತ ದಾಳಿಗಳನ್ನು ನಾವು ಎದುರಿಸುತ್ತೇವೆ” ಎಂದು  ಹೇಳಿದರು.

ಇದೇ ವೇಳೆ ಶೆಟ್ಟರ್, ಸವದಿ ಕುರಿತು ಮಾತನಾಡಿದ ಅವರು, ”ಈ ಮೊದಲು ನಮ್ಮ ಗುರಿ 140 ಸ್ಥಾನಗಳಾಗಿತ್ತು. ಆದರೆ, ಸವದಿ ಮತ್ತು ಶೆಟ್ಟರ್ ಆಗಮನದಿಂದ ನಾವು 150 ಸ್ಥಾನಗಳನ್ನು  ಗೆಲ್ಲಲಿದ್ದೇವೆ. ಲಿಂಗಾಯತ ಮತ್ತು ವಿರಶೈವ ಮತಗಳು ಈ ಚುನಾವಣೆಯಲ್ಲಿ ನಮಗೆ ಬರುತ್ತವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...