Homeಕರ್ನಾಟಕಹಿಜಾಬ್ ನಿಷೇಧದ ಪ್ರತಿಭಟನಾಕಾರರನ್ನು 'ಭಯೋತ್ಪಾದಕರು' ಎಂದವನಿಗೆ ಬಿಜೆಪಿ ಟಿಕೆಟ್

ಹಿಜಾಬ್ ನಿಷೇಧದ ಪ್ರತಿಭಟನಾಕಾರರನ್ನು ‘ಭಯೋತ್ಪಾದಕರು’ ಎಂದವನಿಗೆ ಬಿಜೆಪಿ ಟಿಕೆಟ್

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಮಾಡುವವರನ್ನು ಭಯೋತ್ಪಾದಕರು ಎಂದು ಕರೆದಿದ್ದ ಯಶಪಾಲ್ ಸುವರ್ಣಗೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ.

ಯಶಪಾಲ್ ಸುವರ್ಣ ಅವರು ಉಡುಪಿಯ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಕಳೆದ ವರ್ಷ ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ನಿಲ್ಲಿಸಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ರಾಜ್ಯದ ಇತರ ಭಾಗಗಳಿಗೆ ಹರಡುತ್ತಿದ್ದಂತೆ, ಬಿಜೆಪಿ ಸರ್ಕಾರವು ”ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ” ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿತು.

ಪ್ರತಿಭಟನೆಯ ಸಂದರ್ಭದಲ್ಲಿ, ಸರ್ಕಾರದ ಹಿಜಾಬ್ ನಿಷೇಧ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಆರು ವಿದ್ಯಾರ್ಥಿನಿಯರು ”ಭಯೋತ್ಪಾದಕರು” ಎಂದು ಸುವರ್ಣ ಹೇಳಿದ್ದರು. ಮಂಗಳವಾರ ಈ ಬಗ್ಗೆ ಮಾತನಾಡಿದ ಅವರು, ದೇಶದ ಕಾನೂನನ್ನು ಪಾಲಿಸದವರು ದೇಶವಿರೋಧಿಗಳು ಎಂಬುದಕ್ಕೆ ಈಗಲೂ ಅದೇ ಧೋರಣೆ ಇದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಯಶಪಾಲ್ ಸುವರ್ಣ ಅವರು ಹಿಂದುತ್ವದ ಸೈದ್ಧಾಂತಿಕ ಕುಟುಂಬದಿಂದ ಬಂದಿದ್ದಾರೆ. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಚಿತ್ತಾಪುರ: ಗಡಿಪಾರಾಗಿದ್ದ ರೌಡಿಶೀಟರ್‌ ಮಣಿಕಂಠಗೆ ಬಿಜೆಪಿ ಟಿಕೆಟ್

ಸುವರ್ಣ ಅವರು ಹಿಂದುತ್ವ ಸಂಘಟನೆಯಾದ ಬಜರಂಗದಳಕ್ಕೆ ಸೇರುವ ಮೊದಲು ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸದಸ್ಯರಾಗಿದ್ದರು. 2005ರಲ್ಲಿ ಕರುಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ತಂದೆಮಗನನ್ನು ಬಜರಂಗದಳದವರು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದರು. ಆ ಪ್ರಕರಣದಲ್ಲಿ ಈ ಸುವರ್ಣ ಕೂಡ ಒಬ್ಬ ಆರೋಪಿಯಾಗಿದ್ದನು.

ಬಿಜೆಪಿ ಮಂಗಳವಾರ ಪ್ರಕಟಿಸಿರುವ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾವುದೇ ಮುಸ್ಲಿಮರ ಹೆಸರಿಲ್ಲ. ಹಾಲಿ ಶಾಸಕ ರಘಪತಿ ಭಟ್ ಅವರನ್ನು ಕೈಬಿಟ್ಟು, ಮುಸ್ಲಿಂ ವಿದ್ಯಾರ್ಥಿನಿಯರನ್ನು ಭಯೋತ್ಪಾದಕರು ಎಂದು ಹೇಳಿದ್ದ ಸುವರ್ಣಗೆ ಟಿಕೆಟ್ ನೀಡಿದೆ.

ಕರ್ನಾಟಕ ಹಿಜಾಬ್ ನಿಷೇಧ
ಕಳೆದ ವರ್ಷ ಜನವರಿಯಲ್ಲಿ ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಗುಂಪೊಂದು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸದಂತೆ ತಡೆದ ನಂತರ ವಿವಾದಕ್ಕೆ ಕಾರಣವಾಗಿತ್ತು.

ಈ ವಿಚಾರ ರಾಜ್ಯದ್ಯಾಂತ ದೊಡ್ಡ ವಿವಾದವನ್ನೇ ಹುಟ್ಟುಹಾಕಿತು. ವಿದ್ಯಾರ್ಥಿಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ಫೆಬ್ರವರಿ 5ರಂದು, ಕರ್ನಾಟಕ ಸರ್ಕಾರವು ”ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ” ಬಟ್ಟೆಗಳನ್ನು ನಿಷೇಧಿಸುವ ಆದೇಶವನ್ನು ಜಾರಿಗೊಳಿಸಿತು.

ಸರ್ಕಾರದ ಈ ಆದೇಶದ ವಿರುದ್ಧ ಉಡುಪಿ ಕಾಲೇಜಿನ ಆರು ವಿದ್ಯಾರ್ಥಿನಿಯರು ಹೈಕೋರ್ಟ್‌ ಮೆಟ್ಟಿಲೇರಿದರು. ಆದರೆ ಹೈಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿಯಿತು. ಹಿಜಾಬ್ ಧರಿಸುವುದು ಇಸ್ಲಾಂಗೆ ಅನಿವಾರ್ಯವಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿತು.

ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು, ಅಲ್ಲಿ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಹೇಮಂತ್ ಗುಪ್ತಾ ಅವರ ದ್ವಿಸದಸ್ಯ ಪೀಠವು ಅಕ್ಟೋಬರ್‌ನಲ್ಲಿ ಈ ವಿಷಯದ ಕುರಿತು ದ್ವಂದ್ವ ತೀರ್ಪು ನೀಡಿತು. ಮುಂದಿನ ಕ್ರಮದ ಕುರಿತು ಅವರ ನಿರ್ದೇಶನಕ್ಕಾಗಿ ವಿಷಯವನ್ನು ಮುಖ್ಯ ನ್ಯಾಯಾಧೀಶರ ಮುಂದೆ ಇಡಲಾಗುವುದು ಎಂದು ನ್ಯಾಯಾಧೀಶರು ಹೇಳಿದರು. ಈ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಇನ್ನೂ ಪೀಠವನ್ನು ರಚಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...