Homeಕರ್ನಾಟಕಹಿಜಾಬ್ ನಿಷೇಧದ ಪ್ರತಿಭಟನಾಕಾರರನ್ನು 'ಭಯೋತ್ಪಾದಕರು' ಎಂದವನಿಗೆ ಬಿಜೆಪಿ ಟಿಕೆಟ್

ಹಿಜಾಬ್ ನಿಷೇಧದ ಪ್ರತಿಭಟನಾಕಾರರನ್ನು ‘ಭಯೋತ್ಪಾದಕರು’ ಎಂದವನಿಗೆ ಬಿಜೆಪಿ ಟಿಕೆಟ್

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಮಾಡುವವರನ್ನು ಭಯೋತ್ಪಾದಕರು ಎಂದು ಕರೆದಿದ್ದ ಯಶಪಾಲ್ ಸುವರ್ಣಗೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ.

ಯಶಪಾಲ್ ಸುವರ್ಣ ಅವರು ಉಡುಪಿಯ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಕಳೆದ ವರ್ಷ ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ನಿಲ್ಲಿಸಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ರಾಜ್ಯದ ಇತರ ಭಾಗಗಳಿಗೆ ಹರಡುತ್ತಿದ್ದಂತೆ, ಬಿಜೆಪಿ ಸರ್ಕಾರವು ”ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ” ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿತು.

ಪ್ರತಿಭಟನೆಯ ಸಂದರ್ಭದಲ್ಲಿ, ಸರ್ಕಾರದ ಹಿಜಾಬ್ ನಿಷೇಧ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಆರು ವಿದ್ಯಾರ್ಥಿನಿಯರು ”ಭಯೋತ್ಪಾದಕರು” ಎಂದು ಸುವರ್ಣ ಹೇಳಿದ್ದರು. ಮಂಗಳವಾರ ಈ ಬಗ್ಗೆ ಮಾತನಾಡಿದ ಅವರು, ದೇಶದ ಕಾನೂನನ್ನು ಪಾಲಿಸದವರು ದೇಶವಿರೋಧಿಗಳು ಎಂಬುದಕ್ಕೆ ಈಗಲೂ ಅದೇ ಧೋರಣೆ ಇದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಯಶಪಾಲ್ ಸುವರ್ಣ ಅವರು ಹಿಂದುತ್ವದ ಸೈದ್ಧಾಂತಿಕ ಕುಟುಂಬದಿಂದ ಬಂದಿದ್ದಾರೆ. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಚಿತ್ತಾಪುರ: ಗಡಿಪಾರಾಗಿದ್ದ ರೌಡಿಶೀಟರ್‌ ಮಣಿಕಂಠಗೆ ಬಿಜೆಪಿ ಟಿಕೆಟ್

ಸುವರ್ಣ ಅವರು ಹಿಂದುತ್ವ ಸಂಘಟನೆಯಾದ ಬಜರಂಗದಳಕ್ಕೆ ಸೇರುವ ಮೊದಲು ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸದಸ್ಯರಾಗಿದ್ದರು. 2005ರಲ್ಲಿ ಕರುಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ತಂದೆಮಗನನ್ನು ಬಜರಂಗದಳದವರು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದರು. ಆ ಪ್ರಕರಣದಲ್ಲಿ ಈ ಸುವರ್ಣ ಕೂಡ ಒಬ್ಬ ಆರೋಪಿಯಾಗಿದ್ದನು.

ಬಿಜೆಪಿ ಮಂಗಳವಾರ ಪ್ರಕಟಿಸಿರುವ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾವುದೇ ಮುಸ್ಲಿಮರ ಹೆಸರಿಲ್ಲ. ಹಾಲಿ ಶಾಸಕ ರಘಪತಿ ಭಟ್ ಅವರನ್ನು ಕೈಬಿಟ್ಟು, ಮುಸ್ಲಿಂ ವಿದ್ಯಾರ್ಥಿನಿಯರನ್ನು ಭಯೋತ್ಪಾದಕರು ಎಂದು ಹೇಳಿದ್ದ ಸುವರ್ಣಗೆ ಟಿಕೆಟ್ ನೀಡಿದೆ.

ಕರ್ನಾಟಕ ಹಿಜಾಬ್ ನಿಷೇಧ
ಕಳೆದ ವರ್ಷ ಜನವರಿಯಲ್ಲಿ ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಗುಂಪೊಂದು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸದಂತೆ ತಡೆದ ನಂತರ ವಿವಾದಕ್ಕೆ ಕಾರಣವಾಗಿತ್ತು.

ಈ ವಿಚಾರ ರಾಜ್ಯದ್ಯಾಂತ ದೊಡ್ಡ ವಿವಾದವನ್ನೇ ಹುಟ್ಟುಹಾಕಿತು. ವಿದ್ಯಾರ್ಥಿಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ಫೆಬ್ರವರಿ 5ರಂದು, ಕರ್ನಾಟಕ ಸರ್ಕಾರವು ”ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ” ಬಟ್ಟೆಗಳನ್ನು ನಿಷೇಧಿಸುವ ಆದೇಶವನ್ನು ಜಾರಿಗೊಳಿಸಿತು.

ಸರ್ಕಾರದ ಈ ಆದೇಶದ ವಿರುದ್ಧ ಉಡುಪಿ ಕಾಲೇಜಿನ ಆರು ವಿದ್ಯಾರ್ಥಿನಿಯರು ಹೈಕೋರ್ಟ್‌ ಮೆಟ್ಟಿಲೇರಿದರು. ಆದರೆ ಹೈಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿಯಿತು. ಹಿಜಾಬ್ ಧರಿಸುವುದು ಇಸ್ಲಾಂಗೆ ಅನಿವಾರ್ಯವಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿತು.

ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು, ಅಲ್ಲಿ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಹೇಮಂತ್ ಗುಪ್ತಾ ಅವರ ದ್ವಿಸದಸ್ಯ ಪೀಠವು ಅಕ್ಟೋಬರ್‌ನಲ್ಲಿ ಈ ವಿಷಯದ ಕುರಿತು ದ್ವಂದ್ವ ತೀರ್ಪು ನೀಡಿತು. ಮುಂದಿನ ಕ್ರಮದ ಕುರಿತು ಅವರ ನಿರ್ದೇಶನಕ್ಕಾಗಿ ವಿಷಯವನ್ನು ಮುಖ್ಯ ನ್ಯಾಯಾಧೀಶರ ಮುಂದೆ ಇಡಲಾಗುವುದು ಎಂದು ನ್ಯಾಯಾಧೀಶರು ಹೇಳಿದರು. ಈ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಇನ್ನೂ ಪೀಠವನ್ನು ರಚಿಸಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...