Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಉತ್ತಮ ಸಂಸ್ಕಾರ ಅಥವಾ ಗುಣಗಳನ್ನು ಹೊಂದಿರುವ ಬ್ರಾಹ್ಮಣ ಗಂಡಸರು ಎಂದು ಹೇಳಿದ್ದ ಸಿ.ಕೆ.ರೌಲ್ಜಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೋದ್ರಾ ಕ್ಷೇತ್ರದಿಂದ ಸಿ.ಕೆ.ರೌಲ್ಜಿ ಅವರನ್ನು ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರ್ಚ್ 3, 2002ರಂದು ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಆ ಸಮಯದಲ್ಲಿ 19 ವರ್ಷದವರಾಗಿದ್ದ ಬಿಲ್ಕಿಸ್‌ ಗರ್ಭಿಣಿಯಾಗಿದ್ದರು. ಬಿಲ್ಕಿಸ್‌ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಸದಸ್ಯರನ್ನು ಅಹಮದಾಬಾದ್ ಬಳಿ ಗಲಭೆಕೋರರು ಹತ್ಯೆ ಮಾಡಿದ್ದರು. ಒಬ್ಬ ವ್ಯಕ್ತಿಯಂತೂ ತನ್ನ ತಾಯಿಯ ತೋಳುಗಳಿಂದ ಮಗುವನ್ನು ಕಿತ್ತುಕೊಂಡು ಆ ಮಗುವಿನ ತಲೆಯನ್ನು ಬಂಡೆಯ ಮೇಲೆ ಬಡಿದಿದ್ದನು. ಇಂಥವರನ್ನು ಸಂಸ್ಕಾರಿ ಬ್ರಾಹ್ಮಣರೆಂದು ಕರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿತ್ತು. ಸನ್ನಡತೆಯ ನೀತಿಯ ಅಡಿಯಲ್ಲಿ ಅಪರಾಧಿಗಳ ಅರ್ಜಿಯನ್ನು ಅನುಮೋದಿಸಿದ ನಂತರ ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತ್ತು.

ಗೋಧ್ರಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ರೌಲ್ಜಿ ಕಳೆದ ಆಗಸ್ಟ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಬಿಲ್ಕಿಸ್‌ ಪ್ರಕರಣದ ಅಪರಾಧಿಗಳು ಒಳ್ಳೆಯವರು ಎಂದು ತಿಳಿಸಿದ್ದರು.

“ಅವರು ಅಪರಾಧ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ನನಗೆ ತಿಳಿದಿಲ್ಲ…” ಎಂದು ರೌಲ್ಜಿ ಸಂದರ್ಶನವೊಂದರಲ್ಲಿ ಹೇಳಿದ್ದರು. “ಜೈಲಿನಲ್ಲಿ ಅವರ ನಡತೆ ಚೆನ್ನಾಗಿತ್ತು, ಅವರು ಬ್ರಾಹ್ಮಣರು… ಉತ್ತಮ ಸಂಸ್ಕಾರ [ಮೌಲ್ಯಗಳು] ಹೊಂದಿದವರು” ಎಂದು ಶ್ಲಾಘಿಸಿದ್ದರು.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಅಡಿಯಲ್ಲಿ ಗುಜರಾತ್ ಸರ್ಕಾರ ರಚಿಸಿದ್ದ ಗೋಧ್ರಾ ಜೈಲು ಸಲಹಾ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಮಾಡಲಾಗಿದೆ. ಕೋಮುಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಹೆಚ್ಚಾಗಿ ಗುರಿಯಾಗಿಸಲಾಗುತ್ತದೆ ಎಂದು ಸಮಿತಿಯ ಭಾಗವಾಗಿದ್ದ ರೌಲ್ಜಿ ಹೇಳಿದ್ದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯೊಂದಿಗೆ ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...