Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಉತ್ತಮ ಸಂಸ್ಕಾರ ಅಥವಾ ಗುಣಗಳನ್ನು ಹೊಂದಿರುವ ಬ್ರಾಹ್ಮಣ ಗಂಡಸರು ಎಂದು ಹೇಳಿದ್ದ ಸಿ.ಕೆ.ರೌಲ್ಜಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೋದ್ರಾ ಕ್ಷೇತ್ರದಿಂದ ಸಿ.ಕೆ.ರೌಲ್ಜಿ ಅವರನ್ನು ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರ್ಚ್ 3, 2002ರಂದು ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಆ ಸಮಯದಲ್ಲಿ 19 ವರ್ಷದವರಾಗಿದ್ದ ಬಿಲ್ಕಿಸ್‌ ಗರ್ಭಿಣಿಯಾಗಿದ್ದರು. ಬಿಲ್ಕಿಸ್‌ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಸದಸ್ಯರನ್ನು ಅಹಮದಾಬಾದ್ ಬಳಿ ಗಲಭೆಕೋರರು ಹತ್ಯೆ ಮಾಡಿದ್ದರು. ಒಬ್ಬ ವ್ಯಕ್ತಿಯಂತೂ ತನ್ನ ತಾಯಿಯ ತೋಳುಗಳಿಂದ ಮಗುವನ್ನು ಕಿತ್ತುಕೊಂಡು ಆ ಮಗುವಿನ ತಲೆಯನ್ನು ಬಂಡೆಯ ಮೇಲೆ ಬಡಿದಿದ್ದನು. ಇಂಥವರನ್ನು ಸಂಸ್ಕಾರಿ ಬ್ರಾಹ್ಮಣರೆಂದು ಕರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿತ್ತು. ಸನ್ನಡತೆಯ ನೀತಿಯ ಅಡಿಯಲ್ಲಿ ಅಪರಾಧಿಗಳ ಅರ್ಜಿಯನ್ನು ಅನುಮೋದಿಸಿದ ನಂತರ ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತ್ತು.

ಗೋಧ್ರಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ರೌಲ್ಜಿ ಕಳೆದ ಆಗಸ್ಟ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಬಿಲ್ಕಿಸ್‌ ಪ್ರಕರಣದ ಅಪರಾಧಿಗಳು ಒಳ್ಳೆಯವರು ಎಂದು ತಿಳಿಸಿದ್ದರು.

“ಅವರು ಅಪರಾಧ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ನನಗೆ ತಿಳಿದಿಲ್ಲ…” ಎಂದು ರೌಲ್ಜಿ ಸಂದರ್ಶನವೊಂದರಲ್ಲಿ ಹೇಳಿದ್ದರು. “ಜೈಲಿನಲ್ಲಿ ಅವರ ನಡತೆ ಚೆನ್ನಾಗಿತ್ತು, ಅವರು ಬ್ರಾಹ್ಮಣರು… ಉತ್ತಮ ಸಂಸ್ಕಾರ [ಮೌಲ್ಯಗಳು] ಹೊಂದಿದವರು” ಎಂದು ಶ್ಲಾಘಿಸಿದ್ದರು.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಅಡಿಯಲ್ಲಿ ಗುಜರಾತ್ ಸರ್ಕಾರ ರಚಿಸಿದ್ದ ಗೋಧ್ರಾ ಜೈಲು ಸಲಹಾ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಮಾಡಲಾಗಿದೆ. ಕೋಮುಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಹೆಚ್ಚಾಗಿ ಗುರಿಯಾಗಿಸಲಾಗುತ್ತದೆ ಎಂದು ಸಮಿತಿಯ ಭಾಗವಾಗಿದ್ದ ರೌಲ್ಜಿ ಹೇಳಿದ್ದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯೊಂದಿಗೆ ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...