Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಉತ್ತಮ ಸಂಸ್ಕಾರ ಅಥವಾ ಗುಣಗಳನ್ನು ಹೊಂದಿರುವ ಬ್ರಾಹ್ಮಣ ಗಂಡಸರು ಎಂದು ಹೇಳಿದ್ದ ಸಿ.ಕೆ.ರೌಲ್ಜಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೋದ್ರಾ ಕ್ಷೇತ್ರದಿಂದ ಸಿ.ಕೆ.ರೌಲ್ಜಿ ಅವರನ್ನು ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರ್ಚ್ 3, 2002ರಂದು ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಆ ಸಮಯದಲ್ಲಿ 19 ವರ್ಷದವರಾಗಿದ್ದ ಬಿಲ್ಕಿಸ್‌ ಗರ್ಭಿಣಿಯಾಗಿದ್ದರು. ಬಿಲ್ಕಿಸ್‌ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಸದಸ್ಯರನ್ನು ಅಹಮದಾಬಾದ್ ಬಳಿ ಗಲಭೆಕೋರರು ಹತ್ಯೆ ಮಾಡಿದ್ದರು. ಒಬ್ಬ ವ್ಯಕ್ತಿಯಂತೂ ತನ್ನ ತಾಯಿಯ ತೋಳುಗಳಿಂದ ಮಗುವನ್ನು ಕಿತ್ತುಕೊಂಡು ಆ ಮಗುವಿನ ತಲೆಯನ್ನು ಬಂಡೆಯ ಮೇಲೆ ಬಡಿದಿದ್ದನು. ಇಂಥವರನ್ನು ಸಂಸ್ಕಾರಿ ಬ್ರಾಹ್ಮಣರೆಂದು ಕರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿತ್ತು. ಸನ್ನಡತೆಯ ನೀತಿಯ ಅಡಿಯಲ್ಲಿ ಅಪರಾಧಿಗಳ ಅರ್ಜಿಯನ್ನು ಅನುಮೋದಿಸಿದ ನಂತರ ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತ್ತು.

ಗೋಧ್ರಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ರೌಲ್ಜಿ ಕಳೆದ ಆಗಸ್ಟ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಬಿಲ್ಕಿಸ್‌ ಪ್ರಕರಣದ ಅಪರಾಧಿಗಳು ಒಳ್ಳೆಯವರು ಎಂದು ತಿಳಿಸಿದ್ದರು.

“ಅವರು ಅಪರಾಧ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ನನಗೆ ತಿಳಿದಿಲ್ಲ…” ಎಂದು ರೌಲ್ಜಿ ಸಂದರ್ಶನವೊಂದರಲ್ಲಿ ಹೇಳಿದ್ದರು. “ಜೈಲಿನಲ್ಲಿ ಅವರ ನಡತೆ ಚೆನ್ನಾಗಿತ್ತು, ಅವರು ಬ್ರಾಹ್ಮಣರು… ಉತ್ತಮ ಸಂಸ್ಕಾರ [ಮೌಲ್ಯಗಳು] ಹೊಂದಿದವರು” ಎಂದು ಶ್ಲಾಘಿಸಿದ್ದರು.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಅಡಿಯಲ್ಲಿ ಗುಜರಾತ್ ಸರ್ಕಾರ ರಚಿಸಿದ್ದ ಗೋಧ್ರಾ ಜೈಲು ಸಲಹಾ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಮಾಡಲಾಗಿದೆ. ಕೋಮುಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಹೆಚ್ಚಾಗಿ ಗುರಿಯಾಗಿಸಲಾಗುತ್ತದೆ ಎಂದು ಸಮಿತಿಯ ಭಾಗವಾಗಿದ್ದ ರೌಲ್ಜಿ ಹೇಳಿದ್ದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯೊಂದಿಗೆ ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...